ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ ಮಾತನಾಡಿ, ‘ಪ್ರತಿದಿನ ಸುಮಾರು 300 ಮಕ್ಕಳು ಅತಿಸಾರ ಭೇದಿಯಿಂದ ಉಂಟಾಗುವ ನಿರ್ಜಲೀಕರಣದಿಂದ ಸಾವನ್ನಪ್ಪುತ್ತಿದ್ದಾರೆ. ರೋಟಾ ವೈರಸ್ನಿಂದ ಉಂಟಾಗುವ ಅತಿಸಾರ ಭೇದಿಯನ್ನು ಲಸಿಕೆಯಿಂದ ತಡೆಗಟ್ಟಬಹುದು’ ಎಂದರು.
ಡಾ.ವೀರೇಶ, ಡಾ.ಹಣಮಂತರೆಡ್ಡಿ, ಸುದರ್ಶನ, ಗಂಗಾಧರ, ಆಶಾ ಕಾರ್ಯಕರ್ತೆಯರು, ಮಹಿಳೆಯರು ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ವಂದಿಸಿದರು.