<p><strong>ಯಾದಗಿರಿ</strong>: ‘ಭಾರತ ಉಕ್ಕಿನ ಮನುಷ್ಯರೆಂದು ಖ್ಯಾತರಾದ ಸರ್ದಾರ ವಲ್ಲಭಬಾಯಿ ಪಟೇಲ್ ಅವರು ದೇಶ ಕಂಡ ಅಪ್ರತಿಮ ನಾಯಕರು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರು ಹೇಳಿದರು.</p>.<p>ನಗರದ ಲುಂಬಿನಿ ವನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶುಕ್ರವಾರ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ಏಕತಾ ನಡಿಗೆ ಜಾಥಾದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಪ್ರಥಮ ಗೃಹ ಸಚಿವರಾಗಿ ತೆಗೆದುಕೊಂಡ ದಿಟ್ಟ ನಿರ್ಧಾರಗಳಿಂದ ರಾಷ್ಟ್ರದ ಪ್ರಗತಿಗೆ ಅಗತ್ಯವಾದ ಸೇವೆ ನೀಡಿದ್ದಾರೆ. ಯುವ ಸಮುದಾಯ ಅವರ ಆದರ್ಶಗಳನ್ನು ಪಾಲಿಸಬೇಕು’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಥ್ವಿಕ್ ಶಂಕರ್ ಮಾತನಾಡಿ, ‘ಸರ್ದಾರ ವಲ್ಲಭಭಾಯಿ ಪಟೇಲ್ ಅವರು ರಾಷ್ಟ್ರವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸ್ವಾತಂತ್ರ್ಯ ನಂತರವೂ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನಗೊಳ್ಳದ ಸಂಸ್ಥಾನಗಳ ರಾಜರ ಮನವೊಲಿಸಿ, ದೇಶವನ್ನು ಒಗ್ಗೂಡಿಸಿದ್ದಾರೆ’ ಎಂದರು.</p>.<p>ಜಿ.ಪಂ. ಸಿಇಒ ಲವೀಶ್ ಓರಾಡಿಯಾ ಮಾತನಾಡಿದರು.</p>.<p>ಗ್ರಾಮೀಣ ಪೊಲೀಸ್ ಠಾಣೆಯಿಂದ ಜಾಥಾ ಜರುಗಿತು. ವಿವಿಧೆಡೆ ಪ್ರಬಂಧ, ಭಾಷಣ, ಸಸಿ ನೆಡುವ ಮತ್ತು ಏಕತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p><span class="bold"><strong>ಗುರುಮಠಕಲ್:</strong></span> ಪಟ್ಟಣದ ಸರ್ಕಾರಿ ಆಲಕರ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಿಂದ ರಾಷ್ಟ್ರದ ಏಕತೆಗಾಗಿ ಓಟ ಜಾಥಾ ಜರುಗಿತು. ಪಿಐ ವೀರಣ್ಣ ಸೇರಿದಂತೆ ಪೊಲೀಸ್ ಸಬ್ಂದಿ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ಭಾರತ ಉಕ್ಕಿನ ಮನುಷ್ಯರೆಂದು ಖ್ಯಾತರಾದ ಸರ್ದಾರ ವಲ್ಲಭಬಾಯಿ ಪಟೇಲ್ ಅವರು ದೇಶ ಕಂಡ ಅಪ್ರತಿಮ ನಾಯಕರು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರು ಹೇಳಿದರು.</p>.<p>ನಗರದ ಲುಂಬಿನಿ ವನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶುಕ್ರವಾರ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ಏಕತಾ ನಡಿಗೆ ಜಾಥಾದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಪ್ರಥಮ ಗೃಹ ಸಚಿವರಾಗಿ ತೆಗೆದುಕೊಂಡ ದಿಟ್ಟ ನಿರ್ಧಾರಗಳಿಂದ ರಾಷ್ಟ್ರದ ಪ್ರಗತಿಗೆ ಅಗತ್ಯವಾದ ಸೇವೆ ನೀಡಿದ್ದಾರೆ. ಯುವ ಸಮುದಾಯ ಅವರ ಆದರ್ಶಗಳನ್ನು ಪಾಲಿಸಬೇಕು’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಥ್ವಿಕ್ ಶಂಕರ್ ಮಾತನಾಡಿ, ‘ಸರ್ದಾರ ವಲ್ಲಭಭಾಯಿ ಪಟೇಲ್ ಅವರು ರಾಷ್ಟ್ರವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸ್ವಾತಂತ್ರ್ಯ ನಂತರವೂ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನಗೊಳ್ಳದ ಸಂಸ್ಥಾನಗಳ ರಾಜರ ಮನವೊಲಿಸಿ, ದೇಶವನ್ನು ಒಗ್ಗೂಡಿಸಿದ್ದಾರೆ’ ಎಂದರು.</p>.<p>ಜಿ.ಪಂ. ಸಿಇಒ ಲವೀಶ್ ಓರಾಡಿಯಾ ಮಾತನಾಡಿದರು.</p>.<p>ಗ್ರಾಮೀಣ ಪೊಲೀಸ್ ಠಾಣೆಯಿಂದ ಜಾಥಾ ಜರುಗಿತು. ವಿವಿಧೆಡೆ ಪ್ರಬಂಧ, ಭಾಷಣ, ಸಸಿ ನೆಡುವ ಮತ್ತು ಏಕತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p><span class="bold"><strong>ಗುರುಮಠಕಲ್:</strong></span> ಪಟ್ಟಣದ ಸರ್ಕಾರಿ ಆಲಕರ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಿಂದ ರಾಷ್ಟ್ರದ ಏಕತೆಗಾಗಿ ಓಟ ಜಾಥಾ ಜರುಗಿತು. ಪಿಐ ವೀರಣ್ಣ ಸೇರಿದಂತೆ ಪೊಲೀಸ್ ಸಬ್ಂದಿ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>