ತಾಲ್ಲೂಕಿನ ಕೊಳ್ಳೂರ(ಎಂ) ಗ್ರಾಮದ ಬಳಿ ಚೆಕ್ ಪೋಸ್ಟ್ ಆರಂಭಿಸಿದ್ದರಿಂದ ಶಹಾಪುರ-ದೇವದುರ್ಗ ಹೆದ್ದಾರಿಯ ರಸ್ತೆ ಸಂಚಾರ ಸ್ಥಗಿತವಾಗಿದೆ. ನದಿಗೆ ಹೊಂದಿಕೊಂಡಂತೆ ಗಡ್ಡೆಗುಳಿ ಬಸವೇಶ್ವರ ದೇವಸ್ಥಾನದ ಮುಂದೆ ಮದುವೆ ಹಾಗೂ ಇನ್ನಿತರ ಕಾರ್ಯಗಳು ನಡೆಯುತ್ತಿದ್ದವು. ತ್ಯಾಜ್ಯ ವಸ್ತುಗಳನ್ನು ನದಿಯ ಪಕ್ಕದಲ್ಲಿಯೇ ಬಿಸಾಡುತ್ತಿದ್ದರು. ತಿಂಗಳಿನಿಂದ ಎಲ್ಲದಕ್ಕೂ ಬ್ರೇಕ್ ಬಿದ್ದಿದೆ.