<p><strong>ಶಹಾಪುರ: </strong>‘ವ್ಯಕ್ತಿಯ ವ್ಯಕ್ತಿತ್ವವನ್ನು ಸಮಾಜಕ್ಕೆ ಪರಿಚಯಿಸುವ ಕೆಲಸವನ್ನು ಸಾಹಿತ್ಯ ಮಾಡುತ್ತದೆ. ವಿದ್ಯಾರ್ಥಿಗಳು ಕೇವಲ ಪಾಠದ ವಿಷಯಗಳಲ್ಲದೆ ಸಾಹಿತ್ಯ ಮತ್ತು ಪತ್ರಿಕೆಗಳನ್ನು ಓದಿ ಅರ್ಥೈಸಿಕೊಂಡಾಗ ಮಾತ್ರ ಜ್ಞಾನ ವೃದ್ಧಿಯಾಗುತ್ತದೆ’ ಎಂದು ಹಿರಿಯ ಸಾಹಿತಿ ಎಚ್.ವಿಜಯಭಾಸ್ಕರ್ ಹೇಳಿದರು.</p>.<p>ನಗರದ ಶಿವಶೇಖರಪ್ಪಗೌಡ ಪಾಟೀಲ ಶಿರವಾಳ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಗುರುವಾರ ಜಾಣ-ಜಾಣೆಯರ ಬಳಗದಿಂದ ಏರ್ಪಡಿಸಿದ್ದ ಸಾಹಿತಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಹಿರಿಯ ಸಾಹಿತಿ ಶಿವಣ್ಣ ಇಜೇರಿ ಮಾತನಾಡಿ,‘ಲೇಖಕರು ವೈಚಾರಿಕತೆಯ ನಿಲುವುಗಳಿಗೆ ಬದ್ಧರಾಗಿರಬೇಕು. ಅಲ್ಲದೇ ಏನೇ ಮಾತನಾಡಿದರೂ ನೆಲೆಗಟ್ಟಿನ ಚೌಕಟ್ಟಿನೊಳಗೆ ಮಾತನಾಡಬೇಕು’ ಎಂದರು.</p>.<p>ಸಮಾರಂಭದಲ್ಲಿ ಹಿರಿಯ ಸಾಹಿತಿಗಳ ಬದುಕು-ಬರಹ ಸಾಹಿತ್ಯದ ನೆಲೆಗಟ್ಟು ಇಂದಿನ ಯುವ ಸಾಹಿತಿಗಳ ತವಕ– ತಲ್ಲಣಗಳ ಬಗ್ಗೆ ಗಂಭೀರವಾದ ಸಂವಾದ, ಚರ್ಚೆ ನಡೆದವು.</p>.<p>ಬಿ.ಇಡಿ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು.</p>.<p>ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಆವಂಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ಯುವ ಸಾಹಿತಿ ಪಂಚಾಕ್ಷರಿ ಹಿರೇಮಠ, ಬಸವರಾಜ ಸಿನ್ನೂರ, ಶಭಾನಾ, ಪೂರ್ಣಿಮಾ ಹಿರೇಮಠ, ಈರಮ್ಮ ಇದ್ದರು. ಶಿಲ್ಪಾ ಪ್ರಾರ್ಥಿಸಿದರು, ಸುಷ್ಮಾ ಸ್ವಾಗತಿಸಿದರು. ವಿನಾಯಕ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ: </strong>‘ವ್ಯಕ್ತಿಯ ವ್ಯಕ್ತಿತ್ವವನ್ನು ಸಮಾಜಕ್ಕೆ ಪರಿಚಯಿಸುವ ಕೆಲಸವನ್ನು ಸಾಹಿತ್ಯ ಮಾಡುತ್ತದೆ. ವಿದ್ಯಾರ್ಥಿಗಳು ಕೇವಲ ಪಾಠದ ವಿಷಯಗಳಲ್ಲದೆ ಸಾಹಿತ್ಯ ಮತ್ತು ಪತ್ರಿಕೆಗಳನ್ನು ಓದಿ ಅರ್ಥೈಸಿಕೊಂಡಾಗ ಮಾತ್ರ ಜ್ಞಾನ ವೃದ್ಧಿಯಾಗುತ್ತದೆ’ ಎಂದು ಹಿರಿಯ ಸಾಹಿತಿ ಎಚ್.ವಿಜಯಭಾಸ್ಕರ್ ಹೇಳಿದರು.</p>.<p>ನಗರದ ಶಿವಶೇಖರಪ್ಪಗೌಡ ಪಾಟೀಲ ಶಿರವಾಳ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಗುರುವಾರ ಜಾಣ-ಜಾಣೆಯರ ಬಳಗದಿಂದ ಏರ್ಪಡಿಸಿದ್ದ ಸಾಹಿತಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಹಿರಿಯ ಸಾಹಿತಿ ಶಿವಣ್ಣ ಇಜೇರಿ ಮಾತನಾಡಿ,‘ಲೇಖಕರು ವೈಚಾರಿಕತೆಯ ನಿಲುವುಗಳಿಗೆ ಬದ್ಧರಾಗಿರಬೇಕು. ಅಲ್ಲದೇ ಏನೇ ಮಾತನಾಡಿದರೂ ನೆಲೆಗಟ್ಟಿನ ಚೌಕಟ್ಟಿನೊಳಗೆ ಮಾತನಾಡಬೇಕು’ ಎಂದರು.</p>.<p>ಸಮಾರಂಭದಲ್ಲಿ ಹಿರಿಯ ಸಾಹಿತಿಗಳ ಬದುಕು-ಬರಹ ಸಾಹಿತ್ಯದ ನೆಲೆಗಟ್ಟು ಇಂದಿನ ಯುವ ಸಾಹಿತಿಗಳ ತವಕ– ತಲ್ಲಣಗಳ ಬಗ್ಗೆ ಗಂಭೀರವಾದ ಸಂವಾದ, ಚರ್ಚೆ ನಡೆದವು.</p>.<p>ಬಿ.ಇಡಿ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು.</p>.<p>ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಆವಂಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ಯುವ ಸಾಹಿತಿ ಪಂಚಾಕ್ಷರಿ ಹಿರೇಮಠ, ಬಸವರಾಜ ಸಿನ್ನೂರ, ಶಭಾನಾ, ಪೂರ್ಣಿಮಾ ಹಿರೇಮಠ, ಈರಮ್ಮ ಇದ್ದರು. ಶಿಲ್ಪಾ ಪ್ರಾರ್ಥಿಸಿದರು, ಸುಷ್ಮಾ ಸ್ವಾಗತಿಸಿದರು. ವಿನಾಯಕ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>