<p><strong>ಸುರಪುರ: </strong>ನಾರಾಯಣಪುರ ಜಲಾಶಯದಿಂದ ಮಂಗಳವಾರ 2.54 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಿರುವುದರಿಂದ ನದಿ ತೀರದ ಜಮೀನುಗಳು ಜಲಾವೃತವಾಗಿವೆ.</p>.<p>ನದಿ ಪಾತ್ರದ ಗ್ರಾಮಗಳ ಸುಮಾರು 500 ಹೆಕ್ಟೇರ್ಗಿಂತಲೂ ಹೆಚ್ಚಿನ ಜಮೀನುಗಳಿಗೆ ನೀರು ನುಗ್ಗಿದೆ. ಬೆಳೆಗಳು ಜಲಾವೃತವಾಗಿದ್ದು, ರೈತರು ಹಾನಿಯ ಭೀತಿ ಎದುರಿಸುತ್ತಿದ್ದಾರೆ.</p>.<p>ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದು, ಬೆಳೆಗಳಿಗೆ ಎರಡು ಬಾರಿ ಗೊಬ್ಬರಗಳನ್ನು ಹಾಕಿದ್ದರು. ಕಳೆದ ವರ್ಷದ ಪ್ರವಾಹದ ಹೊಡೆತ ಸುಧಾರಿಸಿಕೊಳ್ಳುವ ಮುನ್ನವೇ ಮತ್ತೊಂದು ಪ್ರವಾಹದ ಅಘಾತ ಎದುರಾಗಿದೆ. ಇದು ರೈತರ ಗಾಯದ ಮೇಲೆ ಉಪ್ಪು ಸವರಿಂದಂತಾಗಿದೆ.</p>.<p>‘ಕಳೆದ ಬಾರಿ ಬೆಳೆ ಸೇರಿದಂತೆ ಮನೆ ಕಳೆದುಕೊಂಡು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದವು. ಈ ವರ್ಷವೂ ನದಿಯ ನೀರಿನ ಹರಿಯುವ ಪ್ರಮಾಣದಲ್ಲಿ ಹೆಚ್ಚಳ ಕಂಡುಬರುತ್ತದೆ. ದೇವರು ಕಷ್ಟದ ಮೇಲೆ ಕಷ್ಟ ನೀಡುತ್ತಿದ್ದಾನೆ’ ಎಂದು ನದಿ ತೀರದ ಗ್ರಾಮದ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.</p>.<p>ಶೆಳ್ಳಗಿ, ಮುಷ್ಠಳ್ಳಿ, ಕಾಗರಹಾಳ, ದೇವಾಪುರ, ಹಾವಿನಾಳ, ಹೆಮನೂರು, ಚೌಡೇಶ್ವರಿಹಾಳ ಸೇರಿದಂತೆ ಕೆಲ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದು, ಭತ್ತದ ಗದ್ದೆಗಳು, ಹತ್ತಿ, ತೊಗರಿ ಬೆಳೆಗಳು ನೀರಿನಲ್ಲಿ ನಿಂತಿವೆ.</p>.<p>ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿಗೆ ಅಧಿಕ ಪ್ರಮಾಣದಲ್ಲಿರುವ ನೀರನ್ನು ಹರಿಬಿಡುತ್ತಿರುವುದರಿಂದ ನದಿಯ ಹತ್ತಿರ ಯಾರೂ ಕೂಡ ಹೋಗಬಾರದು ಎಂದು ಆಯ ಪಂಚಾಯತಿಯವರು ಡಂಗೂರ ಸಾರಿದ್ದಾರೆ.</p>.<p>ನದಿಯ ಮೇಲ್ದಂಡೆಯ ಭಾಗದಲ್ಲಿರುವ ಜಮೀನುಗಳಿಗೆ ನೀರು ನುಗ್ಗುತ್ತದೆ. ಮೋಟಾರ್ಗಳನ್ನು ಎತ್ತುವ ದುಸ್ಸಾಹಸಕ್ಕೆ ಕೈ ಹಾಕಬಾರದು. ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.</p>.<p>***</p>.<p>ಕಳೆದ ಬಾರಿ ಬಂದ ಪ್ರವಾಹದಿಂದ ಸುಧಾರಿಸಿಕೊಳ್ಳುವ ಮುನ್ನವೆ ಮತ್ತೊಂದು ಪ್ರವಾಹ ಎದುರಾಗಿದೆ. ಅಧಿಕಾರಿಗಳು ರೈತರ ನೆರವಿಗೆ ಧಾವಿಸಬೇಕು<br />- ಮಲ್ಲಿಕಾರ್ಜುನ ಸತ್ಯಂಪೇಟೆ, ರಾಜ್ಯ ಘಟಕದ ಕಾರ್ಯದರ್ಶಿ ರೈತ ಸಂಘ</p>.<p>***</p>.<p>ನೀರು ನುಗ್ಗಿರುವ ಗ್ರಾಮಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. ಬೆಳೆ ಹಾನಿ ವರದಿ ಸರ್ಕಾರಕ್ಕೆ ಸಲ್ಲಿಸಿ, ರೈತರಿಗೆ ನೆರವು ಒದಗಿಸಿಕೊಡಲಾಗುವುದು<br />- ನಿಂಗಣ್ಣ ಬಿರಾದಾರ, ತಹಶೀಲ್ದಾರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ: </strong>ನಾರಾಯಣಪುರ ಜಲಾಶಯದಿಂದ ಮಂಗಳವಾರ 2.54 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಿರುವುದರಿಂದ ನದಿ ತೀರದ ಜಮೀನುಗಳು ಜಲಾವೃತವಾಗಿವೆ.</p>.<p>ನದಿ ಪಾತ್ರದ ಗ್ರಾಮಗಳ ಸುಮಾರು 500 ಹೆಕ್ಟೇರ್ಗಿಂತಲೂ ಹೆಚ್ಚಿನ ಜಮೀನುಗಳಿಗೆ ನೀರು ನುಗ್ಗಿದೆ. ಬೆಳೆಗಳು ಜಲಾವೃತವಾಗಿದ್ದು, ರೈತರು ಹಾನಿಯ ಭೀತಿ ಎದುರಿಸುತ್ತಿದ್ದಾರೆ.</p>.<p>ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದು, ಬೆಳೆಗಳಿಗೆ ಎರಡು ಬಾರಿ ಗೊಬ್ಬರಗಳನ್ನು ಹಾಕಿದ್ದರು. ಕಳೆದ ವರ್ಷದ ಪ್ರವಾಹದ ಹೊಡೆತ ಸುಧಾರಿಸಿಕೊಳ್ಳುವ ಮುನ್ನವೇ ಮತ್ತೊಂದು ಪ್ರವಾಹದ ಅಘಾತ ಎದುರಾಗಿದೆ. ಇದು ರೈತರ ಗಾಯದ ಮೇಲೆ ಉಪ್ಪು ಸವರಿಂದಂತಾಗಿದೆ.</p>.<p>‘ಕಳೆದ ಬಾರಿ ಬೆಳೆ ಸೇರಿದಂತೆ ಮನೆ ಕಳೆದುಕೊಂಡು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದವು. ಈ ವರ್ಷವೂ ನದಿಯ ನೀರಿನ ಹರಿಯುವ ಪ್ರಮಾಣದಲ್ಲಿ ಹೆಚ್ಚಳ ಕಂಡುಬರುತ್ತದೆ. ದೇವರು ಕಷ್ಟದ ಮೇಲೆ ಕಷ್ಟ ನೀಡುತ್ತಿದ್ದಾನೆ’ ಎಂದು ನದಿ ತೀರದ ಗ್ರಾಮದ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.</p>.<p>ಶೆಳ್ಳಗಿ, ಮುಷ್ಠಳ್ಳಿ, ಕಾಗರಹಾಳ, ದೇವಾಪುರ, ಹಾವಿನಾಳ, ಹೆಮನೂರು, ಚೌಡೇಶ್ವರಿಹಾಳ ಸೇರಿದಂತೆ ಕೆಲ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದು, ಭತ್ತದ ಗದ್ದೆಗಳು, ಹತ್ತಿ, ತೊಗರಿ ಬೆಳೆಗಳು ನೀರಿನಲ್ಲಿ ನಿಂತಿವೆ.</p>.<p>ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿಗೆ ಅಧಿಕ ಪ್ರಮಾಣದಲ್ಲಿರುವ ನೀರನ್ನು ಹರಿಬಿಡುತ್ತಿರುವುದರಿಂದ ನದಿಯ ಹತ್ತಿರ ಯಾರೂ ಕೂಡ ಹೋಗಬಾರದು ಎಂದು ಆಯ ಪಂಚಾಯತಿಯವರು ಡಂಗೂರ ಸಾರಿದ್ದಾರೆ.</p>.<p>ನದಿಯ ಮೇಲ್ದಂಡೆಯ ಭಾಗದಲ್ಲಿರುವ ಜಮೀನುಗಳಿಗೆ ನೀರು ನುಗ್ಗುತ್ತದೆ. ಮೋಟಾರ್ಗಳನ್ನು ಎತ್ತುವ ದುಸ್ಸಾಹಸಕ್ಕೆ ಕೈ ಹಾಕಬಾರದು. ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.</p>.<p>***</p>.<p>ಕಳೆದ ಬಾರಿ ಬಂದ ಪ್ರವಾಹದಿಂದ ಸುಧಾರಿಸಿಕೊಳ್ಳುವ ಮುನ್ನವೆ ಮತ್ತೊಂದು ಪ್ರವಾಹ ಎದುರಾಗಿದೆ. ಅಧಿಕಾರಿಗಳು ರೈತರ ನೆರವಿಗೆ ಧಾವಿಸಬೇಕು<br />- ಮಲ್ಲಿಕಾರ್ಜುನ ಸತ್ಯಂಪೇಟೆ, ರಾಜ್ಯ ಘಟಕದ ಕಾರ್ಯದರ್ಶಿ ರೈತ ಸಂಘ</p>.<p>***</p>.<p>ನೀರು ನುಗ್ಗಿರುವ ಗ್ರಾಮಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. ಬೆಳೆ ಹಾನಿ ವರದಿ ಸರ್ಕಾರಕ್ಕೆ ಸಲ್ಲಿಸಿ, ರೈತರಿಗೆ ನೆರವು ಒದಗಿಸಿಕೊಡಲಾಗುವುದು<br />- ನಿಂಗಣ್ಣ ಬಿರಾದಾರ, ತಹಶೀಲ್ದಾರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>