<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಸೋಮವಾರ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಿದೆ. ನಗರ ಸೇರಿದಂತೆ ವಿವಿಧ ಕಡೆ ಮಳೆಯಾಗಿದ್ದು, ವಾತಾವರಣ ತಂಪಿನಿಂದ ಕೂಡಿತ್ತು. ನಗರದಲ್ಲಿ ಸೋಮವಾರ ಬೆಳಿಗ್ಗೆಯಿಂದ ಆಗಾಗ ತುಂತುರು ಮಳೆಯಾಯಿತು.</p>.<p>ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಸುರಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಹುಣಸಗಿಯಲ್ಲಿ ಕಡಿಮೆ ಮಳೆಯಾಗಿದೆ.</p>.<p class="Subhead"><strong>ಎಂಎಂ ಮಳೆ ವಿವರ:</strong></p>.<p>ಶಹಾಪುರ ತಾಲ್ಲೂಕಿನಲ್ಲಿ 1.1 ಎಂಎಂ, ಸುರಪುರ ತಾಲ್ಲೂಕಿನಲ್ಲಿ 9.8, ಯಾದಗಿರಿ ತಾಲ್ಲೂಕಿನಲ್ಲಿ 9, ಗುರುಮಠಕಲ್ ತಾಲ್ಲೂಕಿನಲ್ಲಿ 6.6, ವಡಗೇರಾ ತಾಲ್ಲೂಕಿನಲ್ಲಿ 3.8, ಹುಣಸಗಿ ತಾಲ್ಲೂಕಿನಲ್ಲಿ 1.7 ಎಂಎಂ ಮಳೆಯಾಗಿದೆ.</p>.<p class="Subhead"><strong>ಕೃಷಿ ಚಟುವಟಿಕೆ ಚುರುಕು:</strong></p>.<p>ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಬಿತ್ತನೆ ಕಾರ್ಯ ಸಾಗಿದೆ. ಬೀಜ, ರಸಗೊಬ್ಬರ ಖರೀದಿಯಲ್ಲಿ ರೈತರು ತೊಡಗಿಸಿಕೊಂಡಿದ್ದಾರೆ. ಮುಂಗಾರು ಆಶಾದಾಯಕವಾಗಿದ್ದು, ಜಿಲ್ಲೆಯಲ್ಲಿ 3.92 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಸೋಮವಾರ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಿದೆ. ನಗರ ಸೇರಿದಂತೆ ವಿವಿಧ ಕಡೆ ಮಳೆಯಾಗಿದ್ದು, ವಾತಾವರಣ ತಂಪಿನಿಂದ ಕೂಡಿತ್ತು. ನಗರದಲ್ಲಿ ಸೋಮವಾರ ಬೆಳಿಗ್ಗೆಯಿಂದ ಆಗಾಗ ತುಂತುರು ಮಳೆಯಾಯಿತು.</p>.<p>ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಸುರಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಹುಣಸಗಿಯಲ್ಲಿ ಕಡಿಮೆ ಮಳೆಯಾಗಿದೆ.</p>.<p class="Subhead"><strong>ಎಂಎಂ ಮಳೆ ವಿವರ:</strong></p>.<p>ಶಹಾಪುರ ತಾಲ್ಲೂಕಿನಲ್ಲಿ 1.1 ಎಂಎಂ, ಸುರಪುರ ತಾಲ್ಲೂಕಿನಲ್ಲಿ 9.8, ಯಾದಗಿರಿ ತಾಲ್ಲೂಕಿನಲ್ಲಿ 9, ಗುರುಮಠಕಲ್ ತಾಲ್ಲೂಕಿನಲ್ಲಿ 6.6, ವಡಗೇರಾ ತಾಲ್ಲೂಕಿನಲ್ಲಿ 3.8, ಹುಣಸಗಿ ತಾಲ್ಲೂಕಿನಲ್ಲಿ 1.7 ಎಂಎಂ ಮಳೆಯಾಗಿದೆ.</p>.<p class="Subhead"><strong>ಕೃಷಿ ಚಟುವಟಿಕೆ ಚುರುಕು:</strong></p>.<p>ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಬಿತ್ತನೆ ಕಾರ್ಯ ಸಾಗಿದೆ. ಬೀಜ, ರಸಗೊಬ್ಬರ ಖರೀದಿಯಲ್ಲಿ ರೈತರು ತೊಡಗಿಸಿಕೊಂಡಿದ್ದಾರೆ. ಮುಂಗಾರು ಆಶಾದಾಯಕವಾಗಿದ್ದು, ಜಿಲ್ಲೆಯಲ್ಲಿ 3.92 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>