<p><strong>ನಾರಾಯಣಪುರ: ಸ್ಥ</strong>ಳೀಯ ರಾಘವೇಂದ್ರಸ್ವಾಮಿ ಮಠದಲ್ಲಿ ಮಂಗಳವಾರ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ನಾರಾಯಣಪುರ ಗ್ರಾಮದ ನರಸಿಂಹ ಆಚಾರ್ಯ ಕೊಳ್ಳಿ ಅವರ ಮನೆಯಿಂದ ಬೆಳಿಗ್ಗೆ 6 ಗಂಟೆಗೆ ಸಂಕೀರ್ತನೆ ಮಾಡುವ ಮೂಲಕ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಮಹಿಳೆಯರು ಮನೆಯಂಗಳವನ್ನು ರಂಗೋಲಿಯಿಂದ ಅಲಂಕರಿಸಿದ್ದರು. ರಾಯರ ಭಾವಚಿತ್ರವನ್ನು ಆರತಿ ಮಾಡುವುದರೊಂದಿಗೆ ಬರಮಾಡಿಕೊಂಡರು. ನಂತರ ಅಷ್ಟೋತ್ತರ, ಪಾರಾಯಣ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಪುಷ್ಪಗಳಿಂದ ಅಂಲಕೃತಗೊಂಡಿದ್ದ ಯತಿದ್ವಯರ ಬೃಂದಾವನಗಳಿಗೆ ಪಂಚಾಮೃತ ಅಭಿಷೇಕ,ನೈವೈದ್ಯ ಹಾಗೂ ಮಹಾ ಮಂಗಳಾರುತಿ ನೆರವೇರಿತು. </p>.<p> ಮಠದ ಅರ್ಚಕ ರಾಘವೇಂದ್ರ ಜೋಶಿ ಮಾರಲಬಾವಿ ಮಾತನಾಡಿ, ಆರಾಧನೆ ಮಹೋತ್ಸವದ ಅಂಗವಾಗಿ ಬುಧವಾರ ಮಧ್ಯಾಹ್ನ 1.30 ಗಂಟೆಗೆ ಮಠದಲ್ಲಿ ಪಲ್ಲಕ್ಕಿ ಉತ್ಸವ ಸೇರಿದಂತೆ ರಾಯರ ರಥೋತ್ಸವ ಜರುಗಲಿದೆ ಎಂದರು. ಈ ಸಂದರ್ಭದಲ್ಲಿ ಗುರುರಾಜ ಭಜನಾ ಮಂಡಳಿ, ಛಾಯಾ ಭಗವತಿ ಭಜನಾ ಮಂಡಳಿ ಸದಸ್ಯರು ಭಜನೆಯನ್ನು ನಡೆಸಿಕೊಟ್ಟರು. ನಾರಾಯಣಪುರ, ರೋಡಲಬಂಡಾ, ಬರದೇವನಾಳ, ಕೊಡೇಕಲ್ಲ, ಹುಣಸಗಿ, ಕಾಮನಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ: ಸ್ಥ</strong>ಳೀಯ ರಾಘವೇಂದ್ರಸ್ವಾಮಿ ಮಠದಲ್ಲಿ ಮಂಗಳವಾರ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ನಾರಾಯಣಪುರ ಗ್ರಾಮದ ನರಸಿಂಹ ಆಚಾರ್ಯ ಕೊಳ್ಳಿ ಅವರ ಮನೆಯಿಂದ ಬೆಳಿಗ್ಗೆ 6 ಗಂಟೆಗೆ ಸಂಕೀರ್ತನೆ ಮಾಡುವ ಮೂಲಕ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಮಹಿಳೆಯರು ಮನೆಯಂಗಳವನ್ನು ರಂಗೋಲಿಯಿಂದ ಅಲಂಕರಿಸಿದ್ದರು. ರಾಯರ ಭಾವಚಿತ್ರವನ್ನು ಆರತಿ ಮಾಡುವುದರೊಂದಿಗೆ ಬರಮಾಡಿಕೊಂಡರು. ನಂತರ ಅಷ್ಟೋತ್ತರ, ಪಾರಾಯಣ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಪುಷ್ಪಗಳಿಂದ ಅಂಲಕೃತಗೊಂಡಿದ್ದ ಯತಿದ್ವಯರ ಬೃಂದಾವನಗಳಿಗೆ ಪಂಚಾಮೃತ ಅಭಿಷೇಕ,ನೈವೈದ್ಯ ಹಾಗೂ ಮಹಾ ಮಂಗಳಾರುತಿ ನೆರವೇರಿತು. </p>.<p> ಮಠದ ಅರ್ಚಕ ರಾಘವೇಂದ್ರ ಜೋಶಿ ಮಾರಲಬಾವಿ ಮಾತನಾಡಿ, ಆರಾಧನೆ ಮಹೋತ್ಸವದ ಅಂಗವಾಗಿ ಬುಧವಾರ ಮಧ್ಯಾಹ್ನ 1.30 ಗಂಟೆಗೆ ಮಠದಲ್ಲಿ ಪಲ್ಲಕ್ಕಿ ಉತ್ಸವ ಸೇರಿದಂತೆ ರಾಯರ ರಥೋತ್ಸವ ಜರುಗಲಿದೆ ಎಂದರು. ಈ ಸಂದರ್ಭದಲ್ಲಿ ಗುರುರಾಜ ಭಜನಾ ಮಂಡಳಿ, ಛಾಯಾ ಭಗವತಿ ಭಜನಾ ಮಂಡಳಿ ಸದಸ್ಯರು ಭಜನೆಯನ್ನು ನಡೆಸಿಕೊಟ್ಟರು. ನಾರಾಯಣಪುರ, ರೋಡಲಬಂಡಾ, ಬರದೇವನಾಳ, ಕೊಡೇಕಲ್ಲ, ಹುಣಸಗಿ, ಕಾಮನಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>