<p><strong>ಸುರಪುರ: ‘</strong>ಧರ್ಮಸ್ಥಳ ಸಂಸ್ಥೆ ತಾಲ್ಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ನಿರ್ಗತಿಕರಿಗೆ ಸೂರು ಒದಗಿಸುವ, ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ, ಕೆಟ್ಟ ವ್ಯಸನಗಳನ್ನು ಬಿಡಿಸಿ ಮುಖ್ಯವಾಹಿನಿಗೆ ತರುವ ಅತ್ಯದ್ಭುತ ಕಾರ್ಯ ಮಾಡುತ್ತಿದೆ’ ಎಂದು ಮುಖಂಡ ನಿಂಗಪ್ಪನಾಯಕ ಬಿಜಾಸಪುರ ಹೇಳಿದರು.</p>.<p>ಬಿಜಾಸಪುರ ಗ್ರಾಮದ ನಿರ್ಗತಿಕ ಮಹಿಳೆ ಹನುಮಂತಿ ಚಂದಪ್ಪ ಅವರಿಗೆ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಂಜೂರಾದ ಮನೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ನಾಗೇಶ ಮಾತನಾಡಿ, ‘ಈಗಾಗಲೇ ತಾಲ್ಲೂಕಿನಲ್ಲಿ ಹಲವು ನಿರ್ಗತಿಕರಿಗೆ ಸಂಸ್ಥೆಯಿಂದ ಉಚಿತವಾಗಿ ಮನೆ ನಿರ್ಮಿಸಿ ಕೊಡಲಾಗಿದೆ. ಬಡವರನ್ನು, ಮಹಿಳೆಯರನ್ನು ಆರ್ಥಿಕವಾಗಿ ಮುಂದೆ ತರುವ ಕಾರ್ಯಕ್ರಮಗಳು ನಡೆಯುತ್ತಿವೆ’ ಎಂದರು.</p>.<p>ಜ್ಞಾನವಿಕಾಸ ಸಮಿತಿ ಅಧಿಕಾರಿ ಅನಿತಾ, ಸೇವಾ ಪ್ರತಿನಿಧಿ ರಾಘಮ್ಮ, ರೆಡ್ಡಿಗೌಡ, ಮಡಿವಾಳಪ್ಪ, ಮಲ್ಲಪ್ಪ ಶ್ರೀನಿವಾಸಪುರ, ಫಲಾನುಭವಿ ಹನುಮಂತಿ ಇತರರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ: ‘</strong>ಧರ್ಮಸ್ಥಳ ಸಂಸ್ಥೆ ತಾಲ್ಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ನಿರ್ಗತಿಕರಿಗೆ ಸೂರು ಒದಗಿಸುವ, ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ, ಕೆಟ್ಟ ವ್ಯಸನಗಳನ್ನು ಬಿಡಿಸಿ ಮುಖ್ಯವಾಹಿನಿಗೆ ತರುವ ಅತ್ಯದ್ಭುತ ಕಾರ್ಯ ಮಾಡುತ್ತಿದೆ’ ಎಂದು ಮುಖಂಡ ನಿಂಗಪ್ಪನಾಯಕ ಬಿಜಾಸಪುರ ಹೇಳಿದರು.</p>.<p>ಬಿಜಾಸಪುರ ಗ್ರಾಮದ ನಿರ್ಗತಿಕ ಮಹಿಳೆ ಹನುಮಂತಿ ಚಂದಪ್ಪ ಅವರಿಗೆ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಂಜೂರಾದ ಮನೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ನಾಗೇಶ ಮಾತನಾಡಿ, ‘ಈಗಾಗಲೇ ತಾಲ್ಲೂಕಿನಲ್ಲಿ ಹಲವು ನಿರ್ಗತಿಕರಿಗೆ ಸಂಸ್ಥೆಯಿಂದ ಉಚಿತವಾಗಿ ಮನೆ ನಿರ್ಮಿಸಿ ಕೊಡಲಾಗಿದೆ. ಬಡವರನ್ನು, ಮಹಿಳೆಯರನ್ನು ಆರ್ಥಿಕವಾಗಿ ಮುಂದೆ ತರುವ ಕಾರ್ಯಕ್ರಮಗಳು ನಡೆಯುತ್ತಿವೆ’ ಎಂದರು.</p>.<p>ಜ್ಞಾನವಿಕಾಸ ಸಮಿತಿ ಅಧಿಕಾರಿ ಅನಿತಾ, ಸೇವಾ ಪ್ರತಿನಿಧಿ ರಾಘಮ್ಮ, ರೆಡ್ಡಿಗೌಡ, ಮಡಿವಾಳಪ್ಪ, ಮಲ್ಲಪ್ಪ ಶ್ರೀನಿವಾಸಪುರ, ಫಲಾನುಭವಿ ಹನುಮಂತಿ ಇತರರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>