ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಗ್ರಂಥಾಲಯ ಮೇಲ್ವಿಚಾರಕರ ಮನವಿ

Last Updated 2 ಅಕ್ಟೋಬರ್ 2020, 14:42 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಕುಂದುಕೊರತೆಗಳನ್ನು ಪರಿಹರಿಸುವಂತೆ ಮೇಲ್ವಿಚಾರಕರ ಶ್ರೇಯೋಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾ ಪಂಚಾಯಿತಿ ಸಿಇಒಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಶಹಾಪುರ ತಾಲ್ಲೂಕಿನ ದೋರನಳ್ಳಿ ಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ‘ಸ್ವಚ್ಛೋತ್ಸವ ನಿತ್ಯೋತ್ಸವ ಕಾರ್ಯಕ್ರಮದ ಉದ್ಘಾಟನೆಗಾಗಿ ಆಗಮಿಸಿದ್ದ ವೇಳೆ ಮನವಿ ಪತ್ರ ಸಲ್ಲಿಸಲಾಯಿತು.

ಮೇಲ್ವಿಚಾರಕರಿಗೆ ಕನಿಷ್ಠ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿದರು. ಈ ವೇಳೆ ಕಲ್ಯಾಣ ಕರ್ನಾಟಕ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಶ್ರೇಯೋಭಿವೃದ್ಧಿ ವೇದಿಕೆ ಅಧ್ಯಕ್ಷ ಚಂದ್ರಗಿರಿ ಹತ್ತಿಗೂಡುರು ಹಾಗೂ ಪ್ರಧಾನ ಕಾರ್ಯದರ್ಶಿ ಶಿವಪ್ಪ ರಸ್ತಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT