<p><strong>ಯಾದಗಿರಿ</strong>: ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಓಡಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಹೊಸ ರೈಲು ಗಾಡಿಯನ್ನು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮೂಲಕ ಓಡಿಸಬೇಕು ಎಂದು ಸಾಮಾಜಿಕ ಹೋರಾಟಗಾರರು ಆಗ್ರಹಿಸಿದರು.</p>.<p>ನಗರದ ಚಿತ್ತಾಪೂರ ರಸ್ತೆಯಲ್ಲಿ ಇರುವ ಆಂಜನೇಯ ದೇವಸ್ಥಾನ ಆವರಣದಲ್ಲಿ ಗುರುವಾರ ಸಭೆ ನಡೆಸಿದ ಹೋರಾಟಗಾರರು, ಭಿತ್ತ ಪತ್ರ ಹಿಡಿದು ಒತ್ತಾಯಿಸಿದರು. </p>.<p>ದಶಕಗಳಿಂದ ಬೆಂಗಳೂರು ಮತ್ತು ಮುಂಬೈ ನಡುವೆ ಉದ್ಯಾನ್ ಎಕ್ಸ್ಪ್ರೆಸ್ ಸಂಚರಿಸುತ್ತಿದ್ದು, ಪ್ರಯಾಣಕ್ಕೆ 24 ಗಂಟೆಗೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ಇದರಿಂದ ಅನಿವಾರ್ಯವಾಗಿ ಬಸ್ ಅಥವಾ ವಿಮಾನಗಳನ್ನು ಬಳಸುವಂತಹ ಅನಿವಾರ್ಯವಿದೆ. ಈ ಎರಡೂ ಮಹಾನಗರಗಳ ನಡುವೆ ಹೆಚ್ಚುವರಿ ರೈಲು ಓಡಿಸುವ ಬಹುದಿನಗಳಿಂದ ಆಗ್ರಹಿಸುತ್ತಿದ್ದೇವೆ ಎಂದು ಉಮೇಶ ಕೆ. ಮುದ್ನಾಳ ಹೇಳಿದ್ದಾರೆ.</p>.<p>ಬೆಂಗಳೂರು- ಮುಂಬೈ ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಸಾಧ್ಯತೆಗಳು ಕಂಡುಬರುತ್ತಿವೆ. ಹುಬ್ಬಳ್ಳಿ ಮಾರ್ಗವಾಗಿ ಈಗಾಗಲೇ 3–4 ರೈಲುಗಳು ಚಲಿಸುತ್ತಿವೆ. ಆ ಮಾರ್ಗದ ಬದಲು ಕಲ್ಯಾಣ ಕರ್ನಾಟಕದ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಮಾರ್ಗವಾಗಿ ಈ ರೈಲು ಓಡಿಸಬೇಕು. ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ನಮ್ಮ ಭಾಗಕ್ಕೆ ಆದ್ಯತೆ ನೀಡಬೇಕು ಎಂದಿದ್ದಾರೆ.</p>.<p>ಸಭೆಯಲ್ಲಿ ಪ್ರಮುಖರಾದ ದೊಡ್ಡಯ್ಯಸ್ವಾಮಿ, ನಾಗರಡ್ಡಿ ಮಾಲಿ ಪಾಟೀಲ, ನಾನಾಗೌಡ ಪಾಟೀಲ, ಚಂದ್ರಶೇಖರ ತಂಬಾಕೆ, ನಾಗೇಂದ್ರ ಭೀಮನಹಳ್ಳಿ, ರಾಮು ರಾಠೋಡ, ಪವನ, ಸಾಬಣ್ಣ ಸಲೀಂ, ಪರ್ಸರ್, ಜಮಾಲ್, ಶರಣಪ್ಪ, ರಿಯಾಜ್, ಬನ್ನಪ್ಪ, ರವಿ, ಸಾಬಣ್ಣ, ಬಸಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಓಡಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಹೊಸ ರೈಲು ಗಾಡಿಯನ್ನು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮೂಲಕ ಓಡಿಸಬೇಕು ಎಂದು ಸಾಮಾಜಿಕ ಹೋರಾಟಗಾರರು ಆಗ್ರಹಿಸಿದರು.</p>.<p>ನಗರದ ಚಿತ್ತಾಪೂರ ರಸ್ತೆಯಲ್ಲಿ ಇರುವ ಆಂಜನೇಯ ದೇವಸ್ಥಾನ ಆವರಣದಲ್ಲಿ ಗುರುವಾರ ಸಭೆ ನಡೆಸಿದ ಹೋರಾಟಗಾರರು, ಭಿತ್ತ ಪತ್ರ ಹಿಡಿದು ಒತ್ತಾಯಿಸಿದರು. </p>.<p>ದಶಕಗಳಿಂದ ಬೆಂಗಳೂರು ಮತ್ತು ಮುಂಬೈ ನಡುವೆ ಉದ್ಯಾನ್ ಎಕ್ಸ್ಪ್ರೆಸ್ ಸಂಚರಿಸುತ್ತಿದ್ದು, ಪ್ರಯಾಣಕ್ಕೆ 24 ಗಂಟೆಗೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ಇದರಿಂದ ಅನಿವಾರ್ಯವಾಗಿ ಬಸ್ ಅಥವಾ ವಿಮಾನಗಳನ್ನು ಬಳಸುವಂತಹ ಅನಿವಾರ್ಯವಿದೆ. ಈ ಎರಡೂ ಮಹಾನಗರಗಳ ನಡುವೆ ಹೆಚ್ಚುವರಿ ರೈಲು ಓಡಿಸುವ ಬಹುದಿನಗಳಿಂದ ಆಗ್ರಹಿಸುತ್ತಿದ್ದೇವೆ ಎಂದು ಉಮೇಶ ಕೆ. ಮುದ್ನಾಳ ಹೇಳಿದ್ದಾರೆ.</p>.<p>ಬೆಂಗಳೂರು- ಮುಂಬೈ ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಸಾಧ್ಯತೆಗಳು ಕಂಡುಬರುತ್ತಿವೆ. ಹುಬ್ಬಳ್ಳಿ ಮಾರ್ಗವಾಗಿ ಈಗಾಗಲೇ 3–4 ರೈಲುಗಳು ಚಲಿಸುತ್ತಿವೆ. ಆ ಮಾರ್ಗದ ಬದಲು ಕಲ್ಯಾಣ ಕರ್ನಾಟಕದ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಮಾರ್ಗವಾಗಿ ಈ ರೈಲು ಓಡಿಸಬೇಕು. ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ನಮ್ಮ ಭಾಗಕ್ಕೆ ಆದ್ಯತೆ ನೀಡಬೇಕು ಎಂದಿದ್ದಾರೆ.</p>.<p>ಸಭೆಯಲ್ಲಿ ಪ್ರಮುಖರಾದ ದೊಡ್ಡಯ್ಯಸ್ವಾಮಿ, ನಾಗರಡ್ಡಿ ಮಾಲಿ ಪಾಟೀಲ, ನಾನಾಗೌಡ ಪಾಟೀಲ, ಚಂದ್ರಶೇಖರ ತಂಬಾಕೆ, ನಾಗೇಂದ್ರ ಭೀಮನಹಳ್ಳಿ, ರಾಮು ರಾಠೋಡ, ಪವನ, ಸಾಬಣ್ಣ ಸಲೀಂ, ಪರ್ಸರ್, ಜಮಾಲ್, ಶರಣಪ್ಪ, ರಿಯಾಜ್, ಬನ್ನಪ್ಪ, ರವಿ, ಸಾಬಣ್ಣ, ಬಸಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>