ಈ ವೇಳೆ ಇ.ಒ ಬಸವರಾಜಸ್ವಾಮಿ ಮಾತನಾಡಿ, ಕಳೆದ ವರ್ಷ ಗ್ರಾಮದಲ್ಲಿ ಆರೋಗ್ಯ ಸಮಸ್ಯೆ ತಲೆದೊರಿತ್ತು. ಹೀಗಾಗಿ ಮೇಲಾಧಿಕಾರಿಗಳ ನಿರ್ದೇಶನದಂತೆ ಗ್ರಾಮಕ್ಕೆ ಭೇಟಿ ನೀಡಿ ಪ್ರಸ್ತುತ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಯ ಎಲ್ಲಾ ಜಲ ಮೂಲಗಳನ್ನು ಪರಿಶೀಲನೆ ಮಾಡಲಾಗಿದೆ. ಈಗಾಗಲೇ ಗ್ರಾ.ಪಂ ವತಿಯಿಂದ ತೆರೆದ ಬಾವಿ ಹಾಗೂ ಇತರೆಡೆ ಕ್ಲೋರಿನೇಶನ್ ಮಾಡಲಾಗಿದೆ. ಕೊಳವೆಬಾವಿಗಳ ಸುತ್ತ ಸ್ವಚ್ಛತೆ ಕಾಪಾಡುವಂತೆ ಡಂಗೂರ ಸಾರಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗಿದೆ. ಗ್ರಾಮಸ್ಥರು ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಲು ಆದ್ಯತೆ ನೀಡಬೇಕು ಎಂದು ಹೇಳಿದರು.