ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ಡಿಸಿ ಸೂಚನೆ

Last Updated 6 ಆಗಸ್ಟ್ 2020, 16:11 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಬಗ್ಗೆಜನರಿಗೆ ಜಾಗೃತಿ ಮೂಡಿಸಿಪರೀಕ್ಷೆಮಾಡಿ ತಕ್ಷಣದಲ್ಲಿಯೇ ವರದಿ ನೀಡಿ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಅಧಿಕಾರಿಗಳಿಗೆ ಮತ್ತು ವೈದ್ಯರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ಸಮುದಾಯದಲ್ಲಿ ಕೊರೊನಾ ಕುರಿತು ಭಯ ಉಲ್ಬಣವಾಗಿದೆ. ಜನರಿಗೆ ಅರಿವು ಮೂಡಿಸುವ ಕೆಲಸ ಅಗತ್ಯವಾಗಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಸಮುದಾಯದಲ್ಲಿ ಹೆಚ್ಚಾಗಿ ಸಂಪರ್ಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಉಪಯೋಗಿಸುವಂತೆ ಹೇಳಬೇಕು. ಗ್ರಾಮಗಳಲ್ಲಿನ ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರ ಸಹಾಯ ಪಡೆದುಕೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್-19 ಕೇಂದ್ರಗಳಲ್ಲಿನ ಎಲ್ಲಾ ತಾಲ್ಲೂಕುಗಳ ಕೇಂದ್ರಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎಂಎಸ್ ಪಾಟೀಲ, ಡಾ.ವೀರಬಸಂತರೆಡ್ಡಿ ಮುದ್ನಾಳ, ಡಾ.ಶರಣಭೂಪಾಲರೆಡ್ಡಿ, ಡಾ.ವೀರೇಶ ಜಾಕಾ ಸೇರಿದಂತೆ ಖಾಸಗಿ ವೈದ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT