<p><strong>ಯಾದಗಿರಿ</strong>: ನಗರದ ಗಂಜ್ ಮೌನೇಶ್ವರ ದೇವಸ್ತಾನದ ಹತ್ತಿರದ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ವಸತಿನಿಲಯದ ವಾರ್ಡನ್ ಮೇಲೆ ಶೀಘ್ರ ಕ್ರಮ ಕೈಗೊಳ್ಳಲು ಆಗ್ರಹಿಸಿ ನಮ್ಮ ಕರುನಾಡು ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಪಂಚಾಯಿತಿ ಎದುರುಗಡೆ ಪ್ರತಿಭಟನೆ ನಡೆಸಿದರು.</p>.<p>ವಾರ್ಡನ್ ಮೆನು ಪ್ರಕಾರ ಊಟ ನೀಡುತ್ತಿಲ್ಲ, ಪ್ರಶ್ನಿಸಿದರೆ ಅವಾಚ್ಯವಾಗಿ ಬೈಯುತ್ತಾರೆ, ವಿದ್ಯಾರ್ಥಿಗಳಲ್ಲೆ ಜಗಳಕ್ಕೆ ಉತ್ತೇಜನ ನೀಡುತ್ತಿರುವ ಕುರಿತು ಈ ಮೊದಲು ಪ್ರತಿಭಟನೆ ನಡೆಸಿದಾಗ 3 ದಿನಗಳಲ್ಲಿ ಅವರನ್ನು ಅಮಾನತು ಮಾಡುವ ಭರವಸೆ ನೀಡಲಾಗಿತ್ತು. ಆದರೆ, ಈವರೆಗೂ ಕ್ರಮಕೈಗೊಂಡಿಲ್ಲ. ಕೂಡಲೆ ಕ್ರಮ ಕೈಗೊಳ್ಳಬೇಕು, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ರವಿ ಮುದ್ನಾಳ ಆಗ್ರಹಿಸಿದರು.</p>.<p>ಶಂಕರ ಕಾಳಬೆಳಗುಂದಿ, ಗೋವಿಂದ ಚವ್ಹಾಣ, ನಿರಂಜನ ಎಸ್.ಕೆ., ಮಶೆಪ್ಪ ನಾಯಕ, ಕರಣ ಪವಾರ, ರೆಡ್ಡಿ ನಾರಾಯಣ, ವಿಜಯ, ಖುದ್ದೂಸ ಶಾಂತಿನಗರ, ವಿದ್ಯಾರ್ಥಿಗಳಾದ ಪ್ರೇಮಕುಮಾರ, ತೇಜು, ಗೋವಿಂದ, ಆನಂದ, ಅನೀಲ, ಮಲ್ಲೇಶ, ಮಾಳಪ್ಪ, ಕುಮಾರ, ಭೀಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ನಗರದ ಗಂಜ್ ಮೌನೇಶ್ವರ ದೇವಸ್ತಾನದ ಹತ್ತಿರದ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ವಸತಿನಿಲಯದ ವಾರ್ಡನ್ ಮೇಲೆ ಶೀಘ್ರ ಕ್ರಮ ಕೈಗೊಳ್ಳಲು ಆಗ್ರಹಿಸಿ ನಮ್ಮ ಕರುನಾಡು ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಪಂಚಾಯಿತಿ ಎದುರುಗಡೆ ಪ್ರತಿಭಟನೆ ನಡೆಸಿದರು.</p>.<p>ವಾರ್ಡನ್ ಮೆನು ಪ್ರಕಾರ ಊಟ ನೀಡುತ್ತಿಲ್ಲ, ಪ್ರಶ್ನಿಸಿದರೆ ಅವಾಚ್ಯವಾಗಿ ಬೈಯುತ್ತಾರೆ, ವಿದ್ಯಾರ್ಥಿಗಳಲ್ಲೆ ಜಗಳಕ್ಕೆ ಉತ್ತೇಜನ ನೀಡುತ್ತಿರುವ ಕುರಿತು ಈ ಮೊದಲು ಪ್ರತಿಭಟನೆ ನಡೆಸಿದಾಗ 3 ದಿನಗಳಲ್ಲಿ ಅವರನ್ನು ಅಮಾನತು ಮಾಡುವ ಭರವಸೆ ನೀಡಲಾಗಿತ್ತು. ಆದರೆ, ಈವರೆಗೂ ಕ್ರಮಕೈಗೊಂಡಿಲ್ಲ. ಕೂಡಲೆ ಕ್ರಮ ಕೈಗೊಳ್ಳಬೇಕು, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ರವಿ ಮುದ್ನಾಳ ಆಗ್ರಹಿಸಿದರು.</p>.<p>ಶಂಕರ ಕಾಳಬೆಳಗುಂದಿ, ಗೋವಿಂದ ಚವ್ಹಾಣ, ನಿರಂಜನ ಎಸ್.ಕೆ., ಮಶೆಪ್ಪ ನಾಯಕ, ಕರಣ ಪವಾರ, ರೆಡ್ಡಿ ನಾರಾಯಣ, ವಿಜಯ, ಖುದ್ದೂಸ ಶಾಂತಿನಗರ, ವಿದ್ಯಾರ್ಥಿಗಳಾದ ಪ್ರೇಮಕುಮಾರ, ತೇಜು, ಗೋವಿಂದ, ಆನಂದ, ಅನೀಲ, ಮಲ್ಲೇಶ, ಮಾಳಪ್ಪ, ಕುಮಾರ, ಭೀಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>