ಯಾದಗಿರಿ: ಉಪ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲಿನನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯ ಯುವ ಮಹಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶರಣಗೌಡ ಕಂದಕೂರ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಸಲ್ಲಿಸಿರುವ ಅವರು, ‘ಇನ್ನು ಮುಂದೆ ಪಕ್ಷದ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ರಾಜೀನಾಮೆ ಅಂಗೀಕರಿಸಬೇಕು’ ಎಂದು ವಿನಂತಿಸಿದ್ದಾರೆ.