<p><strong>ವಡಿಗೇರಾ:</strong> ‘ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅವರ ಹೆಸರು ಇಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಅಖಿಲ ಭಾರತೀಯ ಕೋಲಿ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಒತ್ತಾಯಿಸಿದರು.</p>.<p>ತಾಲ್ಲೂಕಿನ ಟಿ. ವಡಗೇರಾ ಗ್ರಾಮದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡ ನಿಜಶರಣರ ಮೂರ್ತಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ಸಮಾಜದ ಸುಧಾರಣೆಗೆ ಶ್ರಮಿಸಿದ ಬಸವಾದಿ ಶರಣರ ಸಾಲಿನಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸಿದ ನಿಜಶರಣ ಅಂಬಿಗರ ಚೌಡಯ್ಯ ಅವರು ಪ್ರಮುಖರಾಗಿದ್ದಾರೆ’ ಎಂದು ಹೇಳಿದರು.</p>.<p>‘ತಮ್ಮ ವಚನಗಳ ಮೂಲಕ ಕನ್ನಡ ನಾಡಿಗೆ ಹಾಗೂ ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನು ನಿಜಶರಣರು ಕೊಟ್ಟಿದ್ದಾರೆ. ಇಂತಹ ಮಹಾನ ಶರಣರಾದ ಚೌಡಯ್ಯನ ಹೆಸರು ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಹೆಸರಿಡಬೇಕು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ವೆಂಕಟೇಶ ಹಾಲಗೇರಾ, ನಿಜಲಿಂಗಪ್ಪ ಮಾತಾ, ವೆಂಕಟೇಶ ಕಕ್ಕಸಗೇರಾ, ದೇವಿಂದಪ್ಪ ಗೂಡುರು, ಹೊನ್ನಯ್ಯ ಮ್ಯಾಗೇರಿ, ಮರೆಪ್ಪ ಸಾಧು, ದೇವಿಂದ್ರಪ್ಪ ಗಗ್ರಿ, ಮರೆಪ್ಪ ಗಗ್ರಿ, ಶಾಂತಗೌಡ, ದೇವು ಕಲಾಲ, ರಾಜು ಗಗ್ರಿ, ದೇವು ಕೊಮರನೋರ್, ತಿಪ್ಪಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಿಗೇರಾ:</strong> ‘ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅವರ ಹೆಸರು ಇಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಅಖಿಲ ಭಾರತೀಯ ಕೋಲಿ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಒತ್ತಾಯಿಸಿದರು.</p>.<p>ತಾಲ್ಲೂಕಿನ ಟಿ. ವಡಗೇರಾ ಗ್ರಾಮದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡ ನಿಜಶರಣರ ಮೂರ್ತಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ಸಮಾಜದ ಸುಧಾರಣೆಗೆ ಶ್ರಮಿಸಿದ ಬಸವಾದಿ ಶರಣರ ಸಾಲಿನಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸಿದ ನಿಜಶರಣ ಅಂಬಿಗರ ಚೌಡಯ್ಯ ಅವರು ಪ್ರಮುಖರಾಗಿದ್ದಾರೆ’ ಎಂದು ಹೇಳಿದರು.</p>.<p>‘ತಮ್ಮ ವಚನಗಳ ಮೂಲಕ ಕನ್ನಡ ನಾಡಿಗೆ ಹಾಗೂ ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನು ನಿಜಶರಣರು ಕೊಟ್ಟಿದ್ದಾರೆ. ಇಂತಹ ಮಹಾನ ಶರಣರಾದ ಚೌಡಯ್ಯನ ಹೆಸರು ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಹೆಸರಿಡಬೇಕು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ವೆಂಕಟೇಶ ಹಾಲಗೇರಾ, ನಿಜಲಿಂಗಪ್ಪ ಮಾತಾ, ವೆಂಕಟೇಶ ಕಕ್ಕಸಗೇರಾ, ದೇವಿಂದಪ್ಪ ಗೂಡುರು, ಹೊನ್ನಯ್ಯ ಮ್ಯಾಗೇರಿ, ಮರೆಪ್ಪ ಸಾಧು, ದೇವಿಂದ್ರಪ್ಪ ಗಗ್ರಿ, ಮರೆಪ್ಪ ಗಗ್ರಿ, ಶಾಂತಗೌಡ, ದೇವು ಕಲಾಲ, ರಾಜು ಗಗ್ರಿ, ದೇವು ಕೊಮರನೋರ್, ತಿಪ್ಪಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>