ಕೆಂಗೇರಿ ಬಡಾವಣೆಯ ಕೊನೆಯ ಭಾಗದಲ್ಲಿರುವ ಕಚೇರಿಗೆ ತೆರಳಲು ರಸ್ತೆಯೇ ಇಲ್ಲವಾದ್ದರಿಂದ ಅನಿವಾರ್ಯವಾಗಿ ಕಿರಿದಾದ ರಸ್ತೆಯಲ್ಲಿ ರೈತರು ತೆರಳುತ್ತಿದ್ದಾರೆ. ಆ ರಸ್ತೆಯೂ ಮಳೆಯಿಂದ ಕೆಸರು ಗದ್ದೆಯಾಗಿದ್ದು ದ್ವಿಚಕ್ರ, ತ್ರಿಚಕ್ರ ವಾಹನಗಳು ಕೆಸರಿನಲ್ಲಿ ಸಿಲುಕಿ ಪರದಾಡುತ್ತಿವೆ. ಇದಲ್ಲದೆ ಅನೇಕ ರೈತರು ಕೆಸರಿನಲ್ಲಿ ಸಿಲುಕಿ ನೆಲಕ್ಕೆ ಬಿದ್ದ ಉದಾಹರಣೆಗಳು ಇವೆ. ಸರಿಯಾದ ರಸ್ತೆ ನಿರ್ಮಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ರೈತರ ಒತ್ತಾಯವಾಗಿದೆ.