<p><strong>ಶಹಾಪುರ</strong>: ಅಂಗನವಾಡಿ ಕೇಂದ್ರಗಳಿಗೆ ಸರ್ಕಾರ ಪೂರೈಸಿದ್ದ ನಂದಿನಿ ಹಾಲಿನ ಪುಡಿ ಅಕ್ರಮವಾಗಿ ಸಾಗಿಸಿದ ಆರೋಪ ಸಾಬೀತಾದ ಕಾರಣ ನಗರದ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಸಿದ್ದರಾಮ ಟಿ.ಪಿ ಅವರು ಅಗತ್ಯ ವಸ್ತುಗಳ ಕಾಯ್ದೆ ಅಡಿ ಅಪರಾಧಿ, ಉಕ್ಕಿನಾಳ ಗ್ರಾಮದ ಮಶಾಕ ಗುಡುಸಾಬ್ ನದಾಫ್ಗೆ ₹5 ಸಾವಿರ ದಂಡ ಹಾಗೂ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.</p>.<p>2022ರ ಜುಲೈ 17ರಂದು ಮಶಾಕ ತನ್ನ ಕಾರಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ನಂದಿನಿ ಹಾಲಿನ ಪುಡಿಯ 60 ಪಾಕೇಟ್ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ, ಆಗ ಭೀಮರಾಯನಗುಡಿ ಪೊಲೀಸರು ದಾಳಿ ಮಾಡಿ ಹಾಲಿನ ಪುಡಿಯ ಪಾಕೇಟ್ ಹಾಗೂ ಕಾರು ಜಪ್ತಿ ಮಾಡಿದ್ದರು.</p>.<p>ಶಹಾಪುರದ ಅಂದಿನ ಸಿಡಿಪಿಒ ಗುರುರಾಜ ಭೋಗಶೆಟ್ಟಿ ಅವರು ತಾಲ್ಲೂಕಿನ ಮುಡಬೂಳ ಗ್ರಾಮದ ಇಬ್ಬರು ಅಂಗನಾಡಿ ಕಾರ್ಯಕರ್ತೆಯರು, ಹಾಲಿನ ಪುಡಿ ಖರೀದಿಸಿದ ವ್ಯಕ್ತಿ ಸೇರಿ ನಾಲ್ವರ ವಿರುದ್ಧ ದೂರು ನೀಡಿದ್ದರು. ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. </p>.<p>ಮಶಾಕಗೆ ಶಿಕ್ಷೆ ವಿಧಿಸಿ ಉಳಿದ ಮೂವರನ್ನು ಖುಲಾಸೆಗೊಳಿಸಲಾಗಿದೆ.</p>.<p>ಫಿರ್ಯಾದಿದಾರರ ಪರವಾಗಿ ಸರ್ಕಾರಿ ಸಹಾಯಕ ಅಭಿಯೋಜಕ ವೆಂಕೋಬ ದೇಸಾಯಿ ಕಕ್ಕೇರಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ಅಂಗನವಾಡಿ ಕೇಂದ್ರಗಳಿಗೆ ಸರ್ಕಾರ ಪೂರೈಸಿದ್ದ ನಂದಿನಿ ಹಾಲಿನ ಪುಡಿ ಅಕ್ರಮವಾಗಿ ಸಾಗಿಸಿದ ಆರೋಪ ಸಾಬೀತಾದ ಕಾರಣ ನಗರದ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಸಿದ್ದರಾಮ ಟಿ.ಪಿ ಅವರು ಅಗತ್ಯ ವಸ್ತುಗಳ ಕಾಯ್ದೆ ಅಡಿ ಅಪರಾಧಿ, ಉಕ್ಕಿನಾಳ ಗ್ರಾಮದ ಮಶಾಕ ಗುಡುಸಾಬ್ ನದಾಫ್ಗೆ ₹5 ಸಾವಿರ ದಂಡ ಹಾಗೂ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.</p>.<p>2022ರ ಜುಲೈ 17ರಂದು ಮಶಾಕ ತನ್ನ ಕಾರಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ನಂದಿನಿ ಹಾಲಿನ ಪುಡಿಯ 60 ಪಾಕೇಟ್ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ, ಆಗ ಭೀಮರಾಯನಗುಡಿ ಪೊಲೀಸರು ದಾಳಿ ಮಾಡಿ ಹಾಲಿನ ಪುಡಿಯ ಪಾಕೇಟ್ ಹಾಗೂ ಕಾರು ಜಪ್ತಿ ಮಾಡಿದ್ದರು.</p>.<p>ಶಹಾಪುರದ ಅಂದಿನ ಸಿಡಿಪಿಒ ಗುರುರಾಜ ಭೋಗಶೆಟ್ಟಿ ಅವರು ತಾಲ್ಲೂಕಿನ ಮುಡಬೂಳ ಗ್ರಾಮದ ಇಬ್ಬರು ಅಂಗನಾಡಿ ಕಾರ್ಯಕರ್ತೆಯರು, ಹಾಲಿನ ಪುಡಿ ಖರೀದಿಸಿದ ವ್ಯಕ್ತಿ ಸೇರಿ ನಾಲ್ವರ ವಿರುದ್ಧ ದೂರು ನೀಡಿದ್ದರು. ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. </p>.<p>ಮಶಾಕಗೆ ಶಿಕ್ಷೆ ವಿಧಿಸಿ ಉಳಿದ ಮೂವರನ್ನು ಖುಲಾಸೆಗೊಳಿಸಲಾಗಿದೆ.</p>.<p>ಫಿರ್ಯಾದಿದಾರರ ಪರವಾಗಿ ಸರ್ಕಾರಿ ಸಹಾಯಕ ಅಭಿಯೋಜಕ ವೆಂಕೋಬ ದೇಸಾಯಿ ಕಕ್ಕೇರಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>