<p>ಯಾದಗಿರಿ: ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಹಾಗೂ ಭಜರಂಗದಳ ಆಶ್ರಯದಲ್ಲಿ ಜೈ ಭವಾನಿ ದೇವಸ್ಥಾನದ ಹತ್ತಿರ ಸ್ಥಾಪಿಸಿದ್ದ ಮಹಾ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಶನಿವಾರ ಅದ್ದೂರಿ ಶೋಭಾಯಾತ್ರೆ ನಡೆಯಿತು.</p>.<p>ನಾಗಾ ಸಾಧುಗಳ ಉತ್ಸಾಹ, ಬಾಯಿಂದ ಬೆಂಕಿ ಉಗುಳುವ ಸಾಹಸ ಕ್ರೀಡೆ ಗಮನ ಸೆಳೆಯಿತು.</p>.<p>ಮೆರವಣಿಗೆಯುದ್ದಕ್ಕೂ ರಾಮ-ಲಕ್ಷ್ಮಣ, ಆಂಜನೇಯ, ಕನ್ನಡಾಂಭೆ ಭಾವಚಿತ್ರ, ಛತ್ರಪತಿ ಶಿವಾಜಿ ಪ್ರತಿಮೆ, ವಿವಿಧ ಸ್ಥಬ್ಧ ಚಿತ್ರಗಳು ಗಮನ ಸೆಳೆದವು. ಡಿಜೆ ಹಾಡುಗಳಿಗೆ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.</p>.<p>ಪದವಿ ಕಾಲೇಜು, ನೇತಾಜಿ ವೃತ್ತ, ಶಾಸ್ತ್ರೀ ವೃತ್ತ, ಡಾ.ಬಿ.ಅಂಬೇಡ್ಕರ್ ವೃತ್ತ, ವೀರಶೈವಕಲ್ಯಾಣ ಮಂಟಪ, ಗಾಂಧಿವೃತ್ತ, ಚಕ್ರಕಟ್ಟಾ, ಮೈಲಾಪೂರ ಅಗಸಿ ಮೂಲಕ ಪಟಾಕಿ ಸಿಡಿಸುತ್ತಾ ನಗರಕ್ಕೆ ಹೊಂದಿಕೊಂಡಿರುವ ದೊಡ್ಡಕೆರೆಯ ಹತ್ತಿರವಿರುವ ಮಾರವಾಡಿ ಭಾವಿಯಲ್ಲಿ ತಡರಾತ್ರಿ ವಿಸರ್ಜನೆ ಮಾಡಲಾಯಿತು.</p>.<p>ಮೆರವಣಿಗೆಯಲ್ಲಿ ಸಮಿತಿಯ ಅಧ್ಯಕ್ಷ ಶರಣಪ್ಪಗೌಡ ಮಲ್ಹಾರ, ಭಜರಂಗದಳದ ಶಿವಕುಮಾರ, ತಿಮ್ಮಣ್ಣ ಹೂಗಾರ ಹೆಚ್ಚಿನ ಸಂಖ್ಯೆಯ ಭಾಗವಹಿಸಿದ್ದರು. ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಹಾಗೂ ಭಜರಂಗದಳ ಆಶ್ರಯದಲ್ಲಿ ಜೈ ಭವಾನಿ ದೇವಸ್ಥಾನದ ಹತ್ತಿರ ಸ್ಥಾಪಿಸಿದ್ದ ಮಹಾ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಶನಿವಾರ ಅದ್ದೂರಿ ಶೋಭಾಯಾತ್ರೆ ನಡೆಯಿತು.</p>.<p>ನಾಗಾ ಸಾಧುಗಳ ಉತ್ಸಾಹ, ಬಾಯಿಂದ ಬೆಂಕಿ ಉಗುಳುವ ಸಾಹಸ ಕ್ರೀಡೆ ಗಮನ ಸೆಳೆಯಿತು.</p>.<p>ಮೆರವಣಿಗೆಯುದ್ದಕ್ಕೂ ರಾಮ-ಲಕ್ಷ್ಮಣ, ಆಂಜನೇಯ, ಕನ್ನಡಾಂಭೆ ಭಾವಚಿತ್ರ, ಛತ್ರಪತಿ ಶಿವಾಜಿ ಪ್ರತಿಮೆ, ವಿವಿಧ ಸ್ಥಬ್ಧ ಚಿತ್ರಗಳು ಗಮನ ಸೆಳೆದವು. ಡಿಜೆ ಹಾಡುಗಳಿಗೆ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.</p>.<p>ಪದವಿ ಕಾಲೇಜು, ನೇತಾಜಿ ವೃತ್ತ, ಶಾಸ್ತ್ರೀ ವೃತ್ತ, ಡಾ.ಬಿ.ಅಂಬೇಡ್ಕರ್ ವೃತ್ತ, ವೀರಶೈವಕಲ್ಯಾಣ ಮಂಟಪ, ಗಾಂಧಿವೃತ್ತ, ಚಕ್ರಕಟ್ಟಾ, ಮೈಲಾಪೂರ ಅಗಸಿ ಮೂಲಕ ಪಟಾಕಿ ಸಿಡಿಸುತ್ತಾ ನಗರಕ್ಕೆ ಹೊಂದಿಕೊಂಡಿರುವ ದೊಡ್ಡಕೆರೆಯ ಹತ್ತಿರವಿರುವ ಮಾರವಾಡಿ ಭಾವಿಯಲ್ಲಿ ತಡರಾತ್ರಿ ವಿಸರ್ಜನೆ ಮಾಡಲಾಯಿತು.</p>.<p>ಮೆರವಣಿಗೆಯಲ್ಲಿ ಸಮಿತಿಯ ಅಧ್ಯಕ್ಷ ಶರಣಪ್ಪಗೌಡ ಮಲ್ಹಾರ, ಭಜರಂಗದಳದ ಶಿವಕುಮಾರ, ತಿಮ್ಮಣ್ಣ ಹೂಗಾರ ಹೆಚ್ಚಿನ ಸಂಖ್ಯೆಯ ಭಾಗವಹಿಸಿದ್ದರು. ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>