<p><strong>ಯಾದಗಿರಿ</strong>: ಜಿಲ್ಲೆಯ ವಿವಿಧೆಡೆ ಬುಧವಾರ ಬೆಳಗಿನ ಜಾವ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಹರ್ಷ ವ್ಯಕ್ತವಾಗಿದೆ.</p><p>ಬಿಸಿಲಿನಿಂದ ಬಸವಳಿದ ಜನತೆಗೆ ಕಳೆದ ಎರಡು ದಿನಗಳಿಂದ ಮಳೆ ಸಿಂಚನದಿಂದ ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಆಗಿದೆ.</p><p>ಎರಡು ದಿನವೂ ಮಧ್ಯರಾತ್ರಿಯಲ್ಲಿ ಮಳೆಯಾಗುತ್ತಿದ್ದು, ಮತ್ತೆ ಬೆಳಿಗ್ಗೆ ಯಥಾಸ್ಥಿತಿ ವಾತಾವರಣ ಇರುತ್ತದೆ. ಇದರಿಂದ ಮಳೆ ಬಂದರೂ ದಿನ ನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗುತ್ತಿಲ್ಲ.</p><p>ಕಳೆದ ವರ್ಷ ಮುಂಗಾರು, ಹಿಂಗಾರು ಮಳೆ ಕೊರತೆಯಿಂದ ಭೀಕರ ಬರ ಎದುರಾಗಿದ್ದು, ಈ ಬಾರಿ ಸುರಿಯುವ ಮಳೆಯಿಂದ ರೈತರಿಗೆ ಕೊಂಚ ನೆಮ್ಮದಿ ಸಿಕ್ಕಂತೆ ಆಗಿದೆ.</p><p>ಜಿಲ್ಲೆಯ ಶಹಾಪುರ, ಸುರಪುರದಲ್ಲಿ ಉತ್ತಮ ಮಳೆಯಾಗಿದ್ದು, ಯರಗೋಳ ಗ್ರಾಮದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದೆ. ಹುಣಸಗಿ, ಕೆಂಭಾವಿಯಲ್ಲಿ ಸ್ವಲ್ಪ ಮಳೆಯಾಗಿದೆ. ನಾರಾಯಣಪುರ, ಸೈದಾಪುರದಲ್ಲಿ ಮೋಡ ಕವಿದ ವಾತಾವರಣ ಇದೆ. </p><p>ವಡಗೇರ ತಾಲ್ಲೂಕು ವ್ಯಾಪ್ತಿಯ ಬಿರನಾಳ, ಬಬಲಾದ, ಗಡ್ಡೆಸೂಗುರ, ಹಾಲಗೇರಾದಲ್ಲಿ ಉತ್ತಮ ಮಳೆಯಾಗಿ, ಜಮೀನುಗಳಲ್ಲಿ ನೀರು ನಿಂತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲೆಯ ವಿವಿಧೆಡೆ ಬುಧವಾರ ಬೆಳಗಿನ ಜಾವ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಹರ್ಷ ವ್ಯಕ್ತವಾಗಿದೆ.</p><p>ಬಿಸಿಲಿನಿಂದ ಬಸವಳಿದ ಜನತೆಗೆ ಕಳೆದ ಎರಡು ದಿನಗಳಿಂದ ಮಳೆ ಸಿಂಚನದಿಂದ ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಆಗಿದೆ.</p><p>ಎರಡು ದಿನವೂ ಮಧ್ಯರಾತ್ರಿಯಲ್ಲಿ ಮಳೆಯಾಗುತ್ತಿದ್ದು, ಮತ್ತೆ ಬೆಳಿಗ್ಗೆ ಯಥಾಸ್ಥಿತಿ ವಾತಾವರಣ ಇರುತ್ತದೆ. ಇದರಿಂದ ಮಳೆ ಬಂದರೂ ದಿನ ನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗುತ್ತಿಲ್ಲ.</p><p>ಕಳೆದ ವರ್ಷ ಮುಂಗಾರು, ಹಿಂಗಾರು ಮಳೆ ಕೊರತೆಯಿಂದ ಭೀಕರ ಬರ ಎದುರಾಗಿದ್ದು, ಈ ಬಾರಿ ಸುರಿಯುವ ಮಳೆಯಿಂದ ರೈತರಿಗೆ ಕೊಂಚ ನೆಮ್ಮದಿ ಸಿಕ್ಕಂತೆ ಆಗಿದೆ.</p><p>ಜಿಲ್ಲೆಯ ಶಹಾಪುರ, ಸುರಪುರದಲ್ಲಿ ಉತ್ತಮ ಮಳೆಯಾಗಿದ್ದು, ಯರಗೋಳ ಗ್ರಾಮದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದೆ. ಹುಣಸಗಿ, ಕೆಂಭಾವಿಯಲ್ಲಿ ಸ್ವಲ್ಪ ಮಳೆಯಾಗಿದೆ. ನಾರಾಯಣಪುರ, ಸೈದಾಪುರದಲ್ಲಿ ಮೋಡ ಕವಿದ ವಾತಾವರಣ ಇದೆ. </p><p>ವಡಗೇರ ತಾಲ್ಲೂಕು ವ್ಯಾಪ್ತಿಯ ಬಿರನಾಳ, ಬಬಲಾದ, ಗಡ್ಡೆಸೂಗುರ, ಹಾಲಗೇರಾದಲ್ಲಿ ಉತ್ತಮ ಮಳೆಯಾಗಿ, ಜಮೀನುಗಳಲ್ಲಿ ನೀರು ನಿಂತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>