‘ವಡಗೇರಾ ತಾಲ್ಲೂಕಿನ ಗುರುಸಣಗಿ ಗ್ರಾಮದ ಆರೋಪಿ ಹಣಮಂತ, ಸಂತ್ರಸ್ತೆ ಯುವತಿಯ ತಾಯಿಯ ತಮ್ಮ.ಮದುವೆ ಆಗುವುದಾಗಿ ನಂಬಿಸಿ ಹಲವು ಬಾರಿ ಅತ್ಯಾಚ್ಯಾರ ಎಸಗಿದ್ದ. ಬಳಿಕ ಬೇರೆ ಯುವತಿಯ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಯುವತಿಯ ಗಮನಕ್ಕೆ ಬಂದು ಈ ಬಗ್ಗೆ ಪ್ರಶ್ನಿಸಿದಾಗ, ಮದುವೆ ಆಗಲು ನಿರಾಕರಿಸಿದ. ಇದರಿಂದ ಆತಂಕಗೊಂಡ ಯುವತಿಯು ಆತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.