<p><strong>ವಡಗೇರಾ:</strong> ಶುಕ್ರವಾರ ರಾತ್ರಿ ಸುರಿದ ಮಳೆಗೆ ತಾಲ್ಲೂಕಿನ ಗುಲಸರಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಬಲಾದ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ.</p>.<p>ಭಾರಿ ಮಳೆಯಿಂದ ಗ್ರಾಮದ ಪರಿಶಿಷ್ಟ ಸಮುದಾಯದವರ ಬಡಾವಣೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಹೆಚ್ಚಿನ ನೀರು ಹರಿದಾಡಿತು. ಸರ್ಕಾರಿ ಶಾಲೆಯ ಕೋಣೆಗಳಲ್ಲಿ ಮಳೆ ನೀರು ನುಗ್ಗಿದ್ದರಿಂದ ಶನಿವಾರ ಮಕ್ಕಳ ಕಲಿಕೆಗೆ ತೊಂದರೆ ಉಂಟಾಯಿತು.</p>.<p>ಬಬಲಾದ ಗ್ರಾಮದ 15ಕ್ಕೂ ಹೆಚ್ಚು ಮನೆಯೊಳಗೆ ಮಳೆ ನೀರು ನುಗ್ಗಿದ್ದರಿಂದ ಮಹಿಳೆಯರು ನೀರು ಹೊರಹಾಕಲು ಹರಸಾಹಸ ಮಾಡಿದರು.</p>.<p>ಗ್ರಾಮದ ಜಲಾಲಬೀ ಹಾಗೂ ಎಸ್ಸಿ ಬಡಾವಣೆಯ ಮಲ್ಲಪ್ಪ ಕ್ರಾಂತಿ ಅವರ ಮನೆಯಲ್ಲಿನ ಧವಸಧಾನ್ಯ ಹಾಗೂ ಅಗತ್ಯ ವಸ್ತುಗಳು ಹಾನಿಯಾಗಿವೆ.</p>.<p><strong>ತಾಪಂ ಇಒ ಭೇಟಿ:</strong> ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಸಂಗ್ವಾರ ಬಬಲಾದ ಗ್ರಾಮಕ್ಕೆ ಭೇಟಿ ನೀಡಿ ತೊಂದರೆಗೊಳಗಾದ ಕುಟುಂಬಗಳ ಸಮಸ್ಯೆಯನ್ನು ಆಲಿಸಿದರು. ನಂತರ ಸ್ಥಳದಲ್ಲಿದ್ದ ಪಿಡಿಒ ಅವರನ್ನು ಕರೆದು ಜೆಸಿಬಿಯಿಂದ ನೀರು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಚರಂಡಿಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.</p>.<p>ಕೃಷಿ ಹಾಗೂ ಕಂದಾಯ ಇಲಾಖೆಯವರು ಜಂಟಿಯಾಗಿ ಪಂಚನಾಮೆ ಮಾಡಿ ಮಳೆಯಿಂದ ಹಾನಿಯಾದ ಬಗ್ಗೆ ವರದಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು</p>.<p>ಮಹಾಂತೇಶ, ಗ್ರಾಮ ಆಡಳಿತಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ಶುಕ್ರವಾರ ರಾತ್ರಿ ಸುರಿದ ಮಳೆಗೆ ತಾಲ್ಲೂಕಿನ ಗುಲಸರಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಬಲಾದ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ.</p>.<p>ಭಾರಿ ಮಳೆಯಿಂದ ಗ್ರಾಮದ ಪರಿಶಿಷ್ಟ ಸಮುದಾಯದವರ ಬಡಾವಣೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಹೆಚ್ಚಿನ ನೀರು ಹರಿದಾಡಿತು. ಸರ್ಕಾರಿ ಶಾಲೆಯ ಕೋಣೆಗಳಲ್ಲಿ ಮಳೆ ನೀರು ನುಗ್ಗಿದ್ದರಿಂದ ಶನಿವಾರ ಮಕ್ಕಳ ಕಲಿಕೆಗೆ ತೊಂದರೆ ಉಂಟಾಯಿತು.</p>.<p>ಬಬಲಾದ ಗ್ರಾಮದ 15ಕ್ಕೂ ಹೆಚ್ಚು ಮನೆಯೊಳಗೆ ಮಳೆ ನೀರು ನುಗ್ಗಿದ್ದರಿಂದ ಮಹಿಳೆಯರು ನೀರು ಹೊರಹಾಕಲು ಹರಸಾಹಸ ಮಾಡಿದರು.</p>.<p>ಗ್ರಾಮದ ಜಲಾಲಬೀ ಹಾಗೂ ಎಸ್ಸಿ ಬಡಾವಣೆಯ ಮಲ್ಲಪ್ಪ ಕ್ರಾಂತಿ ಅವರ ಮನೆಯಲ್ಲಿನ ಧವಸಧಾನ್ಯ ಹಾಗೂ ಅಗತ್ಯ ವಸ್ತುಗಳು ಹಾನಿಯಾಗಿವೆ.</p>.<p><strong>ತಾಪಂ ಇಒ ಭೇಟಿ:</strong> ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಸಂಗ್ವಾರ ಬಬಲಾದ ಗ್ರಾಮಕ್ಕೆ ಭೇಟಿ ನೀಡಿ ತೊಂದರೆಗೊಳಗಾದ ಕುಟುಂಬಗಳ ಸಮಸ್ಯೆಯನ್ನು ಆಲಿಸಿದರು. ನಂತರ ಸ್ಥಳದಲ್ಲಿದ್ದ ಪಿಡಿಒ ಅವರನ್ನು ಕರೆದು ಜೆಸಿಬಿಯಿಂದ ನೀರು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಚರಂಡಿಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.</p>.<p>ಕೃಷಿ ಹಾಗೂ ಕಂದಾಯ ಇಲಾಖೆಯವರು ಜಂಟಿಯಾಗಿ ಪಂಚನಾಮೆ ಮಾಡಿ ಮಳೆಯಿಂದ ಹಾನಿಯಾದ ಬಗ್ಗೆ ವರದಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು</p>.<p>ಮಹಾಂತೇಶ, ಗ್ರಾಮ ಆಡಳಿತಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>