<p><strong>ಯಾದಗಿರಿ:</strong> ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಜಿಟಿಜಿಟಿ ಮಳೆ ಸುರಿಯುತ್ತಿದೆ.</p>.<p>ನಗರದಲ್ಲಿ ಬೆಳಿಗ್ಗೆ 8:30 ರಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಇನ್ನೂ ಜಿಲ್ಲೆಯ ವಿವಿಧೆಡೆ ಮಳೆ ಸುರಿಯುತ್ತಿದೆ.</p>.<p>ತಾಲ್ಲೂಕಿನ ಸೈದಾಪುರ ವಲಯದಲ್ಲಿ ಧಾರಾಕಾರ ಮಳೆಯಾಗಿದೆ. ನಾರಾಯಣಪುರ, ಹುಣಸಗಿ, ಶಹಾಪುರ, ಸುರಪುರ, ಗುರುಮಠಕಲ್ ಕಡೆ ಮಳೆಯಾಗುತ್ತಿದೆ.</p>.<p>ಜನಜೀವನ ಅಸ್ತವ್ಯಸ್ತ: ಜಿಟಿಜಿಟಿ ಮಳೆಯಿಂದ ಜನಜೀವನ ಅಸ್ತವಸ್ತವಾಗಿದೆ. ಬಡಾವಣೆಯ ರಸ್ತೆಗಳು ಕೆಸರುಮಯವಾಗಿವೆ.</p>.<p><strong>ಭೀಮಾ ನದಿಗೆ ನೀರು:</strong><br />ನಗರದ ಹೊರವಲಯದ ಗುರುಸುಣಗಿ ಬ್ರಿಜ್ ಕಂ ಬ್ಯಾರೇಜ್ ನಿಂದ ಭೀಮಾ ನದಿಗೆ 9 ಗೇಟುಗಳ ಮೂಲಕ ನೀರು ಹರಿಸಲಾಗುತ್ತಿದೆ. 20,000 ಕ್ಯುಸೆಕ್ ಒಳಹರಿವಿದ್ದರೆ, 25,000 ಕ್ಯುಸೆಕ್ ಹೊರಹರಿವಿದೆ. ಇದರಿಂದ ಭೀಮಾ ಸೇತುವೆ ಬಳಿ ಇರುವ ಕಂಗಳೇಶ್ವರ ದೇವಸ್ಥಾನ, ವೀರಾಂಜನೇಯ ದೇವಸ್ಥಾನ ಮುಳುಗಡೆಯಾಗಿವೆ.</p>.<p>ಇನ್ನೂ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ 20,000 ಸಾವಿರ ಕ್ಯುಸೆಕ್ ಒಳಹರಿವು ಇದ್ದು, ಕೃಷ್ಣಾ ನದಿಗೆ 17,480 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಜಿಟಿಜಿಟಿ ಮಳೆ ಸುರಿಯುತ್ತಿದೆ.</p>.<p>ನಗರದಲ್ಲಿ ಬೆಳಿಗ್ಗೆ 8:30 ರಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಇನ್ನೂ ಜಿಲ್ಲೆಯ ವಿವಿಧೆಡೆ ಮಳೆ ಸುರಿಯುತ್ತಿದೆ.</p>.<p>ತಾಲ್ಲೂಕಿನ ಸೈದಾಪುರ ವಲಯದಲ್ಲಿ ಧಾರಾಕಾರ ಮಳೆಯಾಗಿದೆ. ನಾರಾಯಣಪುರ, ಹುಣಸಗಿ, ಶಹಾಪುರ, ಸುರಪುರ, ಗುರುಮಠಕಲ್ ಕಡೆ ಮಳೆಯಾಗುತ್ತಿದೆ.</p>.<p>ಜನಜೀವನ ಅಸ್ತವ್ಯಸ್ತ: ಜಿಟಿಜಿಟಿ ಮಳೆಯಿಂದ ಜನಜೀವನ ಅಸ್ತವಸ್ತವಾಗಿದೆ. ಬಡಾವಣೆಯ ರಸ್ತೆಗಳು ಕೆಸರುಮಯವಾಗಿವೆ.</p>.<p><strong>ಭೀಮಾ ನದಿಗೆ ನೀರು:</strong><br />ನಗರದ ಹೊರವಲಯದ ಗುರುಸುಣಗಿ ಬ್ರಿಜ್ ಕಂ ಬ್ಯಾರೇಜ್ ನಿಂದ ಭೀಮಾ ನದಿಗೆ 9 ಗೇಟುಗಳ ಮೂಲಕ ನೀರು ಹರಿಸಲಾಗುತ್ತಿದೆ. 20,000 ಕ್ಯುಸೆಕ್ ಒಳಹರಿವಿದ್ದರೆ, 25,000 ಕ್ಯುಸೆಕ್ ಹೊರಹರಿವಿದೆ. ಇದರಿಂದ ಭೀಮಾ ಸೇತುವೆ ಬಳಿ ಇರುವ ಕಂಗಳೇಶ್ವರ ದೇವಸ್ಥಾನ, ವೀರಾಂಜನೇಯ ದೇವಸ್ಥಾನ ಮುಳುಗಡೆಯಾಗಿವೆ.</p>.<p>ಇನ್ನೂ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ 20,000 ಸಾವಿರ ಕ್ಯುಸೆಕ್ ಒಳಹರಿವು ಇದ್ದು, ಕೃಷ್ಣಾ ನದಿಗೆ 17,480 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>