ಯಾದಗಿರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರಿಗಾಗಿ ಮೀಸಲಿರುವ ಅನುದಾನವನ್ನು ಅವರ ಕಾಲೋನಿ ಅಥವಾ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಮಾತ್ರ ಬಳಸಬೇಕು. ತಪ್ಪಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಾಗರಿಕ ಹಕ್ಕು ಜಾರಿ ಅಧಿನಿಯಮ ಪ್ರಕಾರ ಎಫ್.ಐ.ಆರ್ ದಾಖಲಿಸುವಂತೆ ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.