<p><strong>ಶಹಾಪುರ: </strong>ಭಾರತೀಯ ಹತ್ತಿ ನಿಗಮದ ಆಶ್ರಯದಲ್ಲಿ ತಾಲ್ಲೂಕಿನಲ್ಲಿ ನಾಲ್ಕು ಕಡೆ ಹತ್ತಿ ಖರೀದಿ ಕೇಂದ್ರವನ್ನು ಸ್ಥಾಪಿಸುವುದರ ಜತೆಗೆ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಹತ್ತಿ ಖರೀದಿಸಬೇಕು ಎಂದು ಒತ್ತಾಯಿಸಿ ಬುಧವಾರ ಬಿಜೆಪಿಯ ತಾಲ್ಲೂಕು ಘಟಕದ ಮುಖಂಡರು ಎಪಿಎಂಸಿ ಕಾರ್ಯದರ್ಶಿಗೆ ಮನವಿ ಮಾಡಿದರು.</p>.<p>ಪ್ರಸಕ್ತ ಬಾರಿ ಅತಿವೃಷ್ಟಿಯಿಂದ ರೈತರು ತುಂಬಾ ನಷ್ಟ ಅನುಭವಿಸಿದ್ದಾರೆ. ಹೆಚ್ಚು ಮಳೆಯಾಗಿದ್ದರಿಂದ ಹತ್ತಿ ಬೆಳೆಯು ಸಂಕಷ್ಟಕ್ಕೆ ಸಿಲುಕಿ ಇಳುವರಿ ಕಡಿಮೆಯಾಗಿದೆ. ಸದ್ಯ ಹತ್ತಿ ಧಾರಣೆಯು ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ಗೆ ₹4,200 ಇದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಅಡಿಯಲ್ಲಿ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಿ ಪ್ರತಿ ಕ್ವಿಂಟಲ್ಗೆ ₹7 ಸಾವಿರ ನಿಗದಿಗೊಳಿಸಿದರೆ ರೈತರಿಗೆ ತುಸು ಆಸರೆಯಾಗಲಿದೆ ಎಂದು ಬಿಜೆಪಿಯ ರೈತ ಮುಖಂಡ ಯಲ್ಲಯ್ಯ ನಾಯಕ ವನದುರ್ಗ ಒತ್ತಾಯಿಸಿದರು.</p>.<p>ತಾಲ್ಲೂಕಿನಲ್ಲಿ ಎಂಟಕ್ಕೂ ಹೆಚ್ಚು ಹತ್ತಿ ಕಾರ್ಖಾನೆಗಳಿವೆ. ಧಾರಣೆ ಮಾತ್ರ ಕುಸಿತವಾಗಿದೆ. ಹೆಚ್ಚಿನ ಬೆಲೆಯಲ್ಲಿ ಹತ್ತಿ ಖರೀದಿಸಲು ನಾಲ್ಕು ಕಡೆ ಖರೀದಿ ಕೇಂದ್ರ ಸ್ಥಾಪಿಸಿದರೆ ತ್ವರಿತವಾಗಿ ಹತ್ತಿ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.</p>.<p>ಈಚೆಗೆ ಸುರಿದ ಭಾರಿ ಮಳೆಯಿಂದ ಹತ್ತಿ ಬಳೆದ ರೈತರು ನಷ್ಟ ಅನುಭವಿಸಿದ್ದಾರೆ. ಸರ್ಕಾರ ಅವರಿಗೆ ಪರಿಹಾರ ನೀಡಬೇಕು ಎಂದರು.</p>.<p>ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಅಂಗಡಿ, ಶಾಂತಗೌಡ ದಿಗ್ಗಿ, ತಿಮ್ಮಯ್ಯ ಸೈದಾಪುರ, ಬಸವರಾಜ ಇಜೇರಿ, ಬಸವರಾಜ ಹೇರುಂಡಿ, ಸಂಗಣ್ಣ, ಸಿದ್ದರಾಜ ಮುಡಬೂಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ: </strong>ಭಾರತೀಯ ಹತ್ತಿ ನಿಗಮದ ಆಶ್ರಯದಲ್ಲಿ ತಾಲ್ಲೂಕಿನಲ್ಲಿ ನಾಲ್ಕು ಕಡೆ ಹತ್ತಿ ಖರೀದಿ ಕೇಂದ್ರವನ್ನು ಸ್ಥಾಪಿಸುವುದರ ಜತೆಗೆ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಹತ್ತಿ ಖರೀದಿಸಬೇಕು ಎಂದು ಒತ್ತಾಯಿಸಿ ಬುಧವಾರ ಬಿಜೆಪಿಯ ತಾಲ್ಲೂಕು ಘಟಕದ ಮುಖಂಡರು ಎಪಿಎಂಸಿ ಕಾರ್ಯದರ್ಶಿಗೆ ಮನವಿ ಮಾಡಿದರು.</p>.<p>ಪ್ರಸಕ್ತ ಬಾರಿ ಅತಿವೃಷ್ಟಿಯಿಂದ ರೈತರು ತುಂಬಾ ನಷ್ಟ ಅನುಭವಿಸಿದ್ದಾರೆ. ಹೆಚ್ಚು ಮಳೆಯಾಗಿದ್ದರಿಂದ ಹತ್ತಿ ಬೆಳೆಯು ಸಂಕಷ್ಟಕ್ಕೆ ಸಿಲುಕಿ ಇಳುವರಿ ಕಡಿಮೆಯಾಗಿದೆ. ಸದ್ಯ ಹತ್ತಿ ಧಾರಣೆಯು ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ಗೆ ₹4,200 ಇದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಅಡಿಯಲ್ಲಿ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಿ ಪ್ರತಿ ಕ್ವಿಂಟಲ್ಗೆ ₹7 ಸಾವಿರ ನಿಗದಿಗೊಳಿಸಿದರೆ ರೈತರಿಗೆ ತುಸು ಆಸರೆಯಾಗಲಿದೆ ಎಂದು ಬಿಜೆಪಿಯ ರೈತ ಮುಖಂಡ ಯಲ್ಲಯ್ಯ ನಾಯಕ ವನದುರ್ಗ ಒತ್ತಾಯಿಸಿದರು.</p>.<p>ತಾಲ್ಲೂಕಿನಲ್ಲಿ ಎಂಟಕ್ಕೂ ಹೆಚ್ಚು ಹತ್ತಿ ಕಾರ್ಖಾನೆಗಳಿವೆ. ಧಾರಣೆ ಮಾತ್ರ ಕುಸಿತವಾಗಿದೆ. ಹೆಚ್ಚಿನ ಬೆಲೆಯಲ್ಲಿ ಹತ್ತಿ ಖರೀದಿಸಲು ನಾಲ್ಕು ಕಡೆ ಖರೀದಿ ಕೇಂದ್ರ ಸ್ಥಾಪಿಸಿದರೆ ತ್ವರಿತವಾಗಿ ಹತ್ತಿ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.</p>.<p>ಈಚೆಗೆ ಸುರಿದ ಭಾರಿ ಮಳೆಯಿಂದ ಹತ್ತಿ ಬಳೆದ ರೈತರು ನಷ್ಟ ಅನುಭವಿಸಿದ್ದಾರೆ. ಸರ್ಕಾರ ಅವರಿಗೆ ಪರಿಹಾರ ನೀಡಬೇಕು ಎಂದರು.</p>.<p>ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಅಂಗಡಿ, ಶಾಂತಗೌಡ ದಿಗ್ಗಿ, ತಿಮ್ಮಯ್ಯ ಸೈದಾಪುರ, ಬಸವರಾಜ ಇಜೇರಿ, ಬಸವರಾಜ ಹೇರುಂಡಿ, ಸಂಗಣ್ಣ, ಸಿದ್ದರಾಜ ಮುಡಬೂಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>