<p><strong>ಯಾದಗಿರಿ:</strong> ಆನೆಕಾಲು ರೋಗದಿಂದ ಮುಕ್ತಿ ಪಡೆಯಲು ಇದೇ ಡಿ.15ರಿಂದ 24ರ ವರೆಗೆ ಜಿಲ್ಲೆಯಾದ್ಯಂತ ಸಾಮೂಹಿಕ ಔಷಧ ಸೇವನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ರೋಗ ಹರಡದಂತೆ ತ್ರಿವಳಿ ಮಾತ್ರೆಗಳನ್ನು ನುಂಗಿಸುವರು. ಈ ಸಮಯದಲ್ಲಿ ಜಿಲ್ಲೆಯ ಜನರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಮನವಿ ಮಾಡಿದರು.</p>.<p>ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಆನೆಕಾಲು ರೋಗ ನಿರ್ಮೂಲನೆಗಾಗಿ 2ನೇ ಸುತ್ತಿನ ಸಾಮೂಹಿಕ ಔಷಧ ಸೇವನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಾತ್ರೆಗಳ ಸೇವನೆಯಿಂದ ವಂಚಿತರಾದವರಿಗೆ ಮಾಪ್-ಆಪ್ ಕಾರ್ಯಕ್ರಮದ ಮೂಲಕ ಗುಳಿಗೆಗಳನ್ನು ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಫಲಾನುಭವಿಗಳು ತ್ರಿವಳಿ ಗುಳಿಗೆಗಳನ್ನು ಸೇವಿಸಿ ಆನೆಕಾಲು ರೋಗದಿಂದ ಮುಕ್ತಿ ಪಡೆಯಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.</p>.<p>ಜಿಲ್ಲೆಯಲ್ಲಿ ಲಿಂಫೆಟಿಕ್ ಫೈಲೇರಿಯಾ ರೋಗಿಗಳ ಸಂಖ್ಯೆ 2,123 ಇದ್ದು, 2,46,769 ಮನೆಗಳಿವೆ. 13,0,2331 ಜನರಿಗೆ ಮಾತ್ರೆ ನುಂಗಿಸಬೇಕಿರುತ್ತದೆ. 2,258 ಸಿಬ್ಬಂದಿ ಈ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಮೇಲ್ವಿಚಾರಣೆಗಾಗಿ 226 ಜನರನ್ನು ನಿಯೋಜಿಸಲಾಗಿದೆ ಎಂದರು.</p>.<p>ರಾಷ್ಟ್ರೀಯ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಮಾತನಾಡಿ, ರಾಷ್ಟ್ರದ ಏಳಿಗೆಗೆ ಇಂತಹ ಕಾರ್ಯಕ್ರಮಗಳು ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಆನೆಕಾಲು ರೋಗವನ್ನು 2021 ರೊಳಗೆ ಸಂಪೂರ್ಣವಾಗಿ ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮದ ಯಶಸ್ವಿಗೆ ತೆಗೆದುಕೊಂಡಿರುವ ಕ್ರಮ ಉತ್ತಮವಾಗಿದ್ದು, ಔಷಧಿ ಸೇವನೆಯಿಂದ ಸಮಾಜದಲ್ಲಿ ಸೋಂಕು ಹರಡದಂತೆ ತಡೆಗಟ್ಟಿ ಮುಂದಿನ ಪೀಳಿಗೆಯನ್ನು ರೋಗ ಮುಕ್ತ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.</p>.<p>ಎನ್ವಿಬಿಡಿಸಿಪಿ ಹೆಚ್ಚುವರಿ ನಿರ್ದೇಶಕ ಡಾ.ನೂಪುರ್ ರಾಯ್, ಎನ್ವಿಬಿಡಿಸಿಪಿ ಸಹ ನಿರ್ದೇಶಕ ಡಾ.ರಮೇಶ ಕೆ.ಕೌಲಗುಡ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಲಕ್ಷ್ಮಿಕಾಂತ್ ಇದ್ದರು.</p>.<p>***</p>.<p><strong>2 ವರ್ಷ ಮೇಲ್ಪಟ್ಟು ವಿವಿಧ ವಯೋಮಾನದವರು ವರ್ಷದಲ್ಲಿ ಒಂದು ಬಾರಿ ಐವರ್ಮೆಕ್ಟಿನ್, ಡಿಇಸಿ ಮಾತ್ರೆಗಳನ್ನು ಸೇವಿಸುವುದರಿಂದ ಆನೆಕಾಲು ರೋಗ ತಡೆಗಟ್ಟಬಹುದು<br />ಡಾ. ಇಂದುಮತಿ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಆನೆಕಾಲು ರೋಗದಿಂದ ಮುಕ್ತಿ ಪಡೆಯಲು ಇದೇ ಡಿ.15ರಿಂದ 24ರ ವರೆಗೆ ಜಿಲ್ಲೆಯಾದ್ಯಂತ ಸಾಮೂಹಿಕ ಔಷಧ ಸೇವನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ರೋಗ ಹರಡದಂತೆ ತ್ರಿವಳಿ ಮಾತ್ರೆಗಳನ್ನು ನುಂಗಿಸುವರು. ಈ ಸಮಯದಲ್ಲಿ ಜಿಲ್ಲೆಯ ಜನರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಮನವಿ ಮಾಡಿದರು.</p>.<p>ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಆನೆಕಾಲು ರೋಗ ನಿರ್ಮೂಲನೆಗಾಗಿ 2ನೇ ಸುತ್ತಿನ ಸಾಮೂಹಿಕ ಔಷಧ ಸೇವನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಾತ್ರೆಗಳ ಸೇವನೆಯಿಂದ ವಂಚಿತರಾದವರಿಗೆ ಮಾಪ್-ಆಪ್ ಕಾರ್ಯಕ್ರಮದ ಮೂಲಕ ಗುಳಿಗೆಗಳನ್ನು ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಫಲಾನುಭವಿಗಳು ತ್ರಿವಳಿ ಗುಳಿಗೆಗಳನ್ನು ಸೇವಿಸಿ ಆನೆಕಾಲು ರೋಗದಿಂದ ಮುಕ್ತಿ ಪಡೆಯಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.</p>.<p>ಜಿಲ್ಲೆಯಲ್ಲಿ ಲಿಂಫೆಟಿಕ್ ಫೈಲೇರಿಯಾ ರೋಗಿಗಳ ಸಂಖ್ಯೆ 2,123 ಇದ್ದು, 2,46,769 ಮನೆಗಳಿವೆ. 13,0,2331 ಜನರಿಗೆ ಮಾತ್ರೆ ನುಂಗಿಸಬೇಕಿರುತ್ತದೆ. 2,258 ಸಿಬ್ಬಂದಿ ಈ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಮೇಲ್ವಿಚಾರಣೆಗಾಗಿ 226 ಜನರನ್ನು ನಿಯೋಜಿಸಲಾಗಿದೆ ಎಂದರು.</p>.<p>ರಾಷ್ಟ್ರೀಯ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಮಾತನಾಡಿ, ರಾಷ್ಟ್ರದ ಏಳಿಗೆಗೆ ಇಂತಹ ಕಾರ್ಯಕ್ರಮಗಳು ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಆನೆಕಾಲು ರೋಗವನ್ನು 2021 ರೊಳಗೆ ಸಂಪೂರ್ಣವಾಗಿ ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮದ ಯಶಸ್ವಿಗೆ ತೆಗೆದುಕೊಂಡಿರುವ ಕ್ರಮ ಉತ್ತಮವಾಗಿದ್ದು, ಔಷಧಿ ಸೇವನೆಯಿಂದ ಸಮಾಜದಲ್ಲಿ ಸೋಂಕು ಹರಡದಂತೆ ತಡೆಗಟ್ಟಿ ಮುಂದಿನ ಪೀಳಿಗೆಯನ್ನು ರೋಗ ಮುಕ್ತ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.</p>.<p>ಎನ್ವಿಬಿಡಿಸಿಪಿ ಹೆಚ್ಚುವರಿ ನಿರ್ದೇಶಕ ಡಾ.ನೂಪುರ್ ರಾಯ್, ಎನ್ವಿಬಿಡಿಸಿಪಿ ಸಹ ನಿರ್ದೇಶಕ ಡಾ.ರಮೇಶ ಕೆ.ಕೌಲಗುಡ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಲಕ್ಷ್ಮಿಕಾಂತ್ ಇದ್ದರು.</p>.<p>***</p>.<p><strong>2 ವರ್ಷ ಮೇಲ್ಪಟ್ಟು ವಿವಿಧ ವಯೋಮಾನದವರು ವರ್ಷದಲ್ಲಿ ಒಂದು ಬಾರಿ ಐವರ್ಮೆಕ್ಟಿನ್, ಡಿಇಸಿ ಮಾತ್ರೆಗಳನ್ನು ಸೇವಿಸುವುದರಿಂದ ಆನೆಕಾಲು ರೋಗ ತಡೆಗಟ್ಟಬಹುದು<br />ಡಾ. ಇಂದುಮತಿ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>