ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ವಿದ್ಯಾರ್ಥಿಗಳು ಲಾಕ್ಡೌನ್ ಸಂದರ್ಭದಲ್ಲಿನಗರದ ಚಿರಂಜೀವಿನಗರದಲ್ಲಿ ವಾಸವಾಗಿದ್ದರು. ಆದರೆ, ಶಾಲೆಗಳು ಪುನಾರಂಭಕ್ಕೆ ಸಾಕಷ್ಟು ಸಮಯ ಇರುವುದರಿಂದ ತಮ್ಮ ತವರೂ ಕೇರಳಕ್ಕೆ ತೆರಳಲು ರಾಹುಲ್ ಗಾಂಧಿ ಅವರಿಗೆ ಇ–ಮೇಲ್ ಮೂಲಕ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ರಾಯಚೂರಿನ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಅವರಿಗೆ ಗಾಂಧಿ ತಿಳಿಸಿದ್ದಾರೆ. ಈ ಮೂಲಕ ಅವರು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಕೇರಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ.