<p><strong>ಯಾದಗಿರಿ: </strong>ಲಾಕ್ಡೌನ್ನಿಂದಾಗಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ 15 ಕೇರಳ ಶಿಕ್ಷಕರು, ವಿದ್ಯಾರ್ಥಿಗಳನ್ನುಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆರವಿನಿಂದ ಕೇರಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲೆಯಿಂದ ಹೊರಟರು.</p>.<p>ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ವಿದ್ಯಾರ್ಥಿಗಳು ಲಾಕ್ಡೌನ್ ಸಂದರ್ಭದಲ್ಲಿನಗರದ ಚಿರಂಜೀವಿನಗರದಲ್ಲಿ ವಾಸವಾಗಿದ್ದರು. ಆದರೆ, ಶಾಲೆಗಳು ಪುನಾರಂಭಕ್ಕೆ ಸಾಕಷ್ಟು ಸಮಯ ಇರುವುದರಿಂದ ತಮ್ಮ ತವರೂ ಕೇರಳಕ್ಕೆ ತೆರಳಲು ರಾಹುಲ್ ಗಾಂಧಿ ಅವರಿಗೆ ಇ–ಮೇಲ್ ಮೂಲಕ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ರಾಯಚೂರಿನ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಅವರಿಗೆ ಗಾಂಧಿ ತಿಳಿಸಿದ್ದಾರೆ. ಈ ಮೂಲಕ ಅವರು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಕೇರಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ.</p>.<p>‘ಅದರಂತೆ ಮಂಗಳವಾರ ಸಂಜೆ 7 ಗಂಟೆಗೆ 15 ಜನರನ್ನು<strong>ಥರ್ಮಲ್ ಸ್ಯಾನಿಂಗ್ ಮಾಡಿ ಬಸ್ ಮೂಲಕ</strong>ಕೇರಳದ ಕೊಲ್ಲಂ ಜಿಲ್ಲೆಗೆ ಕಳುಹಿಸಿಕೊಡಲಾಯಿತು’ ಎಂದು ಕೋವಿಡ್ ನೋಡಲ್ ಅಧಿಕಾರಿ ರಘುವೀರ್ ಸಿಂಗ್ ಠಾಕೂರ್ ತಿಳಿಸಿದರು.ಈ ವೇಳೆ ಎಸ್ಡಿಸಿ ಸಾಯಿಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಲಾಕ್ಡೌನ್ನಿಂದಾಗಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ 15 ಕೇರಳ ಶಿಕ್ಷಕರು, ವಿದ್ಯಾರ್ಥಿಗಳನ್ನುಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆರವಿನಿಂದ ಕೇರಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲೆಯಿಂದ ಹೊರಟರು.</p>.<p>ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ವಿದ್ಯಾರ್ಥಿಗಳು ಲಾಕ್ಡೌನ್ ಸಂದರ್ಭದಲ್ಲಿನಗರದ ಚಿರಂಜೀವಿನಗರದಲ್ಲಿ ವಾಸವಾಗಿದ್ದರು. ಆದರೆ, ಶಾಲೆಗಳು ಪುನಾರಂಭಕ್ಕೆ ಸಾಕಷ್ಟು ಸಮಯ ಇರುವುದರಿಂದ ತಮ್ಮ ತವರೂ ಕೇರಳಕ್ಕೆ ತೆರಳಲು ರಾಹುಲ್ ಗಾಂಧಿ ಅವರಿಗೆ ಇ–ಮೇಲ್ ಮೂಲಕ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ರಾಯಚೂರಿನ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಅವರಿಗೆ ಗಾಂಧಿ ತಿಳಿಸಿದ್ದಾರೆ. ಈ ಮೂಲಕ ಅವರು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಕೇರಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ.</p>.<p>‘ಅದರಂತೆ ಮಂಗಳವಾರ ಸಂಜೆ 7 ಗಂಟೆಗೆ 15 ಜನರನ್ನು<strong>ಥರ್ಮಲ್ ಸ್ಯಾನಿಂಗ್ ಮಾಡಿ ಬಸ್ ಮೂಲಕ</strong>ಕೇರಳದ ಕೊಲ್ಲಂ ಜಿಲ್ಲೆಗೆ ಕಳುಹಿಸಿಕೊಡಲಾಯಿತು’ ಎಂದು ಕೋವಿಡ್ ನೋಡಲ್ ಅಧಿಕಾರಿ ರಘುವೀರ್ ಸಿಂಗ್ ಠಾಕೂರ್ ತಿಳಿಸಿದರು.ಈ ವೇಳೆ ಎಸ್ಡಿಸಿ ಸಾಯಿಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>