<p><strong>ಕೆಂಭಾವಿ: </strong>ಹಾಡುಹಗಲೇ ಮನೆ ಯೊಂದರ ಬೀಗ ಮುರಿದುಕಳ್ಳತನ ಮಾಡಿರುವ ಘಟನೆ ಶನಿವಾರ ಸಮೀಪದ ಯಾಳಗಿಗ್ರಾಮದಲ್ಲಿ ನಡೆದಿದೆ.</p>.<p>ಗೌಡಪ್ಪಗೌಡ ಬೊಮ್ಮರೆಡ್ಡಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಪೆಟ್ಟಿಗೆಯಲ್ಲಿ ಇಟ್ಟಿದ್ದ ಸುಮಾರು 120 ಗ್ರಾಂ (12 ತೊಲೆ) ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ.</p>.<p>ಮನೆ ಮಾಲೀಕ ಹಾಗೂ ಕುಟುಂಬದ ಸದಸ್ಯರು ದಿನ ನಿತ್ಯದಂತೆ ಹೊಲದಲ್ಲಿ ಕೆಲಸಕ್ಕೆಂದು ತೆರಳಿದಾಗ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ.</p>.<p>ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲಿಸಿದರು. ಬಳಿಕ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ತಪಾಸಣೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಂಭಾವಿ ಠಾಣೆಯ ಪೊಲೀಸರುತನಿಖೆ ಕೈಗೊಂಡಿದ್ದಾರೆ.</p>.<p>ಈ ಹಿಂದೆ ಇದೇ ಏರಿಯಾದಲ್ಲಿ ಎರಡು ಮನೆಗಳಲ್ಲಿ ಕಳ್ಳತನವಾಗಿದ್ದವು. ಆದರೆ ಮನೆ ಮಾಲಿಕರು ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಪಿಎಸ್ಐ (ಅಪರಾಧ ವಿಭಾಗ) ವೆಂಕಣ್ಣ ಶಹಾಪುರಕರ್,ಸಿಬ್ಬಂದಿ ಬೀರಪ್ಪ, ಸುಭಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ: </strong>ಹಾಡುಹಗಲೇ ಮನೆ ಯೊಂದರ ಬೀಗ ಮುರಿದುಕಳ್ಳತನ ಮಾಡಿರುವ ಘಟನೆ ಶನಿವಾರ ಸಮೀಪದ ಯಾಳಗಿಗ್ರಾಮದಲ್ಲಿ ನಡೆದಿದೆ.</p>.<p>ಗೌಡಪ್ಪಗೌಡ ಬೊಮ್ಮರೆಡ್ಡಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಪೆಟ್ಟಿಗೆಯಲ್ಲಿ ಇಟ್ಟಿದ್ದ ಸುಮಾರು 120 ಗ್ರಾಂ (12 ತೊಲೆ) ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ.</p>.<p>ಮನೆ ಮಾಲೀಕ ಹಾಗೂ ಕುಟುಂಬದ ಸದಸ್ಯರು ದಿನ ನಿತ್ಯದಂತೆ ಹೊಲದಲ್ಲಿ ಕೆಲಸಕ್ಕೆಂದು ತೆರಳಿದಾಗ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ.</p>.<p>ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲಿಸಿದರು. ಬಳಿಕ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ತಪಾಸಣೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಂಭಾವಿ ಠಾಣೆಯ ಪೊಲೀಸರುತನಿಖೆ ಕೈಗೊಂಡಿದ್ದಾರೆ.</p>.<p>ಈ ಹಿಂದೆ ಇದೇ ಏರಿಯಾದಲ್ಲಿ ಎರಡು ಮನೆಗಳಲ್ಲಿ ಕಳ್ಳತನವಾಗಿದ್ದವು. ಆದರೆ ಮನೆ ಮಾಲಿಕರು ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಪಿಎಸ್ಐ (ಅಪರಾಧ ವಿಭಾಗ) ವೆಂಕಣ್ಣ ಶಹಾಪುರಕರ್,ಸಿಬ್ಬಂದಿ ಬೀರಪ್ಪ, ಸುಭಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>