<p><strong>ಯಾದಗಿರಿ:</strong> ‘ಪ್ರಜಾವಾಣಿ’ ಪತ್ರಿಕೆ ಹೊರ ತಂದಿರುವ ‘ದೀಪಾವಳಿ’ ವಿಶೇಷಾಂಕವನ್ನು ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರೆಡ್ಡಿ ಮುದ್ನಾಳ, ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ ಅವರು ಬಿಡುಗಡೆ ಮಾಡಿದರು.</p>.<p>ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶುಕ್ರವಾರ ಹಾಲಿ, ಮಾಜಿ ಶಾಸಕರು ‘ದೀಪಾವಳಿ’ ವಿಶೇಷಾಂಕ ಬಿಡುಗಡೆ ಮಾಡಿ ಶುಭಹಾರೈಸಿದರು.</p>.<p>ಈ ವೇಳೆ ಮಾತನಾಡಿದ ಶಾಸಕ ವೆಂಕಟರೆಡ್ಡಿ ಮುದ್ನಾಳ, ‘ಪ್ರಜಾವಾಣಿ’ಯ ‘ದೀಪಾವಳಿ’ ವಿಶೇಷಾಂಕ ಹಲವು ವೈವಿಧ್ಯತೆಯಿಂದ ಕೂಡಿದೆ. ಕಥೆ, ಕವನ, ಪ್ರವಾಸ ಕಥನ, ಅಡುಗೆ, ಮಕ್ಕಳ ಕಥೆಗಳು, ಸ್ಪರ್ಧಾ ಕಥೆಗಳು ಓದುಗರನ್ನು ಸೆಳೆಯುತ್ತವೆ ಎಂದು ಅಭಿಪ್ರಾಯಪಟ್ಟರು.</p>.<p>ವಿಶೇಷಾಂಕ ಇಡೀ ರಾಜ್ಯ ಮಟ್ಟದಲ್ಲಿ ಬಿಡುಗಡೆಯಾಗಿದ್ದರಿಂದ ಉತ್ತರ ಕರ್ನಾಟಕದವರು, ದಕ್ಷಿಣ ಕರ್ನಾಟಕವನ್ನು, ದಕ್ಷಿಣ ಕರ್ನಾಟಕದವರು ಉತ್ತರ ಕರ್ನಾಟಕವನ್ನು ತಿಳಿದುಕೊಳ್ಳಲು ಸಾಧ್ಯವಾಗಲಿದೆ. ಹಾಸ್ಯ, ವಿಡಂಬನೆ, ಸಿನಿಮಾ, ಕೋವಿಡ್ ಸಂಕಷ್ಟದ ದಿನಗಳು, ಭೀಮಾ ನದಿ ಬಗ್ಗೆ, ಭಕ್ಷ್ಯಭೋಜನ ಸೇರಿದಂತೆ ಹಲವಾರು ವಿಷಯಗಳನ್ನು ಓದುಗರಿಗೆ ವಿಶೇಷಾಂಕ ಉಣಬಡಿಸಲಿದೆ ಎಂದರು.</p>.<p>‘ನಾನು ವಿದ್ಯಾರ್ಥಿ ಜೀವನದಲ್ಲಿ ಹಲವಾರು ಪುಸ್ತಕಗಳನ್ನು ಓದಿದ್ದೇನೆ. ಪುಸ್ತಕಗಳನ್ನು ಓದುವುದರ ಮೂಲಕ ಜ್ಞಾನಾರ್ಜನೆ ಸಿಗಲಿದೆ’ ಎಂದರು.</p>.<p>ಈ ವೇಳೆ ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ, ಶಾಸಕರ ಆಪ್ತ ಸಹಾಯಕ ಸುಧೀರ್ ಪಾಟೀಲ, ‘ಪ್ರಜಾವಾಣಿ’ ಜಿಲ್ಲಾ ವರದಿಗಾರ ಬಿ.ಜಿ.ಪ್ರವೀಣಕುಮಾರ, ಪ್ರಸಾರಂಗ ಪ್ರತಿನಿಧಿ ಶರಣಗೌಡ ಅರಿಕೇರಿ, ಜಾಹಿರಾತು ಪ್ರತಿನಿಧಿ ಪರಮೇಶರೆಡ್ಡಿ, ಛಾಯಾಗ್ರಾಹಕ ರಾಜಕುಮಾರ ನಳ್ಳಿಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಪ್ರಜಾವಾಣಿ’ ಪತ್ರಿಕೆ ಹೊರ ತಂದಿರುವ ‘ದೀಪಾವಳಿ’ ವಿಶೇಷಾಂಕವನ್ನು ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರೆಡ್ಡಿ ಮುದ್ನಾಳ, ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ ಅವರು ಬಿಡುಗಡೆ ಮಾಡಿದರು.</p>.<p>ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶುಕ್ರವಾರ ಹಾಲಿ, ಮಾಜಿ ಶಾಸಕರು ‘ದೀಪಾವಳಿ’ ವಿಶೇಷಾಂಕ ಬಿಡುಗಡೆ ಮಾಡಿ ಶುಭಹಾರೈಸಿದರು.</p>.<p>ಈ ವೇಳೆ ಮಾತನಾಡಿದ ಶಾಸಕ ವೆಂಕಟರೆಡ್ಡಿ ಮುದ್ನಾಳ, ‘ಪ್ರಜಾವಾಣಿ’ಯ ‘ದೀಪಾವಳಿ’ ವಿಶೇಷಾಂಕ ಹಲವು ವೈವಿಧ್ಯತೆಯಿಂದ ಕೂಡಿದೆ. ಕಥೆ, ಕವನ, ಪ್ರವಾಸ ಕಥನ, ಅಡುಗೆ, ಮಕ್ಕಳ ಕಥೆಗಳು, ಸ್ಪರ್ಧಾ ಕಥೆಗಳು ಓದುಗರನ್ನು ಸೆಳೆಯುತ್ತವೆ ಎಂದು ಅಭಿಪ್ರಾಯಪಟ್ಟರು.</p>.<p>ವಿಶೇಷಾಂಕ ಇಡೀ ರಾಜ್ಯ ಮಟ್ಟದಲ್ಲಿ ಬಿಡುಗಡೆಯಾಗಿದ್ದರಿಂದ ಉತ್ತರ ಕರ್ನಾಟಕದವರು, ದಕ್ಷಿಣ ಕರ್ನಾಟಕವನ್ನು, ದಕ್ಷಿಣ ಕರ್ನಾಟಕದವರು ಉತ್ತರ ಕರ್ನಾಟಕವನ್ನು ತಿಳಿದುಕೊಳ್ಳಲು ಸಾಧ್ಯವಾಗಲಿದೆ. ಹಾಸ್ಯ, ವಿಡಂಬನೆ, ಸಿನಿಮಾ, ಕೋವಿಡ್ ಸಂಕಷ್ಟದ ದಿನಗಳು, ಭೀಮಾ ನದಿ ಬಗ್ಗೆ, ಭಕ್ಷ್ಯಭೋಜನ ಸೇರಿದಂತೆ ಹಲವಾರು ವಿಷಯಗಳನ್ನು ಓದುಗರಿಗೆ ವಿಶೇಷಾಂಕ ಉಣಬಡಿಸಲಿದೆ ಎಂದರು.</p>.<p>‘ನಾನು ವಿದ್ಯಾರ್ಥಿ ಜೀವನದಲ್ಲಿ ಹಲವಾರು ಪುಸ್ತಕಗಳನ್ನು ಓದಿದ್ದೇನೆ. ಪುಸ್ತಕಗಳನ್ನು ಓದುವುದರ ಮೂಲಕ ಜ್ಞಾನಾರ್ಜನೆ ಸಿಗಲಿದೆ’ ಎಂದರು.</p>.<p>ಈ ವೇಳೆ ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ, ಶಾಸಕರ ಆಪ್ತ ಸಹಾಯಕ ಸುಧೀರ್ ಪಾಟೀಲ, ‘ಪ್ರಜಾವಾಣಿ’ ಜಿಲ್ಲಾ ವರದಿಗಾರ ಬಿ.ಜಿ.ಪ್ರವೀಣಕುಮಾರ, ಪ್ರಸಾರಂಗ ಪ್ರತಿನಿಧಿ ಶರಣಗೌಡ ಅರಿಕೇರಿ, ಜಾಹಿರಾತು ಪ್ರತಿನಿಧಿ ಪರಮೇಶರೆಡ್ಡಿ, ಛಾಯಾಗ್ರಾಹಕ ರಾಜಕುಮಾರ ನಳ್ಳಿಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>