ನಗರದ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವಸ್ಥಾನ, ಮಠ ಮತ್ತು ವಿವಿಧ ಸಮುದಾಯಗಳ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಭವನಗಳನ್ನು ನಿರ್ಮಿಸಲಾಗುತ್ತಿದೆ, ಶೀಘ್ರದಲ್ಲಿಯೇ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಗುವುದು ಎಂದು ತಿಳಿಸಿದ ಅವರು ಕಾಮಗಾರಿಗಳ ನಿರ್ಮಾಣ, ಹಣದ ಬಗ್ಗೆ ಮಾಹಿತಿ ನೀಡಿದರು.