<p><strong>ಸುರಪುರ:</strong>ರಾಮನವಮಿ ಅಂಗವಾಗಿ ಶುಕ್ರವಾರ ಶ್ರೀರಾಮಸೇನೆ ವತಿಯಿಂದ ಶ್ರೀರಾಮ ಮತ್ತು ವೀರಾಂಜನೆಯ ಮೂರ್ತಿಗಳ ಮೆರವಣಿಗೆ ಜರುಗಿತು. ರಾಮ ಭಕ್ತರ ಘೋಷಣೆಗಳು ಮುಗಿಲು ಮುಟ್ಟಿದವು.</p>.<p>ವೇಣು ಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ದೇವಪುರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ, ಲಕ್ಷ್ಮೀಪುರ ಶ್ರೀಗಿರಿ ಮಠದ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ, ಗುಡದಿನ್ನಿ ಕಾಳಿಕಾ ದೇವಿ ಅರ್ಚಕ ರಾಮರಾವಬಾಬಾ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಶಿವಮೂರ್ತಿ ಶಿವಾಚಾರ್ಯರು ಮಾತನಾಡಿ, ‘ಸನಾತನ ಪರಂಪರೆಯಲ್ಲಿ ಶ್ರೀರಾಮ ಮತ್ತು ಆಂಜನೇಯನಿಗೆ ಅಗ್ರಸ್ಥಾನವಿದೆ. ಈ ಪರಂಪರೆಯನ್ನು ಯುವಕರು ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸ ತಂದಿದೆ. ಅದರಲ್ಲಿ ವಿಶೇಷವಾಗಿ ಮುಸ್ಲಿಂ ಬಾಂಧವರು ಕೇಸರಿ ಶಾಲು ಹಾಕಿಕೊಂಡು ತಂಪು ಪಾನೀಯ ನೀಡುವ ಮೂಲಕ ಭಾವೈಕ್ಯ ತೋರಿರುವುದು ಒಳ್ಳೆಯ ಬೆಳವಣಿಗೆ’ ಎಂದರು.</p>.<p>ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.</p>.<p>ಪ್ರಮುಖ ರಸ್ತೆಗಳು ಕೇಸರಿ ಧ್ವಜಗಳಿಂದ ರಾರಾಜಿಸುತ್ತಿದ್ದವು. ವಿವಿಧ ಗ್ರಾಮಗಳಿಂದ ರಾಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ಅಟೋ, ಟಂಟಂ, ಬೈಕ್ಗಳಿಗೆ ಕೇಸರಿ ಧ್ವಜಗಳನ್ನು ಕಟ್ಟಿಕೊಂಡು ರಸ್ತೆಗಳಲ್ಲಿ ಜೈ ಶ್ರೀರಾಮ ಎಂದು ಘೋಷಣೆ ಹಾಕುತ್ತಾ ಓಡಾಡುತ್ತಿದ್ದರು. ಶೋಭಾಯಾತ್ರೆಯಲ್ಲಿ ಯುವಕರು ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು</p>.<p>ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲನಾಯಕ ಜೇವರ್ಗಿ, ರಾಮಸೇನಾ ಮುಖಂಡರಾದ ಶರಣುನಾಯಕ ಡೊಣ್ಣಿಗೇರಾ, ಶರಣುನಾಯಕ ದಿವಳಗುಡ್ಡ ,ರಂಗನಗೌಡ ಪಾಟೀಲ ದೇವಿಕೇರಾ, ಸೇರಿದಂತೆ ಹಲವಾರು ಸಂಖ್ಯೆಯಲ್ಲಿ ಮುಖಂಡರು, ಯುವಕರು ಹಾಗೂ ರಾಮನ ಭಕ್ತರು ಭಾಗವಹಿಸಿದ್ದರು.</p>.<p class="Subhead">ಭಾವ್ಯಕ್ಯತೆ ಮೆರೆದ ಮುಸ್ಲಿಂ ಬಾಂಧವರು: ಶೋಭಾಯಾತ್ರೆಯಲ್ಲಿ ಭಾಗವಹಿಸಿದವರಿಗೆ ಮುಸ್ಲಿಂ ಬಾಂಧವರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನೀರು ಮತ್ತು ತಂಪು ಪಾನೀಯ ವಿತರಿಸಿ ಭಾವೈಕ್ಯೆತೆ ಮೆರೆದರು.</p>.<p>ಕೆಲ ಮುಸ್ಲಿಂ ಬಾಂಧವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong>ರಾಮನವಮಿ ಅಂಗವಾಗಿ ಶುಕ್ರವಾರ ಶ್ರೀರಾಮಸೇನೆ ವತಿಯಿಂದ ಶ್ರೀರಾಮ ಮತ್ತು ವೀರಾಂಜನೆಯ ಮೂರ್ತಿಗಳ ಮೆರವಣಿಗೆ ಜರುಗಿತು. ರಾಮ ಭಕ್ತರ ಘೋಷಣೆಗಳು ಮುಗಿಲು ಮುಟ್ಟಿದವು.</p>.<p>ವೇಣು ಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ದೇವಪುರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ, ಲಕ್ಷ್ಮೀಪುರ ಶ್ರೀಗಿರಿ ಮಠದ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ, ಗುಡದಿನ್ನಿ ಕಾಳಿಕಾ ದೇವಿ ಅರ್ಚಕ ರಾಮರಾವಬಾಬಾ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಶಿವಮೂರ್ತಿ ಶಿವಾಚಾರ್ಯರು ಮಾತನಾಡಿ, ‘ಸನಾತನ ಪರಂಪರೆಯಲ್ಲಿ ಶ್ರೀರಾಮ ಮತ್ತು ಆಂಜನೇಯನಿಗೆ ಅಗ್ರಸ್ಥಾನವಿದೆ. ಈ ಪರಂಪರೆಯನ್ನು ಯುವಕರು ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸ ತಂದಿದೆ. ಅದರಲ್ಲಿ ವಿಶೇಷವಾಗಿ ಮುಸ್ಲಿಂ ಬಾಂಧವರು ಕೇಸರಿ ಶಾಲು ಹಾಕಿಕೊಂಡು ತಂಪು ಪಾನೀಯ ನೀಡುವ ಮೂಲಕ ಭಾವೈಕ್ಯ ತೋರಿರುವುದು ಒಳ್ಳೆಯ ಬೆಳವಣಿಗೆ’ ಎಂದರು.</p>.<p>ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.</p>.<p>ಪ್ರಮುಖ ರಸ್ತೆಗಳು ಕೇಸರಿ ಧ್ವಜಗಳಿಂದ ರಾರಾಜಿಸುತ್ತಿದ್ದವು. ವಿವಿಧ ಗ್ರಾಮಗಳಿಂದ ರಾಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ಅಟೋ, ಟಂಟಂ, ಬೈಕ್ಗಳಿಗೆ ಕೇಸರಿ ಧ್ವಜಗಳನ್ನು ಕಟ್ಟಿಕೊಂಡು ರಸ್ತೆಗಳಲ್ಲಿ ಜೈ ಶ್ರೀರಾಮ ಎಂದು ಘೋಷಣೆ ಹಾಕುತ್ತಾ ಓಡಾಡುತ್ತಿದ್ದರು. ಶೋಭಾಯಾತ್ರೆಯಲ್ಲಿ ಯುವಕರು ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು</p>.<p>ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲನಾಯಕ ಜೇವರ್ಗಿ, ರಾಮಸೇನಾ ಮುಖಂಡರಾದ ಶರಣುನಾಯಕ ಡೊಣ್ಣಿಗೇರಾ, ಶರಣುನಾಯಕ ದಿವಳಗುಡ್ಡ ,ರಂಗನಗೌಡ ಪಾಟೀಲ ದೇವಿಕೇರಾ, ಸೇರಿದಂತೆ ಹಲವಾರು ಸಂಖ್ಯೆಯಲ್ಲಿ ಮುಖಂಡರು, ಯುವಕರು ಹಾಗೂ ರಾಮನ ಭಕ್ತರು ಭಾಗವಹಿಸಿದ್ದರು.</p>.<p class="Subhead">ಭಾವ್ಯಕ್ಯತೆ ಮೆರೆದ ಮುಸ್ಲಿಂ ಬಾಂಧವರು: ಶೋಭಾಯಾತ್ರೆಯಲ್ಲಿ ಭಾಗವಹಿಸಿದವರಿಗೆ ಮುಸ್ಲಿಂ ಬಾಂಧವರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನೀರು ಮತ್ತು ತಂಪು ಪಾನೀಯ ವಿತರಿಸಿ ಭಾವೈಕ್ಯೆತೆ ಮೆರೆದರು.</p>.<p>ಕೆಲ ಮುಸ್ಲಿಂ ಬಾಂಧವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>