<p><strong>ವಡಗೇರಾ:</strong> ‘ಹಿರಿಯರಾಗಲಿ ಕಿರಿಯರಾಗಲಿ ಆಗಾಗ ಕಣ್ಣುಗಳ ತಪಾಸಣೆಯನ್ನು ಮಾಡಿಕೊಳ್ಳುವುದರಿಂದ ದೃಷ್ಟಿ ದೋಷದಿಂದ ಮುಕ್ತಿ ಹೊಂದಲು ಸಾಧ್ಯ’ ಎಂದು ನೇತ್ರಾಧಿಕಾರಿ ಶ್ರೀನಿವಾಸ ಹೇಳಿದರು.</p>.<p>ತಾಲ್ಲೂಕಿನ ಬಿಳ್ಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ವಡಗೇರಾ ಆಶಾಕಿರಣ ದೃಷ್ಟಿ ಕೇಂದ್ರದ ವತಿಯಿಂದ ದೃಷ್ಟಿ ದೋಷವಿರುವ ಶಾಲಾ ಮಕ್ಕಳಿಗೆ ಉಚಿತ ಕನ್ನಡಕಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಪ್ರತಿಯೊಬ್ಬರ ಕಣ್ಣುಗಳನ್ನು ರಕ್ಷಿಸಲು ‘ಆಶಾ ಕಿರಣ’ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು. ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಚಿಕಿತ್ಸೆಗಳು ಹಾಗೂ ಕನ್ನಡಕಗಳನ್ನು ವಿತರಿಸುವ ಜತೆಗೆ ಕುರುಡುತನಕ್ಕೆ ಚಿಕಿತ್ಸೆ ನೀಡುವ ಗುರಿಯನ್ನು ಹೊಂದಲಾಗಿದೆ’ ಎಂದು ತಿಳಿಸಿದರು.</p>.<p>‘ಹುಟ್ಟು ಆಕಸ್ಮಿಕ ಸಾವು ಖಚಿತ ಎಂಬಂತೆ ಇಂದಿಲ್ಲ ನಾಳೆ ಎಲ್ಲರೂ ಸಾಯುವುವರೆ ಆದರೆ ಸಾಯುವದಕ್ಕಿಂತ ಮುಂಚೆ ಬೇರೆಯವರ ಬಾಳಿನಲ್ಲಿ ಬೆಳಕಾಗಬೇಕಾದರೆ ಮರಣ ಪೂರ್ವದಲ್ಲಿ ಕಣ್ಣುಗಳನ್ನು ದಾನ ಮಾಡುವ ಒಪ್ಪಿಗೆ ಸೂಚಿಸುವ ದಾನ ಪತ್ರಕ್ಕೆ ರುಜು ಮಾಡಬೇಕು’ ಎಂದರು.</p>.<p>‘ನಮ್ಮಲ್ಲಿರುವ ಸಂಕುಚಿತ ಭಾವನೆ ಹಾಗೂ ಭಯವನ್ನು ಬಿಟ್ಟು ನಮ್ಮ ದೇಹದ ಅಂಗಾಂಗಳನ್ನು ದಾನ ಮಾಡುವುದರಿಂದ ಬೇರೆಯವರ ಜೀವನವನ್ನು ಉಳಿಸಿದಂತಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರು ದೇಹದ ಅಂಗಾಂಗಳನ್ನು ದಾನ ಮಾಡಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಜಿಲ್ಲಾ ಅಂಧತ್ವ ವಿಭಾಗ ಯಾದಗಿರಿ ವತಿಯಿಂದ ದೃಷ್ಟಿ ದೋಷವಿರುವ ಶಾಲಾ ಮಕ್ಕಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ, ಶಿಕ್ಷಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ಹಿರಿಯರಾಗಲಿ ಕಿರಿಯರಾಗಲಿ ಆಗಾಗ ಕಣ್ಣುಗಳ ತಪಾಸಣೆಯನ್ನು ಮಾಡಿಕೊಳ್ಳುವುದರಿಂದ ದೃಷ್ಟಿ ದೋಷದಿಂದ ಮುಕ್ತಿ ಹೊಂದಲು ಸಾಧ್ಯ’ ಎಂದು ನೇತ್ರಾಧಿಕಾರಿ ಶ್ರೀನಿವಾಸ ಹೇಳಿದರು.</p>.<p>ತಾಲ್ಲೂಕಿನ ಬಿಳ್ಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ವಡಗೇರಾ ಆಶಾಕಿರಣ ದೃಷ್ಟಿ ಕೇಂದ್ರದ ವತಿಯಿಂದ ದೃಷ್ಟಿ ದೋಷವಿರುವ ಶಾಲಾ ಮಕ್ಕಳಿಗೆ ಉಚಿತ ಕನ್ನಡಕಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಪ್ರತಿಯೊಬ್ಬರ ಕಣ್ಣುಗಳನ್ನು ರಕ್ಷಿಸಲು ‘ಆಶಾ ಕಿರಣ’ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು. ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಚಿಕಿತ್ಸೆಗಳು ಹಾಗೂ ಕನ್ನಡಕಗಳನ್ನು ವಿತರಿಸುವ ಜತೆಗೆ ಕುರುಡುತನಕ್ಕೆ ಚಿಕಿತ್ಸೆ ನೀಡುವ ಗುರಿಯನ್ನು ಹೊಂದಲಾಗಿದೆ’ ಎಂದು ತಿಳಿಸಿದರು.</p>.<p>‘ಹುಟ್ಟು ಆಕಸ್ಮಿಕ ಸಾವು ಖಚಿತ ಎಂಬಂತೆ ಇಂದಿಲ್ಲ ನಾಳೆ ಎಲ್ಲರೂ ಸಾಯುವುವರೆ ಆದರೆ ಸಾಯುವದಕ್ಕಿಂತ ಮುಂಚೆ ಬೇರೆಯವರ ಬಾಳಿನಲ್ಲಿ ಬೆಳಕಾಗಬೇಕಾದರೆ ಮರಣ ಪೂರ್ವದಲ್ಲಿ ಕಣ್ಣುಗಳನ್ನು ದಾನ ಮಾಡುವ ಒಪ್ಪಿಗೆ ಸೂಚಿಸುವ ದಾನ ಪತ್ರಕ್ಕೆ ರುಜು ಮಾಡಬೇಕು’ ಎಂದರು.</p>.<p>‘ನಮ್ಮಲ್ಲಿರುವ ಸಂಕುಚಿತ ಭಾವನೆ ಹಾಗೂ ಭಯವನ್ನು ಬಿಟ್ಟು ನಮ್ಮ ದೇಹದ ಅಂಗಾಂಗಳನ್ನು ದಾನ ಮಾಡುವುದರಿಂದ ಬೇರೆಯವರ ಜೀವನವನ್ನು ಉಳಿಸಿದಂತಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರು ದೇಹದ ಅಂಗಾಂಗಳನ್ನು ದಾನ ಮಾಡಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಜಿಲ್ಲಾ ಅಂಧತ್ವ ವಿಭಾಗ ಯಾದಗಿರಿ ವತಿಯಿಂದ ದೃಷ್ಟಿ ದೋಷವಿರುವ ಶಾಲಾ ಮಕ್ಕಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ, ಶಿಕ್ಷಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>