ಸಮಿತಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಮಾತನಾಡಿ,ಚಿಕ್ಕಮಗಳೂರಿನಲ್ಲಿ ಈಚೆಗೆ ನಡೆದ ದಲಿತ ಯುವಕನಿಗೆ ಮೂತ್ರ ನೆಕ್ಕಿಸಿದ ಘಟನೆ ಖಂಡನೀಯವಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಜಯಪುರ ಜಿಲ್ಲೆಯಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಗದಗನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಬೆಳಗಾವಿ ರಾಮದುರ್ಗದಲ್ಲಿ ಅತ್ಯಾಚಾರ, ಸುರಪುರ ತಾಲ್ಲೂಕಿನ ಖಾನಾಪುರ ದಲಿತ ಬಸಪ್ಪನ ಮೇಲೆ ದೌರ್ಜನ್ಯ ನಡೆದಿದ್ದು, ಇವಿಷ್ಟು ಬೆಳಕಿಗೆ ಬಂದಿದ್ದು, ಇನ್ನು ಬೆಳಕಿಗೆ ಬಾರದ ಎಷ್ಟೋ ಘಟನೆಗಳು ನಡೆದಿವೆ ಎಂದು ದೂರಿದರು. ಸರ್ಕಾರ ದಲಿತರ ಹಿತ ಕಾಯುವಲ್ಲಿ ವಿಫಲವಾಗಿದೆ. ಕಠಿಣ ಕ್ರಮ ಕೈಗೊಂಡು ದೌರ್ಜನ್ಯ ನಿಯಂತ್ರಿಸುವಂತೆ ಒತ್ತಾಯಿಸಿದರು.