<p>ವಡಗೇರಾ: ‘ಬಿಸಿಲಿನ ಪ್ರಮಾಣ ಹೆಚ್ಚಿರುವುದರಿಂದ ಕೆಲಸದಲ್ಲಿ ಶೇ 30ರಷ್ಟು ರಿಯಾಯಿತಿ ನೀಡಲಾಗಿದೆ’ ಎಂದು ವಡಗೇರಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹೀರೆಮಠ ಹೇಳಿದರು</p>.<p>ತಾಲ್ಲೂಕಿನ ಬಿಳ್ಹಾರ ಗ್ರಾಮದ ಹೋರವಲದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡ ಹಳ್ಳದ ನಾಲ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.</p>.<p>‘ಕೆಲಸದ ಅವಧಿಯಲ್ಲಿ ಬಾಯಾರಿಕೆ ಆಗದಿದ್ದರು ಆಗಾಗ ನೀರು ಕುಡಿಯಬೇಕು. ಬಿಸಿಲಿನ ಪ್ರಖರತೆ ಹೆಚ್ಚಾದಾಗ ವಿಶ್ರಾಂತಿ ಮಾಡಿ ಪುನಃ ಕೆಲಸ ಮಾಡಿ’ ಎಂದರು.</p>.<p>‘ನರೇಗಾದಲ್ಲಿ ಕ್ರೀಯಾ ಯೋಜನೆ ರೂಪಿಸಿ ನರೇಗಾ ಕಾರ್ಮಿಕರಿಂದರಿಂದ ಹಳ್ಳದ ನಾಲ ಹೂಳೆತ್ತುವ ಮೂಲಕ ನೀರಿನ ಅಂತರ್ಜಲ ಶಕ್ತಿ ಹೆಚ್ಚಿಸುವುದರ ಜತೆಗೆ, ನರೇಗಾ ಕಾರ್ಮಿಕರಿಗೆ ನಿರಂತರ ಉದ್ಯೋಗ ಖಾತ್ರಿ ಕೆಲಸ ಒದಗಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಮಳೆಗಾಲದಲ್ಲಿ ಹಳ್ಳದ ನಾಲ ನೀರು ಅಕ್ಕ-ಪಕ್ಕದ ಜಮೀನಿಗಳಿಗೆ ನುಗ್ಗಿ ರೈತರ ಬೆಳೆ ಹಾನಿಯಾಗುತ್ತವೆ. ಇದನ್ನು ತಪ್ಪಿಸಲು ಹಳ್ಳದಲ್ಲಿ ಹೂಳೆತ್ತುವ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು</p>.<p>‘ಬೇಸಿಗೆಯ ಈ ಅವಧಿಯಲ್ಲಿ ಗ್ರಾಮೀಣ ಭಾಗದ ಜನರು ಗೂಳೆ ಹೋಗದೆ ಇದ್ದ ಊರಲ್ಲೆ ಮನರೇಗಾ ಕೆಲಸ ಮಾಡಿ ಕುಟುಂಬದ ಜತೆ ನೆಮ್ಮದಿಯ ಜೀವನವನ್ನು ನಡೆಸಬೇಕು. ಕೆಲಸದ ಸ್ಥಳದಲ್ಲಿ ಕಾರ್ಮಿಕರು ಎನ್ಎಂಎಂಎಸ್ ಆನ್ಲೈನ್ ಹಾಜರಾತಿ ದಿನದಲ್ಲಿ ಎರಡು ಬಾರಿ ಹಾಕಬೇಕು’ ಎಂದರು.</p>.<p>ನಂತರ ಬಿಳ್ಹಾರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆ ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ತ್ವರಿತವಾಗಿ ಗ್ರಾಮಸ್ಥರ ಸಮಸ್ಯೆ ಪರಿಹರಿಸಲು ತಿಳಿಸಿದರು.</p>.<p>ಟಿಸಿ ರವೀಂದ್ರ ದೇಸಾಯಿ, ಟಿಐಸಿ ದುರ್ಗೇಶ, ಲೆಕ್ಕಸಹಾಯಕ ಶರಣಬಸವ, ಟಿಎಇ ಮಂಜುನಾಥ ಸೇರಿದಂತೆ ಕೂಲಿ ಕಾರ್ಮಿಕರು ಹಾಗೂ ಇನ್ನಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-30-1119828239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ‘ಬಿಸಿಲಿನ ಪ್ರಮಾಣ ಹೆಚ್ಚಿರುವುದರಿಂದ ಕೆಲಸದಲ್ಲಿ ಶೇ 30ರಷ್ಟು ರಿಯಾಯಿತಿ ನೀಡಲಾಗಿದೆ’ ಎಂದು ವಡಗೇರಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹೀರೆಮಠ ಹೇಳಿದರು</p>.<p>ತಾಲ್ಲೂಕಿನ ಬಿಳ್ಹಾರ ಗ್ರಾಮದ ಹೋರವಲದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡ ಹಳ್ಳದ ನಾಲ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.</p>.<p>‘ಕೆಲಸದ ಅವಧಿಯಲ್ಲಿ ಬಾಯಾರಿಕೆ ಆಗದಿದ್ದರು ಆಗಾಗ ನೀರು ಕುಡಿಯಬೇಕು. ಬಿಸಿಲಿನ ಪ್ರಖರತೆ ಹೆಚ್ಚಾದಾಗ ವಿಶ್ರಾಂತಿ ಮಾಡಿ ಪುನಃ ಕೆಲಸ ಮಾಡಿ’ ಎಂದರು.</p>.<p>‘ನರೇಗಾದಲ್ಲಿ ಕ್ರೀಯಾ ಯೋಜನೆ ರೂಪಿಸಿ ನರೇಗಾ ಕಾರ್ಮಿಕರಿಂದರಿಂದ ಹಳ್ಳದ ನಾಲ ಹೂಳೆತ್ತುವ ಮೂಲಕ ನೀರಿನ ಅಂತರ್ಜಲ ಶಕ್ತಿ ಹೆಚ್ಚಿಸುವುದರ ಜತೆಗೆ, ನರೇಗಾ ಕಾರ್ಮಿಕರಿಗೆ ನಿರಂತರ ಉದ್ಯೋಗ ಖಾತ್ರಿ ಕೆಲಸ ಒದಗಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಮಳೆಗಾಲದಲ್ಲಿ ಹಳ್ಳದ ನಾಲ ನೀರು ಅಕ್ಕ-ಪಕ್ಕದ ಜಮೀನಿಗಳಿಗೆ ನುಗ್ಗಿ ರೈತರ ಬೆಳೆ ಹಾನಿಯಾಗುತ್ತವೆ. ಇದನ್ನು ತಪ್ಪಿಸಲು ಹಳ್ಳದಲ್ಲಿ ಹೂಳೆತ್ತುವ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು</p>.<p>‘ಬೇಸಿಗೆಯ ಈ ಅವಧಿಯಲ್ಲಿ ಗ್ರಾಮೀಣ ಭಾಗದ ಜನರು ಗೂಳೆ ಹೋಗದೆ ಇದ್ದ ಊರಲ್ಲೆ ಮನರೇಗಾ ಕೆಲಸ ಮಾಡಿ ಕುಟುಂಬದ ಜತೆ ನೆಮ್ಮದಿಯ ಜೀವನವನ್ನು ನಡೆಸಬೇಕು. ಕೆಲಸದ ಸ್ಥಳದಲ್ಲಿ ಕಾರ್ಮಿಕರು ಎನ್ಎಂಎಂಎಸ್ ಆನ್ಲೈನ್ ಹಾಜರಾತಿ ದಿನದಲ್ಲಿ ಎರಡು ಬಾರಿ ಹಾಕಬೇಕು’ ಎಂದರು.</p>.<p>ನಂತರ ಬಿಳ್ಹಾರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆ ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ತ್ವರಿತವಾಗಿ ಗ್ರಾಮಸ್ಥರ ಸಮಸ್ಯೆ ಪರಿಹರಿಸಲು ತಿಳಿಸಿದರು.</p>.<p>ಟಿಸಿ ರವೀಂದ್ರ ದೇಸಾಯಿ, ಟಿಐಸಿ ದುರ್ಗೇಶ, ಲೆಕ್ಕಸಹಾಯಕ ಶರಣಬಸವ, ಟಿಎಇ ಮಂಜುನಾಥ ಸೇರಿದಂತೆ ಕೂಲಿ ಕಾರ್ಮಿಕರು ಹಾಗೂ ಇನ್ನಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-30-1119828239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>