ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈದಾಪುರ: ರಥದಲ್ಲಿ ಕೂರಿಸಿ ನಿವೃತ್ತ ಮುಖ್ಯ ಶಿಕ್ಷಕರ ಮೆರವಣಿಗೆ

Last Updated 15 ಜುಲೈ 2020, 17:09 IST
ಅಕ್ಷರ ಗಾತ್ರ

ಸೈದಾಪುರ: ಸಮೀಪದ ನೀಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಶರಣಪ್ಪ ನಡುವಿನಕೇರಿ ಅವರನ್ನು ಗ್ರಾಮಸ್ಥರು ರಥದಲ್ಲಿ ಕೂರಿಸಿ ಮೆರವಣಿಗೆ ಮಾಡಿದರು.

ಗ್ರಾಮದಲ್ಲಿ 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಮುಖ್ಯ ಶಿಕ್ಷಕ ಶರಣಪ್ಪ ದಂಪತಿಗೆ ಗ್ರಾಮದ ಹಿರಿಯರು, ಹಳೆ ವಿದ್ಯಾರ್ಥಿಗಳು, ಯುವಕರು ಸೇರಿ ಶಾಲು ಹೊದಿಸಿ, ಫಲಪುಷ್ಪ ನೀಡಿ, ಭವ್ಯ ರಥದಲ್ಲಿ ಕೂರಿಸಿ ವಾದ್ಯ ವೃಂದಗಳೊಂದಿಗೆ ಮೆರವಣಿಗೆ ನಡೆಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶರಣಪ್ಪ, ‘ನಾನು ಮುಖ್ಯಶಿಕ್ಷಕನಾಗಿ ಸೇವೆಗೆ ನಿವೃತ್ತಿ ಹೊಂದಿದ್ದೇನೆ ಹೊರತು, ಗ್ರಾಮದ ಮಕ್ಕಳ ಮನಸ್ಸಿನಿಂದ ನಿವೃತ್ತಿಯಾಗಲು ಕನಸಿನಲ್ಲೂ ಬಯಸುವುದಿಲ್ಲ’ ಎಂದರು.

‌ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ, ಸದಸ್ಯರು, ಶಿಕ್ಷಕರು, ಗ್ರಾಮದ ಹಿರಿಯರು, ಯುವ ಮುಖಂಡರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT