<p>ಸೈದಾಪುರ: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ನರಸಿಂಹ ನಾಯಕ(ರಾಜುಗೌಡ)ಅವರಿಗೆ ಸಚಿವ ಸ್ಥಾನ ನೀಡಿ ಎಂದು ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ಆಂಜನೇಯ ಮೇಸ್ತ್ರಿ ಮಲ್ಹಾರ ಹೇಳಿದರು.</p>.<p>ಈಚೆಗೆ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ರಾಜುಗೌಡ ಮೂರು ಬಾರಿ ಶಾಸಕರಾಗಿದ್ದಾರೆ. ಜಗದೀಶ ಶೆಟ್ಟರ್ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ನಮ್ಮ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುವ ಅನುಭವ ರಾಜುಗೌಡ ಅವರಿಗಿದ್ದು ಸಚಿವ ಸ್ಥಾನ ನೀಡುವುದರಿಂದ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಗೊಳಿಸುತ್ತಾರೆ. ರಾಜುಗೌಡರನ್ನ ಸಚಿವ ಸಂಪುಟದಿಂದ ಹೊರಗಿಡುವುದರಿಂದ ಪಕ್ಷ ನಿಷ್ಠಾವಂತರನ್ನ ಕಡೆಗಣಿಸಿದಂತಾಗುತ್ತದೆ. ಹೀಗಾಗಿ ಶಾಸಕರಿಗೆ ಮಂತ್ರಿಸ್ಥಾನ ನೀಡಬೇಕೆಂದು ಆಗ್ರಹಿಸಿದರು.</p>.<p>ರಾಜು ದೊರೆ, ಬಸವರಾಜ ನಾಯಕ ಸೈದಾಪುರ, ಅಮರೇಶ ನಾಯಕ, ಮಲ್ಲೇಶ ನಾಯಕ ಕೂಡಲೂರು, ನಂದಗೋಪಾಲ, ಹಣಮಂತ್ರಾಯ ನಾಯಕ ಇಂದಿರಾನಗರ, ರೆಡ್ಡಿ ನಾಯಕ ನೀಲಹಳ್ಳಿ, ಮಲ್ಲಪ್ಪ, ಮರೆಪ್ಪ ಕೂಡಲೂರು, ರೆಡ್ಡಿ ನಾಯಕ, ವಿಜಯ ಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೈದಾಪುರ: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ನರಸಿಂಹ ನಾಯಕ(ರಾಜುಗೌಡ)ಅವರಿಗೆ ಸಚಿವ ಸ್ಥಾನ ನೀಡಿ ಎಂದು ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ಆಂಜನೇಯ ಮೇಸ್ತ್ರಿ ಮಲ್ಹಾರ ಹೇಳಿದರು.</p>.<p>ಈಚೆಗೆ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ರಾಜುಗೌಡ ಮೂರು ಬಾರಿ ಶಾಸಕರಾಗಿದ್ದಾರೆ. ಜಗದೀಶ ಶೆಟ್ಟರ್ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ನಮ್ಮ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುವ ಅನುಭವ ರಾಜುಗೌಡ ಅವರಿಗಿದ್ದು ಸಚಿವ ಸ್ಥಾನ ನೀಡುವುದರಿಂದ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಗೊಳಿಸುತ್ತಾರೆ. ರಾಜುಗೌಡರನ್ನ ಸಚಿವ ಸಂಪುಟದಿಂದ ಹೊರಗಿಡುವುದರಿಂದ ಪಕ್ಷ ನಿಷ್ಠಾವಂತರನ್ನ ಕಡೆಗಣಿಸಿದಂತಾಗುತ್ತದೆ. ಹೀಗಾಗಿ ಶಾಸಕರಿಗೆ ಮಂತ್ರಿಸ್ಥಾನ ನೀಡಬೇಕೆಂದು ಆಗ್ರಹಿಸಿದರು.</p>.<p>ರಾಜು ದೊರೆ, ಬಸವರಾಜ ನಾಯಕ ಸೈದಾಪುರ, ಅಮರೇಶ ನಾಯಕ, ಮಲ್ಲೇಶ ನಾಯಕ ಕೂಡಲೂರು, ನಂದಗೋಪಾಲ, ಹಣಮಂತ್ರಾಯ ನಾಯಕ ಇಂದಿರಾನಗರ, ರೆಡ್ಡಿ ನಾಯಕ ನೀಲಹಳ್ಳಿ, ಮಲ್ಲಪ್ಪ, ಮರೆಪ್ಪ ಕೂಡಲೂರು, ರೆಡ್ಡಿ ನಾಯಕ, ವಿಜಯ ಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>