<p><strong>ಸೈದಾಪುರ:</strong> ಚಿತ್ತಾಪುರ, ಗುರುಮಠಕಲ್ನಲ್ಲಿ ಆರ್ಎಸ್ಎಸ್ ಪಥಸಂಚಲನ ವಿವಾದ ನಡುವೆ ಸೈದಾಪುರ ಪಟ್ಟಣದಲ್ಲಿ ಸೋಮವಾರ ಆರ್ಎಸ್ಎಸ್ ಪಥಸಂಚಲನ ಯಶಸ್ವಿಯಾಗಿ ನಡೆಯಿತು.</p>.<p>ಪಟ್ಟಣದಲ್ಲಿ ಆರ್ಎಸ್ಎಸ್ ಶತಾಬ್ದಿ ಹಿನ್ನಲೆ ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಸೈದಾಪುರನಲ್ಲಿ ಜಿಲ್ಲಾಡಳಿತದಿಂದ ಅನುಮತಿ ಪಡೆದು, ಸರ್ಕಾರದ ನಿಯಮದಂತೆ ಶಾಂತಿಯುತ ಪಥಸಂಚಲನ ಜರುಗಿತು.</p>.<p>ಪಟ್ಟಣದ ಮಹಾವೀರ ಶಾಲೆಯಿಂದ ಅಂಬಿಗರ ಚೌಡಯ್ಯ, ಹೆಮ್ಮರೆಡ್ಡಿ ಮಲ್ಲಮ್ಮ, ಕನಕದಾಸ, ಬಾಬು ಜಗಜೀವನ ರಾಮ್, ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ರೈಲು ನಿಲ್ದಾಣ, ಬಸವೇಶ್ವರ ವೃತ್ತ, ಗಾಂಧಿ ವೃತ್ತ ಸೇರಿದಂತೆ ಪ್ರಮುಖ ಮಾರ್ಗದಲ್ಲಿ ಪಥಸಂಚಲನ ನಡೆಯಿತು.</p>.<p>ಪಥ ಸಂಚಲನದಲ್ಲಿ ಮಕ್ಕಳು, ಯುವಕರು ಸೇರಿದಂತೆ ಹಿರಿಯ ನಾಗರಿಕರು ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಯಾವುದೇ ಅಹಿತಕರ ಘಟನೆ ಜರುಗದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತು.</p>.<p>ಗಣವೇಷಧಾರಿಗಳ ಮೇಲೆ ಪುಷ್ಪಾರ್ಪಣೆ: ಪಟ್ಟಣದ ಬಹುತೇಕ ವ್ಯಾಪರಸ್ಥರು, ಸಾರ್ವಜನಿಕರು ಅಂಗಡಿಗಳ ಮುಂದೆ ನಿಂತು, ಪಥಸಂಚಲನದಲ್ಲಿ ಗಣವೇಷಧಾರಿಗಳಿಗೆ ಪುಷ್ಪ ಮಳೆಗೈದರು.</p>.<p>ಮಹಿಳೆಯರು ರಸ್ತೆ ಉದ್ದಗಲಕ್ಕೂ ರಂಗೋಲಿ ಚಿತ್ತಾರ ಬಿಡಿಸಿದ್ದರು. ದೇಶಭಕ್ತರ ಭಾವಚಿತ್ರವಿಟ್ಟು ಸ್ವಯಂ ಸೇವಕರಿಗೆ ಅದ್ಧೂರಿ ಸ್ವಾಗತ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ:</strong> ಚಿತ್ತಾಪುರ, ಗುರುಮಠಕಲ್ನಲ್ಲಿ ಆರ್ಎಸ್ಎಸ್ ಪಥಸಂಚಲನ ವಿವಾದ ನಡುವೆ ಸೈದಾಪುರ ಪಟ್ಟಣದಲ್ಲಿ ಸೋಮವಾರ ಆರ್ಎಸ್ಎಸ್ ಪಥಸಂಚಲನ ಯಶಸ್ವಿಯಾಗಿ ನಡೆಯಿತು.</p>.<p>ಪಟ್ಟಣದಲ್ಲಿ ಆರ್ಎಸ್ಎಸ್ ಶತಾಬ್ದಿ ಹಿನ್ನಲೆ ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಸೈದಾಪುರನಲ್ಲಿ ಜಿಲ್ಲಾಡಳಿತದಿಂದ ಅನುಮತಿ ಪಡೆದು, ಸರ್ಕಾರದ ನಿಯಮದಂತೆ ಶಾಂತಿಯುತ ಪಥಸಂಚಲನ ಜರುಗಿತು.</p>.<p>ಪಟ್ಟಣದ ಮಹಾವೀರ ಶಾಲೆಯಿಂದ ಅಂಬಿಗರ ಚೌಡಯ್ಯ, ಹೆಮ್ಮರೆಡ್ಡಿ ಮಲ್ಲಮ್ಮ, ಕನಕದಾಸ, ಬಾಬು ಜಗಜೀವನ ರಾಮ್, ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ರೈಲು ನಿಲ್ದಾಣ, ಬಸವೇಶ್ವರ ವೃತ್ತ, ಗಾಂಧಿ ವೃತ್ತ ಸೇರಿದಂತೆ ಪ್ರಮುಖ ಮಾರ್ಗದಲ್ಲಿ ಪಥಸಂಚಲನ ನಡೆಯಿತು.</p>.<p>ಪಥ ಸಂಚಲನದಲ್ಲಿ ಮಕ್ಕಳು, ಯುವಕರು ಸೇರಿದಂತೆ ಹಿರಿಯ ನಾಗರಿಕರು ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಯಾವುದೇ ಅಹಿತಕರ ಘಟನೆ ಜರುಗದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತು.</p>.<p>ಗಣವೇಷಧಾರಿಗಳ ಮೇಲೆ ಪುಷ್ಪಾರ್ಪಣೆ: ಪಟ್ಟಣದ ಬಹುತೇಕ ವ್ಯಾಪರಸ್ಥರು, ಸಾರ್ವಜನಿಕರು ಅಂಗಡಿಗಳ ಮುಂದೆ ನಿಂತು, ಪಥಸಂಚಲನದಲ್ಲಿ ಗಣವೇಷಧಾರಿಗಳಿಗೆ ಪುಷ್ಪ ಮಳೆಗೈದರು.</p>.<p>ಮಹಿಳೆಯರು ರಸ್ತೆ ಉದ್ದಗಲಕ್ಕೂ ರಂಗೋಲಿ ಚಿತ್ತಾರ ಬಿಡಿಸಿದ್ದರು. ದೇಶಭಕ್ತರ ಭಾವಚಿತ್ರವಿಟ್ಟು ಸ್ವಯಂ ಸೇವಕರಿಗೆ ಅದ್ಧೂರಿ ಸ್ವಾಗತ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>