ಯಾದಗಿರಿ: ಒಂದು ತಿಂಗಳಿಂದ ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಜಿಲ್ಲೆಯ ಜನರಿಗೆ ಮಂಗಳವಾರ ರಾತ್ರಿ ಸುರಿದ ಮಳೆ ತಂಪೆರೆಯಿತು. ಹುಣಸಗಿ, ಗುರುಮಠಕಲ್, ವಡಗೇರಾ, ಶಹಾಪುರ ತಾಲ್ಲೂಕಿನ ಹಲವೆಡೆ ಸಾಧಾರಣ ಮಳೆಯಾಗಿದೆ. ಯಾದಗಿರಿ ನಗರದಲ್ಲಿ ಮಧ್ಯರಾತ್ರಿ ಆರಂಭಗೊಂಡ ಮಳೆ ನಸುಕಿನವರೆಗೂ ಸುರಿದು ನಾಗರಿಕರನ್ನು ನಿರಾಳವಾಗಿಸಿದೆ.