ಸುರಪುರ: ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಅವರ 65ನೇ ಜನ್ಮ ದಿನವನ್ನು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದರು.
ಬೆಳಿಗ್ಗೆ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ ವೆಂಕಟಪ್ಪನಾಯಕ ಅವರು ನಂತರ ಗಾಂಧಿವೃತ್ತ ಮತ್ತು ಕುಂಬಾರಪೇಟೆ ಎಪಿಎಂಸಿ ಹತ್ತಿರ ಏರ್ಪಡಿಸಿದ್ದ ಅನ್ನಸಂತರ್ಪಣೆಯಲ್ಲಿ ಸ್ವತಃ ಊಟ ಬಡಿಸಿದರು.
ವೀರಶೈವ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ 100 ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಿದರು. ಪೌರಕಾರ್ಮಿಕರಿಗೆ ಸನ್ಮಾನಿಸಿ ವಸ್ತ್ರದಾನ ಮಾಡಲಾಯಿತು.
ಬೀದಿ ಬದಿ ವ್ಯಾಪಾರಿಗಳಿಗೆ ಮಳೆ, ಬಿಸಿಲಿನಿಂದ ರಕ್ಷಣೆ ಮಾಡಿಕೊಳ್ಳಲು ದೊಡ್ಡ ಛತ್ರಿಗಳನ್ನು ವಿತರಿಸಲಾಯಿತು. ಬುಧವಾರ ಸಂಜೆ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಜನ್ಮದಿನ ಆಚರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ಮಾತನಾಡಿದರು. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ನೆರೆದಿದ್ದರು.