<p><strong>ಯಾದಗಿರಿ</strong>: ಜಿಲ್ಲಾಡಳಿತ ಭವನದ ಸಾಮಾಜಿಕ ಅರಣ್ಯ, ಅಕ್ಷರ ದಾಸೋಹ ಹಾಗೂ ಕೃಷಿ ಇಲಾಖೆಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ ಅವರು ಸೋಮವಾರ ದಿಢೀರ್ ಭೇಟಿ ನೀಡಿದರು.</p>.<p>ಸಾರ್ವಜನಿಕ ಕೆಲಸ ಕಾರ್ಯಗಳ ವಿಳಂಬ ದೂರಿನ ಹಿನ್ನೆಲೆಯಲ್ಲಿ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಗಳ ಸಿಬ್ಬಂದಿಯ ಹಾಜರಿ ಪುಸ್ತಕ ಪರಿಶೀಲಿಸಿದರು.</p>.<p>ಸಾಮಾಜಿಕ ಅರಣ್ಯ ಇಲಾಖೆಯ ಜಿಲ್ಲಾ ಅರಣ್ಯ ಅಧಿಕಾರಿ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಪ್ರಭಾರಿ ಇದ್ದು, ನಾಲ್ಕು ತಿಂಗಳಿನಿಂದ ಯಾದಗಿರಿಗೆ ಬರದೇ ಇರುವ ಸಂಗತಿಯನ್ನು ಸಿಬ್ಬಂದಿ ಅಧ್ಯಕ್ಷರಿಗೆ ತಿಳಿಸಿದರು.</p>.<p>ಕಚೇರಿಗೆ ಬಂದ ಪತ್ರಗಳ ಕುರಿತು ಹಾಗೂ ವಿಲೇವಾರಿ ಮಾಡಿರುವುದಕ್ಕೆ ಯಾವುದೇ ದಾಖಲೆ ನೀಡದಿರುವುದು ಕಂಡು ಬಂತು. ಕೊರೊನಾ ಹಿನ್ನೆಲೆಯಲ್ಲಿ ರಾಯಚೂರಿಗೆ ಎಲ್ಲ ಅರ್ಜಿಗಳನ್ನು ತರಿಸಿಕೊಂಡು ವಿಲೇವಾರಿ ಮಾಡುವುದಾಗಿ ಅಧ್ಯಕ್ಷರು ಕರೆ ಮಾಡಿದಾಗ ಡಿಎಫ್ಒ ತಿಳಿಸಿದರು.</p>.<p>ನಂತರ ಕೃಷಿ ಇಲಾಖೆಗೆ ಭೇಟಿ ನೀಡಿದ ಅವರು ಜಂಟಿ ನಿರ್ದೇಶಕಿ ಆರ್ ದೇವಿಕಾ ಅವರೊಂದಿಗೆ ಪ್ರಸ್ತುತ ಜಿಲ್ಲೆಯಲ್ಲಿ ಲಭ್ಯವಿರುವ ರಸಗೊಬ್ಬರ ದಾಸ್ತಾನು ಕುರಿತು ಮಾಹಿತಿ ಪಡೆದರು.</p>.<p>ಹಾಜರಾತಿ ಪುಸ್ತಕ ಪರಿಶೀಲನೆ ಮಾಡಿ ವಿಚಾರಿಸಿದಾಗ ಹಲವಾರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಯ ನಂತರ ಬಿಡುಗಡೆಯಾಗಿ ಕ್ವಾರಂಟೈನ್ನಲ್ಲಿ ಇದ್ದಾರೆ ಎಂದು ದೇವಿಕಾ ಅವರು ಅಧ್ಯಕ್ಷರಿಗೆ ತಿಳಿಸಿದರು.</p>.<p>ಈ ವೇಳೆ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ, ಜಿಪಂ ಸದಸ್ಯ ಅಮರದೀಪ್, ಸದಾಶಿವಪ್ಪಗೌಡ ರೊಟ್ನಡಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲಾಡಳಿತ ಭವನದ ಸಾಮಾಜಿಕ ಅರಣ್ಯ, ಅಕ್ಷರ ದಾಸೋಹ ಹಾಗೂ ಕೃಷಿ ಇಲಾಖೆಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ ಅವರು ಸೋಮವಾರ ದಿಢೀರ್ ಭೇಟಿ ನೀಡಿದರು.</p>.<p>ಸಾರ್ವಜನಿಕ ಕೆಲಸ ಕಾರ್ಯಗಳ ವಿಳಂಬ ದೂರಿನ ಹಿನ್ನೆಲೆಯಲ್ಲಿ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಗಳ ಸಿಬ್ಬಂದಿಯ ಹಾಜರಿ ಪುಸ್ತಕ ಪರಿಶೀಲಿಸಿದರು.</p>.<p>ಸಾಮಾಜಿಕ ಅರಣ್ಯ ಇಲಾಖೆಯ ಜಿಲ್ಲಾ ಅರಣ್ಯ ಅಧಿಕಾರಿ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಪ್ರಭಾರಿ ಇದ್ದು, ನಾಲ್ಕು ತಿಂಗಳಿನಿಂದ ಯಾದಗಿರಿಗೆ ಬರದೇ ಇರುವ ಸಂಗತಿಯನ್ನು ಸಿಬ್ಬಂದಿ ಅಧ್ಯಕ್ಷರಿಗೆ ತಿಳಿಸಿದರು.</p>.<p>ಕಚೇರಿಗೆ ಬಂದ ಪತ್ರಗಳ ಕುರಿತು ಹಾಗೂ ವಿಲೇವಾರಿ ಮಾಡಿರುವುದಕ್ಕೆ ಯಾವುದೇ ದಾಖಲೆ ನೀಡದಿರುವುದು ಕಂಡು ಬಂತು. ಕೊರೊನಾ ಹಿನ್ನೆಲೆಯಲ್ಲಿ ರಾಯಚೂರಿಗೆ ಎಲ್ಲ ಅರ್ಜಿಗಳನ್ನು ತರಿಸಿಕೊಂಡು ವಿಲೇವಾರಿ ಮಾಡುವುದಾಗಿ ಅಧ್ಯಕ್ಷರು ಕರೆ ಮಾಡಿದಾಗ ಡಿಎಫ್ಒ ತಿಳಿಸಿದರು.</p>.<p>ನಂತರ ಕೃಷಿ ಇಲಾಖೆಗೆ ಭೇಟಿ ನೀಡಿದ ಅವರು ಜಂಟಿ ನಿರ್ದೇಶಕಿ ಆರ್ ದೇವಿಕಾ ಅವರೊಂದಿಗೆ ಪ್ರಸ್ತುತ ಜಿಲ್ಲೆಯಲ್ಲಿ ಲಭ್ಯವಿರುವ ರಸಗೊಬ್ಬರ ದಾಸ್ತಾನು ಕುರಿತು ಮಾಹಿತಿ ಪಡೆದರು.</p>.<p>ಹಾಜರಾತಿ ಪುಸ್ತಕ ಪರಿಶೀಲನೆ ಮಾಡಿ ವಿಚಾರಿಸಿದಾಗ ಹಲವಾರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಯ ನಂತರ ಬಿಡುಗಡೆಯಾಗಿ ಕ್ವಾರಂಟೈನ್ನಲ್ಲಿ ಇದ್ದಾರೆ ಎಂದು ದೇವಿಕಾ ಅವರು ಅಧ್ಯಕ್ಷರಿಗೆ ತಿಳಿಸಿದರು.</p>.<p>ಈ ವೇಳೆ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ, ಜಿಪಂ ಸದಸ್ಯ ಅಮರದೀಪ್, ಸದಾಶಿವಪ್ಪಗೌಡ ರೊಟ್ನಡಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>