ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಂ ಸ್ಥಾನ ನೀಡಲು ಆಗ್ರಹ

ರಾಜ್ಯದಲ್ಲಿ ಬಿಜೆಪಿಯ ನಾಲ್ವರು ಶಾಸಕರು ಆಯ್ಕೆ
Last Updated 1 ಆಗಸ್ಟ್ 2019, 11:59 IST
ಅಕ್ಷರ ಗಾತ್ರ

ಯಾದಗಿರಿ: ನೂತನವಾಗಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಮಾದಿಗ ಸಮುದಾಯದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಾದಿಗ ಸಮುದಾಯದ ಹಿರಿಯ ಮುಖಂಡ ದೇವೇಂದ್ರ ಕೆ. ನಾದ ಒತ್ತಾಯಿಸಿದರು.

ರಾಜ್ಯದಲ್ಲಿ ದೊಡ್ಡ ಸಮುದಾಯವಾಗಿರುವ ಮಾದಿಗ ಸಮುದಾಯಕ್ಕೆ ಆದ್ಯತೆ ನೀಡಬೇಕು. ರಾಜ್ಯದಲ್ಲಿ ಮಾದಿಗ ಸಮುದಾಯದ ಬಿಜೆಪಿ ವತಿಯಿಂದ ನಾಲ್ವರು ಶಾಸಕರು ಆಯ್ಕೆಯಾಗಿದ್ದಾರೆ. ಹಿರಿಯರಾದ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ, ದುರ್ಯೋಧನ ಐಹೋಳೆಯವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಮಾದಿಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ ಮಾತನಾಡಿ, ಬಾಗಲಕೋಟ ಜಿಲ್ಲೆಯ ಪ್ರಭಾವಿ ದಲಿತ ನಾಯಕ ಗೋವಿಂದ ಕಾರಜೋಳ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ನೀಡಬೇಕು. ಅಲ್ಲದೆ ಬಹುಸಂಖ್ಯಾತರು ಹೆಚ್ಚಿದ್ದು, ಅವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಮಾದಿಗ ಸಮುದಾಯದ ಮುಖಂಡರಾದ ‌ಎಂ.ಕೆ.ಬೀರನೂರ, ಗೋಪಾಲ ದಾಸನಕೇರಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ, ಲಿಂಗಪ್ಪ ವಡ್ನಳ್ಳಿ, ಶಿವು ಮುದ್ನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT