<p><strong>ಸುರಪುರ</strong>: ‘ಸವಿತಾ ಸಮಾಜದ ಜನರು ತಮ್ಮ ಮಕ್ಕಳ ಶಿಕ್ಷಣ ಕಲಿಕೆಗೆ ಹೆಚ್ಚು ಆದ್ಯತೆ ನೀಡಿದಾಗ ಮಾತ್ರ ಪ್ರತಿಯೊಂದು ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಜಿಲ್ಲಾ ಸವಿತಾ ಸಮಾಜದ ನೂತನ ಅಧ್ಯಕ್ಷ ಮಲ್ಲಣ್ಣ ವಡಗೇರಿ ಹೇಳಿದರು.</p>.<p>ಸಮೀಪದ ರಂಗಂಪೇಟೆಯ ಸವಿತಾ ಸಮಾಜದ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>ನಗರಸಭೆ ಮಾಜಿ ಸದಸ್ಯ ಚಂದ್ರಾಮ ಮುಂದಿನಮನಿ ಮಾತನಾಡಿ, ‘ಸವಿತಾ ಸಮಾಜದ ಅಭಿವೃದ್ಧಿಯಾಗಲು ಸಮಾಜದಲ್ಲಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳು, ರಚನಾತ್ಮಕ ಕಾರ್ಯಕ್ರಮಗಳು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ರಂಗಂಪೇಟೆಯ ಸವಿತಾ ಸಮಾಜದ ಅಧ್ಯಕ್ಷ ಚನ್ನಬಸಪ್ಪ ಗೋಗಿ ಮಾತನಾಡಿ, ‘ಸವಿತಾ ಸಮಾಜದಲ್ಲಿರುವ ಪ್ರತಿಭಾವಂತ ಯುವ ಸಮುದಾಯ ಹಾಗೂ ಅನೇಕ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಸಮಾಜದ ಸರ್ವಾಂಗೀಣ ಬೆಳವಣಿಗೆಗೆ ಸಹಾಯ, ಸಹಕಾರ, ಪ್ರೋತ್ಸಾಹ ನೀಡಬೇಕು’ ಎಂದು ಕರೆ ನೀಡಿದರು.</p>.<p>ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಅಪ್ಪಣ್ಣ ಚಿನ್ನಾಕಾರ ಮಾತನಾಡಿದರು.</p>.<p>ದೇವಿಂದ್ರಪ್ಪ ಅಜ್ಜಕೋಲಿ, ರಾಘವೇಂದ್ರ ಬಾದ್ಯಾಪುರ, ರಾಘವೇಂದ್ರ ಮುಂದಿನಮನಿ, ಸುರೇಶ ಚಿನ್ನಾಕಾರ, ಮಹೇಶ ಗೋಗಿ, ಅಶೋಕ ಚಿನ್ನಾಕಾರ, ಬಸವರಾಜ ಚಿನ್ನಾಕಾರ ಉಪಸ್ಥಿತರಿದ್ದರು.</p>.<p>ವಿವಿಧ ಕ್ಷೇತ್ರಗಳ ಸಾಧಕರಾದ ಮಂಜುನಾಥ ಅನವಾರ, ವಿರೇಶ ಹುಣಸಗಿ, ವಿರೇಶ ಮಸ್ಕಿ, ಓಂಕಾರ ಸೇಡಂ, ಸೃಷ್ಠಿ, ಸುಚಿತ್ರಾ, ಲಕ್ಷ್ಮಿ, ರೇಖಾ, ಭಾಗ್ಯ, ಭರತಕುಮಾರ, ವಾಸು ಮುಂತಾದವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಸವಿತಾ ಸಮಾಜದ ಜನರು ತಮ್ಮ ಮಕ್ಕಳ ಶಿಕ್ಷಣ ಕಲಿಕೆಗೆ ಹೆಚ್ಚು ಆದ್ಯತೆ ನೀಡಿದಾಗ ಮಾತ್ರ ಪ್ರತಿಯೊಂದು ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಜಿಲ್ಲಾ ಸವಿತಾ ಸಮಾಜದ ನೂತನ ಅಧ್ಯಕ್ಷ ಮಲ್ಲಣ್ಣ ವಡಗೇರಿ ಹೇಳಿದರು.</p>.<p>ಸಮೀಪದ ರಂಗಂಪೇಟೆಯ ಸವಿತಾ ಸಮಾಜದ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>ನಗರಸಭೆ ಮಾಜಿ ಸದಸ್ಯ ಚಂದ್ರಾಮ ಮುಂದಿನಮನಿ ಮಾತನಾಡಿ, ‘ಸವಿತಾ ಸಮಾಜದ ಅಭಿವೃದ್ಧಿಯಾಗಲು ಸಮಾಜದಲ್ಲಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳು, ರಚನಾತ್ಮಕ ಕಾರ್ಯಕ್ರಮಗಳು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ರಂಗಂಪೇಟೆಯ ಸವಿತಾ ಸಮಾಜದ ಅಧ್ಯಕ್ಷ ಚನ್ನಬಸಪ್ಪ ಗೋಗಿ ಮಾತನಾಡಿ, ‘ಸವಿತಾ ಸಮಾಜದಲ್ಲಿರುವ ಪ್ರತಿಭಾವಂತ ಯುವ ಸಮುದಾಯ ಹಾಗೂ ಅನೇಕ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಸಮಾಜದ ಸರ್ವಾಂಗೀಣ ಬೆಳವಣಿಗೆಗೆ ಸಹಾಯ, ಸಹಕಾರ, ಪ್ರೋತ್ಸಾಹ ನೀಡಬೇಕು’ ಎಂದು ಕರೆ ನೀಡಿದರು.</p>.<p>ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಅಪ್ಪಣ್ಣ ಚಿನ್ನಾಕಾರ ಮಾತನಾಡಿದರು.</p>.<p>ದೇವಿಂದ್ರಪ್ಪ ಅಜ್ಜಕೋಲಿ, ರಾಘವೇಂದ್ರ ಬಾದ್ಯಾಪುರ, ರಾಘವೇಂದ್ರ ಮುಂದಿನಮನಿ, ಸುರೇಶ ಚಿನ್ನಾಕಾರ, ಮಹೇಶ ಗೋಗಿ, ಅಶೋಕ ಚಿನ್ನಾಕಾರ, ಬಸವರಾಜ ಚಿನ್ನಾಕಾರ ಉಪಸ್ಥಿತರಿದ್ದರು.</p>.<p>ವಿವಿಧ ಕ್ಷೇತ್ರಗಳ ಸಾಧಕರಾದ ಮಂಜುನಾಥ ಅನವಾರ, ವಿರೇಶ ಹುಣಸಗಿ, ವಿರೇಶ ಮಸ್ಕಿ, ಓಂಕಾರ ಸೇಡಂ, ಸೃಷ್ಠಿ, ಸುಚಿತ್ರಾ, ಲಕ್ಷ್ಮಿ, ರೇಖಾ, ಭಾಗ್ಯ, ಭರತಕುಮಾರ, ವಾಸು ಮುಂತಾದವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>