<p><strong>ಸೈದಾಪುರ:</strong> ‘ಭೀಮಾ ನದಿಯ ಹಿನ್ನೀರಿನ ಅಬ್ಬರಕ್ಕೆ ಸೈದಾಪುರ–ವಡಗೇರಾ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.</p>.<p>ಸಮೀಪದ ಬೆಳಗುಂದಿ, ಆನೂರ.ಕೆ, ಆನೂರ.ಬಿ ಮಾರ್ಗದ ಮೂಲಕ ಕಂದಳ್ಳಿ, ಬಿಳ್ಹಾರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ನಿತ್ಯ ಅನೇಕರು ವಿವಿಧ ಕೆಲಸ ಕಾರ್ಯಗಳಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಶಾಲಾ ಕಾಲೇಜುಗಳು ಕೆಲ ದಿನಗಳಲ್ಲಿ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ. ವ್ಯಾಪಾರ ವಹಿವಾಟು ಕೇಂದ್ರವಾದ ಸೈದಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮಾರ್ಗದ ಮೂಲಕ ಪ್ರಯಾಣಿಸುತ್ತಿದ್ದರು. ರಸ್ತೆ ಮೇಲೆ ದೊಡ್ಡ ತಗ್ಗು ನಿರ್ಮಾಣವಾಗಿದ್ದರಿಂದ ಸರ್ಕಾರಿ ಬಸ್ಗಳು ತಮ್ಮ ಸಂಚಾರನ್ನು ಸ್ಥಗಿತಗೊಳಿಸಿವೆ.</p>.<p>ಶೀಘ್ರದಲ್ಲೇ ಸಂಬಂಧಿಸಿದ ಅಧಿಕಾರಿಗಳು ರಸ್ತೆ ದುರಸ್ತಿ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರ ಆಗ್ರಹಿಸಿದ್ದಾರೆ.</p>.<p>ಪ್ರವಾಹದಿಂದ ಒಂದು ಕಡೆ ಬೆಳೆ ಹಾನಿ ಇನ್ನೊಂದು ಕಡೆ ಮೂಲಸೌಕರ್ಯಗಳ ಸಮಸ್ಯೆ ಕಂಡು ಬರುತ್ತಿವೆ. ಈ ಸ್ಥಿತಿ ಹೀಗೆ ಮುಂದುವರೆದರೆ ಬದುಕು ಸಾಗಿಸುವುದು ಹೇಗೆ ಎಂದು ಗ್ರಾಮಸ್ಥರು ಅಳಲು ತೊಡಿಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ:</strong> ‘ಭೀಮಾ ನದಿಯ ಹಿನ್ನೀರಿನ ಅಬ್ಬರಕ್ಕೆ ಸೈದಾಪುರ–ವಡಗೇರಾ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.</p>.<p>ಸಮೀಪದ ಬೆಳಗುಂದಿ, ಆನೂರ.ಕೆ, ಆನೂರ.ಬಿ ಮಾರ್ಗದ ಮೂಲಕ ಕಂದಳ್ಳಿ, ಬಿಳ್ಹಾರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ನಿತ್ಯ ಅನೇಕರು ವಿವಿಧ ಕೆಲಸ ಕಾರ್ಯಗಳಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಶಾಲಾ ಕಾಲೇಜುಗಳು ಕೆಲ ದಿನಗಳಲ್ಲಿ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ. ವ್ಯಾಪಾರ ವಹಿವಾಟು ಕೇಂದ್ರವಾದ ಸೈದಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮಾರ್ಗದ ಮೂಲಕ ಪ್ರಯಾಣಿಸುತ್ತಿದ್ದರು. ರಸ್ತೆ ಮೇಲೆ ದೊಡ್ಡ ತಗ್ಗು ನಿರ್ಮಾಣವಾಗಿದ್ದರಿಂದ ಸರ್ಕಾರಿ ಬಸ್ಗಳು ತಮ್ಮ ಸಂಚಾರನ್ನು ಸ್ಥಗಿತಗೊಳಿಸಿವೆ.</p>.<p>ಶೀಘ್ರದಲ್ಲೇ ಸಂಬಂಧಿಸಿದ ಅಧಿಕಾರಿಗಳು ರಸ್ತೆ ದುರಸ್ತಿ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರ ಆಗ್ರಹಿಸಿದ್ದಾರೆ.</p>.<p>ಪ್ರವಾಹದಿಂದ ಒಂದು ಕಡೆ ಬೆಳೆ ಹಾನಿ ಇನ್ನೊಂದು ಕಡೆ ಮೂಲಸೌಕರ್ಯಗಳ ಸಮಸ್ಯೆ ಕಂಡು ಬರುತ್ತಿವೆ. ಈ ಸ್ಥಿತಿ ಹೀಗೆ ಮುಂದುವರೆದರೆ ಬದುಕು ಸಾಗಿಸುವುದು ಹೇಗೆ ಎಂದು ಗ್ರಾಮಸ್ಥರು ಅಳಲು ತೊಡಿಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>