<p><strong>ಸುರಪುರ:</strong> ‘ಇಂದಿನ ಬೆಲೆ ಏರಿಕೆ ದಿನದಲ್ಲಿ ಅಂಗವಿಕಲರಿಗೆ ನೀಡುತ್ತಿರುವ ಮಾಸಾಶನ ಯಾವುದಕ್ಕೂ ಸಾಲುವುದಿಲ್ಲ. ಅಂಗವಿಕಲರ ಮಾಸಾಶನವನ್ನು ₹ 5 ಸಾವಿರಕ್ಕೆ ಹೆಚ್ಚಿಸಬೇಕು' ಎಂದು ಆಗ್ರಹಿಸಿ ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟದ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ಶಾಸಕ ರಾಜೂಗೌಡ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಂದ್ರ ದೊರೆ ಚಂದಲಾಪುರ ಮಾತನಾಡಿ, 'ಯಾದಗಿರಿ ಜಿಲ್ಲೆಯಲ್ಲಿ 21 ಸಾವಿರಕ್ಕೂ ಹೆಚ್ಚು ಅಂಗವಿಕಲರು ಇದ್ದಾರೆ. ಅವರಿಗೆ ಸಮರ್ಪಕವಾಗಿ ಸಿಗಬೇಕಾದ ಸರ್ಕಾರದ ಸೌಲಭ್ಯಗಳು ದೊರಕುತ್ತಿಲ್ಲ' ಎಂದರು.</p>.<p>'ಅಂಗವಿಕಲರಿಗೆ ವಿವಿಧ ಇಲಾಖೆಗಳಲ್ಲಿ ಮೀಸಲಿರುವ ಶೇ 5ರಷ್ಟು ಸೌಲಭ್ಯ ಸಮರ್ಪಕವಾಗಿ ಕೊಡುವಂತೆ ಅಧಿಕಾರಿಗಳಿಗೆ ತಿಳಿಸಬೇಕು. ವಸತಿ ಯೋಜನೆಯಲ್ಲಿ ಮನೆಗಳನ್ನು ದೊರಕಿಸಿಕೊಡಬೇಕು. ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ಅಂಗವಿಕಲ ಸ್ನೇಹಿ ಶೌಚಾಲಯ ನಿರ್ಮಿಸಬೇಕು' ಎಂದು ಮನವಿ ಮಾಡಿದರು.</p>.<p>'ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಂಗವಿಕಲರಿಗೆ ವೈದ್ಯಕೀಯ ಪ್ರಮಾಣ ಸಮರ್ಪಕವಾಗಿ ದೊರಕಬೇಕು. ಎಲ್ಲ ಆಸ್ಪತ್ರೆಗಳಲ್ಲಿ ಇಎನ್ಟಿ ವೈದ್ಯರನ್ನು ನೇಮಿಸಿ, ಪೂರಕವಾದ ಯಂತ್ರಗಳ ವ್ಯವಸ್ಥೆ ಮಾಡಬೇಕು. ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಬೇಕು' ಎಂದು ವಿನಂತಿಸಿದರು.</p>.<p>ಶರಣಯ್ಯಸ್ವಾಮಿ ಹಿರೇಮಠ, ದೇವಿಂದ್ರಪ್ಪ ಬಾಚಿಮಟ್ಟಿ, ಪ್ರದೀಪಗೌಡ ಪಾಟೀಲ, ಶಂಕ್ರಯ್ಯಸ್ವಾಮಿ ನರಸಿಂಗಪೇಟ, ಈರಣ್ಣ ರತ್ತಾಳ, ಮಾಳಪ್ಪ ಮಾಚಗುಂಡಾಳ, ಭಾಗಪ್ಪ ಆಲ್ದಾಳ, ದೊಡ್ಡಪ್ಪಗೌಡ ನಾಗರಾಳ, ಸುರೇಶ ಬಡಿಗೇರ, ಮಾಳಪ್ಪ ಪುಜಾರಿ, ಮಾಳಪ್ಪ ಚಿಕ್ಕನಳ್ಳಿ, ಭೀಮಣ್ಣಗೌಡ ಭಂಟನೂರ, ಹುಸನಪ್ಪ ದೇವಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಇಂದಿನ ಬೆಲೆ ಏರಿಕೆ ದಿನದಲ್ಲಿ ಅಂಗವಿಕಲರಿಗೆ ನೀಡುತ್ತಿರುವ ಮಾಸಾಶನ ಯಾವುದಕ್ಕೂ ಸಾಲುವುದಿಲ್ಲ. ಅಂಗವಿಕಲರ ಮಾಸಾಶನವನ್ನು ₹ 5 ಸಾವಿರಕ್ಕೆ ಹೆಚ್ಚಿಸಬೇಕು' ಎಂದು ಆಗ್ರಹಿಸಿ ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟದ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ಶಾಸಕ ರಾಜೂಗೌಡ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಂದ್ರ ದೊರೆ ಚಂದಲಾಪುರ ಮಾತನಾಡಿ, 'ಯಾದಗಿರಿ ಜಿಲ್ಲೆಯಲ್ಲಿ 21 ಸಾವಿರಕ್ಕೂ ಹೆಚ್ಚು ಅಂಗವಿಕಲರು ಇದ್ದಾರೆ. ಅವರಿಗೆ ಸಮರ್ಪಕವಾಗಿ ಸಿಗಬೇಕಾದ ಸರ್ಕಾರದ ಸೌಲಭ್ಯಗಳು ದೊರಕುತ್ತಿಲ್ಲ' ಎಂದರು.</p>.<p>'ಅಂಗವಿಕಲರಿಗೆ ವಿವಿಧ ಇಲಾಖೆಗಳಲ್ಲಿ ಮೀಸಲಿರುವ ಶೇ 5ರಷ್ಟು ಸೌಲಭ್ಯ ಸಮರ್ಪಕವಾಗಿ ಕೊಡುವಂತೆ ಅಧಿಕಾರಿಗಳಿಗೆ ತಿಳಿಸಬೇಕು. ವಸತಿ ಯೋಜನೆಯಲ್ಲಿ ಮನೆಗಳನ್ನು ದೊರಕಿಸಿಕೊಡಬೇಕು. ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ಅಂಗವಿಕಲ ಸ್ನೇಹಿ ಶೌಚಾಲಯ ನಿರ್ಮಿಸಬೇಕು' ಎಂದು ಮನವಿ ಮಾಡಿದರು.</p>.<p>'ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಂಗವಿಕಲರಿಗೆ ವೈದ್ಯಕೀಯ ಪ್ರಮಾಣ ಸಮರ್ಪಕವಾಗಿ ದೊರಕಬೇಕು. ಎಲ್ಲ ಆಸ್ಪತ್ರೆಗಳಲ್ಲಿ ಇಎನ್ಟಿ ವೈದ್ಯರನ್ನು ನೇಮಿಸಿ, ಪೂರಕವಾದ ಯಂತ್ರಗಳ ವ್ಯವಸ್ಥೆ ಮಾಡಬೇಕು. ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಬೇಕು' ಎಂದು ವಿನಂತಿಸಿದರು.</p>.<p>ಶರಣಯ್ಯಸ್ವಾಮಿ ಹಿರೇಮಠ, ದೇವಿಂದ್ರಪ್ಪ ಬಾಚಿಮಟ್ಟಿ, ಪ್ರದೀಪಗೌಡ ಪಾಟೀಲ, ಶಂಕ್ರಯ್ಯಸ್ವಾಮಿ ನರಸಿಂಗಪೇಟ, ಈರಣ್ಣ ರತ್ತಾಳ, ಮಾಳಪ್ಪ ಮಾಚಗುಂಡಾಳ, ಭಾಗಪ್ಪ ಆಲ್ದಾಳ, ದೊಡ್ಡಪ್ಪಗೌಡ ನಾಗರಾಳ, ಸುರೇಶ ಬಡಿಗೇರ, ಮಾಳಪ್ಪ ಪುಜಾರಿ, ಮಾಳಪ್ಪ ಚಿಕ್ಕನಳ್ಳಿ, ಭೀಮಣ್ಣಗೌಡ ಭಂಟನೂರ, ಹುಸನಪ್ಪ ದೇವಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>