<p><strong>ಯಾದಗಿರಿ:</strong> ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಬಾಲಕ ಬಾಲಕಿಯರು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಪೊಲೀಸರ ಕರ್ತವ್ಯ ಸೇವೆಯಂತಹ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸರೆಡ್ಡಿ ಹೇಳಿದರು.</p>.<p>ಸಾರ್ವಜನಿಕ ಇಲಾಖೆಯ ಸಭಾಭವನದಲ್ಲಿ ಜಿಲ್ಲಾ ಹಾಗೂ ಸ್ಥಳೀಯ ಸ್ಕೌಟ್ಸ್ ಸಂಸ್ಥೆಗಳ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪುಟಾಣಿ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಟ್ರಾಫಿಕ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ ಮಾತನಾಡಿ, ಮಕ್ಕಳಿಗೆ ರಸ್ತೆ ನಿಯಮಗಳ ಅವಶ್ಯಕತೆ ವಿವರಿಸಿದರು. ಹಾಗೂ ವಿದ್ಯಾರ್ಥಿಗಳ ಕರ್ತವ್ಯಗಳನ್ನು ತಿಳಿಸಿದರು.</p>.<p>ಜಿಲ್ಲಾ ಸ್ಕೌಟ್ಸ್ ಕಮಿಷನರ್ ಪ್ರೊ. ಸಿ.ಎಂ.ಪಟ್ಟೇದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ರಾಜ್ಯ ಸಂಸ್ಥೆ ಮಕ್ಕಳಿಗೆ ಕರ್ತವ್ಯ ಹಾಗೂ ಸೇವಾ ಮನೋಭಾವ ಹೆಚ್ಚಿಸಲು ವಿನೂತನವಾದ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪುಟಾಣಿಗಳೆಲ್ಲರೂ ಈ ಕಾರ್ಯಕ್ರಮದ ಬಗ್ಗೆ ತಿಳಿದುಕೊಂಡು ಶಿಸ್ತಿನ ಪೊಲೀಸ್ ಇಲಾಖೆಯಂತೆ ಮುಂಚೂಣಿಯಲ್ಲಿದ್ದು ಸಮಾಜಸೇವೆ ಮಾಡಬೇಕೆಂದು ಕಿವಿ ಮಾತು ಹೇಳಿದರು.</p>.<p>ಕಾರ್ಯಕ್ರಮ ಆಯೋಜಕ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಅಳ್ಳೋಳ್ಳಿ, ರಾಜ್ಯ ಪ್ರತಿನಿಧಿ ಮಲ್ಲಿಕಾರ್ಜುನ ಬಳೆ, ಜಿಲ್ಲಾ ಸಂಘಟಕಿ ನಾಗರತ್ನಾ ಪಾಟೀಲ್, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಬಸರೆಡ್ಡಿ ಮಾಲಿಪಾಟೀಲ್ ಇದ್ದರು.</p>.<p><strong>ಭೇಟಿ:</strong> ಕಾರ್ಯಕ್ರಮ ನಂತರ ಮಾದರಿ ಪ್ರಾಥಮಿಕ ಶಾಲೆ ಸ್ಕೌಟರ್ ಹಣಮಯ್ಯ, ರಾಜೇಶ್ವರಿ ಶಾಲೆಯ ಗಾಲೆಪ್ಪ, ಖಂಡೇಲವಾಲ್ ಶಾಲೆ ಜೋತಿರ್ಲಿಂಗ ಹಾಗೂ ಸ್ಟೆಷನ್ ಬಜಾರ ಶಾಲೆಯ ಬಾಲಕ ಬಾಲಕಿಯರಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಕರೆದೊಯ್ದು ಕಚೇರಿ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಬಾಲಕ ಬಾಲಕಿಯರು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಪೊಲೀಸರ ಕರ್ತವ್ಯ ಸೇವೆಯಂತಹ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸರೆಡ್ಡಿ ಹೇಳಿದರು.</p>.<p>ಸಾರ್ವಜನಿಕ ಇಲಾಖೆಯ ಸಭಾಭವನದಲ್ಲಿ ಜಿಲ್ಲಾ ಹಾಗೂ ಸ್ಥಳೀಯ ಸ್ಕೌಟ್ಸ್ ಸಂಸ್ಥೆಗಳ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪುಟಾಣಿ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಟ್ರಾಫಿಕ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ ಮಾತನಾಡಿ, ಮಕ್ಕಳಿಗೆ ರಸ್ತೆ ನಿಯಮಗಳ ಅವಶ್ಯಕತೆ ವಿವರಿಸಿದರು. ಹಾಗೂ ವಿದ್ಯಾರ್ಥಿಗಳ ಕರ್ತವ್ಯಗಳನ್ನು ತಿಳಿಸಿದರು.</p>.<p>ಜಿಲ್ಲಾ ಸ್ಕೌಟ್ಸ್ ಕಮಿಷನರ್ ಪ್ರೊ. ಸಿ.ಎಂ.ಪಟ್ಟೇದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ರಾಜ್ಯ ಸಂಸ್ಥೆ ಮಕ್ಕಳಿಗೆ ಕರ್ತವ್ಯ ಹಾಗೂ ಸೇವಾ ಮನೋಭಾವ ಹೆಚ್ಚಿಸಲು ವಿನೂತನವಾದ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪುಟಾಣಿಗಳೆಲ್ಲರೂ ಈ ಕಾರ್ಯಕ್ರಮದ ಬಗ್ಗೆ ತಿಳಿದುಕೊಂಡು ಶಿಸ್ತಿನ ಪೊಲೀಸ್ ಇಲಾಖೆಯಂತೆ ಮುಂಚೂಣಿಯಲ್ಲಿದ್ದು ಸಮಾಜಸೇವೆ ಮಾಡಬೇಕೆಂದು ಕಿವಿ ಮಾತು ಹೇಳಿದರು.</p>.<p>ಕಾರ್ಯಕ್ರಮ ಆಯೋಜಕ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಅಳ್ಳೋಳ್ಳಿ, ರಾಜ್ಯ ಪ್ರತಿನಿಧಿ ಮಲ್ಲಿಕಾರ್ಜುನ ಬಳೆ, ಜಿಲ್ಲಾ ಸಂಘಟಕಿ ನಾಗರತ್ನಾ ಪಾಟೀಲ್, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಬಸರೆಡ್ಡಿ ಮಾಲಿಪಾಟೀಲ್ ಇದ್ದರು.</p>.<p><strong>ಭೇಟಿ:</strong> ಕಾರ್ಯಕ್ರಮ ನಂತರ ಮಾದರಿ ಪ್ರಾಥಮಿಕ ಶಾಲೆ ಸ್ಕೌಟರ್ ಹಣಮಯ್ಯ, ರಾಜೇಶ್ವರಿ ಶಾಲೆಯ ಗಾಲೆಪ್ಪ, ಖಂಡೇಲವಾಲ್ ಶಾಲೆ ಜೋತಿರ್ಲಿಂಗ ಹಾಗೂ ಸ್ಟೆಷನ್ ಬಜಾರ ಶಾಲೆಯ ಬಾಲಕ ಬಾಲಕಿಯರಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಕರೆದೊಯ್ದು ಕಚೇರಿ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>