<p><strong>ಯಾದಗಿರಿ</strong>: ವಿವಿಧ ಬೇಡಿಕೆಗೆ ಈಡೇರಿಕೆಗೆ ಆಗ್ರಹಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಚೆನ್ನಾರಡ್ಡಿ ಪಾಟೀಲ ತುನ್ನೂರ ನೇತೃತ್ವದಲ್ಲಿ ಹುರುಸಗುಂಡಗಿ ಗ್ರಾಮಸ್ಥರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಸನ್ನತಿ ಬ್ಯಾರೇಜ್ನ ಹಿನ್ನೀರಿನಿಂದ ಮುಳುಗಡೆಯಾದ ಶಹಾಪುರ ತಾಲ್ಲೂಕಿನ ಹುರಸಗುಂಡಗಿ ಗ್ರಾಮದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.</p>.<p>ಈ ವೇಳೆ ಮಾತನಾಡಿದ ಚೆನ್ನಾರಡ್ಡಿ ಪಾಟೀಲ ತುನ್ನೂರ, ಸನ್ನತಿ ಬ್ಯಾರೇಜ್ ನಿರ್ಮಾಣ ಸಂಬಂಧ 2004-05ರಲ್ಲಿ ಹುರಸಗುಂಡಗಿ ಗ್ರಾಮದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಅಲ್ಲದೆ ಬ್ಯಾರೇಜ್ನ ಹಿನ್ನೀರಿನಿಂದ ಗ್ರಾಮ ಮುಳುಗಡೆಯಾಗುವುದರಿಂದ ಪುನರ್ವಸತಿ ಕೇಂದ್ರವೂ ನಿರ್ಮಾಣ ಮಾಡಲಾಗಿದೆ. ಆದರೆ, ಸ್ಥಳಾಂತರಿಸಿದ ಹೊಸ ಗ್ರಾಮದಲ್ಲಿ ಜನತೆಗೆ ಮೂಲಸೌಕರ್ಯ ನೀಡದ ಕಾರಣ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.</p>.<p>120 ಎಕರೆ ಸ್ಥಳದಲ್ಲಿ ಗ್ರಾಮಸ್ಥರಿಗೆ ಪುನರ್ವಸತಿ ಕಲ್ಪಿಸಲಾಗಿದೆ ಆದರೂ ಅಲ್ಲಿ ಶುದ್ಧ ಕುಡಿಯುವ ನೀರು, ಶೌಚಗೃಹ, ಚರಂಡಿ ಹೀಗೆ ಮೂಲಸೌಕರ್ಯದ ಅಭಾವವಿದೆ. ಈ ಕಾರಣದಿಂದ ಜನತೆ ಹಳೆ ಗ್ರಾಮ ಬಿಟ್ಟು ಅಲ್ಲಿಗೆ ತೆರಳುತ್ತಿಲ್ಲ. ಇನ್ನೂ 40 ಜನರಿಗೆ ನಿವೇಶನದ ಹಕ್ಕುಪತ್ರ ವಿತರಿಸಿಲ್ಲ. ಈ ಸಮಸ್ಯೆಗಳನ್ನು ಜಿಲ್ಲಾಡಳಿತ ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು.</p>.<p>ಅಲ್ಲದೆ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಡಯಾಲಿಸಿಸ್ ಘಟಕಗಳು ಸ್ಥಗಿತಗೊಂಡಿದ್ದು, ಇದರಿಂದ ಬಡ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ಈ ಘಟಕ ಆರಂಭಿಸುವಂತೆ ಒತ್ತಾಯಿಸಿದರು.</p>.<p>ಈ ವೇಳೆ ಕಿಸಾನ್ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಮಾಣಿಕರೆಡ್ಡಿ ಕುರಕುಂದಿ, ತಡಿಬಿಡಿ ಮರೀಗೌಡ, ಗ್ರಾಮಸ್ಥರಾದ ವೀರಣ್ಣ ವಿಶ್ವಕರ್ಮ, ಪರಮೇಶ ನಾಯ್ಕಲ್, ಮೋಹನರಾಜ, ದೇವಾನಂದ, ಜಯವಂತ, ಮಲ್ಲಿಕಾರ್ಜುನ , ದೇವರಾಜ, ಈಶ್ವರಪ್ಪ, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ವಿವಿಧ ಬೇಡಿಕೆಗೆ ಈಡೇರಿಕೆಗೆ ಆಗ್ರಹಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಚೆನ್ನಾರಡ್ಡಿ ಪಾಟೀಲ ತುನ್ನೂರ ನೇತೃತ್ವದಲ್ಲಿ ಹುರುಸಗುಂಡಗಿ ಗ್ರಾಮಸ್ಥರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಸನ್ನತಿ ಬ್ಯಾರೇಜ್ನ ಹಿನ್ನೀರಿನಿಂದ ಮುಳುಗಡೆಯಾದ ಶಹಾಪುರ ತಾಲ್ಲೂಕಿನ ಹುರಸಗುಂಡಗಿ ಗ್ರಾಮದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.</p>.<p>ಈ ವೇಳೆ ಮಾತನಾಡಿದ ಚೆನ್ನಾರಡ್ಡಿ ಪಾಟೀಲ ತುನ್ನೂರ, ಸನ್ನತಿ ಬ್ಯಾರೇಜ್ ನಿರ್ಮಾಣ ಸಂಬಂಧ 2004-05ರಲ್ಲಿ ಹುರಸಗುಂಡಗಿ ಗ್ರಾಮದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಅಲ್ಲದೆ ಬ್ಯಾರೇಜ್ನ ಹಿನ್ನೀರಿನಿಂದ ಗ್ರಾಮ ಮುಳುಗಡೆಯಾಗುವುದರಿಂದ ಪುನರ್ವಸತಿ ಕೇಂದ್ರವೂ ನಿರ್ಮಾಣ ಮಾಡಲಾಗಿದೆ. ಆದರೆ, ಸ್ಥಳಾಂತರಿಸಿದ ಹೊಸ ಗ್ರಾಮದಲ್ಲಿ ಜನತೆಗೆ ಮೂಲಸೌಕರ್ಯ ನೀಡದ ಕಾರಣ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.</p>.<p>120 ಎಕರೆ ಸ್ಥಳದಲ್ಲಿ ಗ್ರಾಮಸ್ಥರಿಗೆ ಪುನರ್ವಸತಿ ಕಲ್ಪಿಸಲಾಗಿದೆ ಆದರೂ ಅಲ್ಲಿ ಶುದ್ಧ ಕುಡಿಯುವ ನೀರು, ಶೌಚಗೃಹ, ಚರಂಡಿ ಹೀಗೆ ಮೂಲಸೌಕರ್ಯದ ಅಭಾವವಿದೆ. ಈ ಕಾರಣದಿಂದ ಜನತೆ ಹಳೆ ಗ್ರಾಮ ಬಿಟ್ಟು ಅಲ್ಲಿಗೆ ತೆರಳುತ್ತಿಲ್ಲ. ಇನ್ನೂ 40 ಜನರಿಗೆ ನಿವೇಶನದ ಹಕ್ಕುಪತ್ರ ವಿತರಿಸಿಲ್ಲ. ಈ ಸಮಸ್ಯೆಗಳನ್ನು ಜಿಲ್ಲಾಡಳಿತ ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು.</p>.<p>ಅಲ್ಲದೆ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಡಯಾಲಿಸಿಸ್ ಘಟಕಗಳು ಸ್ಥಗಿತಗೊಂಡಿದ್ದು, ಇದರಿಂದ ಬಡ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ಈ ಘಟಕ ಆರಂಭಿಸುವಂತೆ ಒತ್ತಾಯಿಸಿದರು.</p>.<p>ಈ ವೇಳೆ ಕಿಸಾನ್ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಮಾಣಿಕರೆಡ್ಡಿ ಕುರಕುಂದಿ, ತಡಿಬಿಡಿ ಮರೀಗೌಡ, ಗ್ರಾಮಸ್ಥರಾದ ವೀರಣ್ಣ ವಿಶ್ವಕರ್ಮ, ಪರಮೇಶ ನಾಯ್ಕಲ್, ಮೋಹನರಾಜ, ದೇವಾನಂದ, ಜಯವಂತ, ಮಲ್ಲಿಕಾರ್ಜುನ , ದೇವರಾಜ, ಈಶ್ವರಪ್ಪ, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>