<p><strong>ಹುಣಸಗಿ</strong>: ಗ್ರಾಮೀಣ ಭಾಗದ ಮಕ್ಕಳಿಗೂ ಉನ್ನತ ಶಿಕ್ಷಣ ಸೌಲಭ್ಯ ದೊರೆಯಬೇಕು ಎಂದು ಹುಣಸಗಿ ಪಟ್ಟಣದಲ್ಲಿ ಪದವಿ ಕಾಲೇಜು ಆರಂಭಿಸಲಾಯಿತು. ಆದರೆ, ಅದಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಮಾತ್ರ ಸರ್ಕಾರ ಹಾಗೂ ಜನಪ್ರತಿನಿಧಿಗಳಿಂದ ಇಂದಿಗೂ ಸಾಧ್ಯವಾಗಿಲ್ಲ. ಇದರಿಂದಾಗಿ ತೊಂದರೆ ಪಡುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಾರೆ.</p>.<p>ಕಳೆದ 2013-14 ರಲ್ಲಿಯೇ ಅಂದಿನ ಸರ್ಕಾರ ಹುಣಸಗಿ ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಿ ಬಿಎ, ಬಿಕಾಂ ಪದವಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಸೂಕ್ತ ಕಟ್ಟಡವಿಲ್ಲದೇ ಇಂದಿಗೂ ಸರ್ಕಾರಿ ಪ್ರೌಢಶಾಲೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿಯೇ ಪದವಿ ಕಾಲೇಜು ನಡೆಸಲಾಗುತ್ತಿದೆ.</p>.<p>‘ಬಿಎ ಪ್ರಥಮ ವರ್ಷಕ್ಕೆ 236 ಹಾಗೂ ಬಿಕಾಂ ಪ್ರಥಮ ವರ್ಷಕ್ಕೆ 51 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಅಲ್ಲದೇ 3 ನೇ ಸೆಮಿಸ್ಟರ್ನಲ್ಲಿ 61, 5ನೇ ಸೆಮಿಸ್ಟರ್ನಲ್ಲಿ 95 ಹಾಗೂ ಬಿಕಾಂ 3 ನೇ ಸೆಮಿಸ್ಟರ್ನಲ್ಲಿ 24 ಹಾಗೂ 5 ನೇ ಸೆಮಿಸ್ಟರ್ನಲ್ಲಿ 38 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಬಹುತೇಕ ಎಲ್ಲ ಮಕ್ಕಳು ಹಿಂದುಳಿದ ಕುಟುಂಬದಿಂದಲೇ ಬಂದಿದ್ದವರಾಗಿದ್ದಾರೆ’ ಎಂದು ಕಾಲೇಜಿನ ಪ್ರಚಾರ್ಯ ಚನ್ನಬಸಯ್ಯ ಹಿರೇಮಠ ಮಾಹಿತಿ ನೀಡಿದರು.</p>.<p>‘ಕಟ್ಟಡವೇ ಇಲ್ಲದಿರುವುದರಿಂದಾಗಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳೂ ಇಲ್ಲವಾಗಿದೆ’ ಎಂದು ವಿದ್ಯಾರ್ಥಿಗಳಾದ ಭಾಗ್ಯಶ್ರೀ ದೇಸಾಯಿ, ಅಯ್ಯನಗೌಡ ಹಬ್ಬಾಳ ದೂರಿದರು.</p>.<p>ಈ ಕಾಲೇಜಿನ ಕಚೇರಿಗೆ ಹೋಗುವ ಆವರಣದಲ್ಲಿಯೇ ಶಿಥಿಲ ಕಟ್ಟಡದ ಕಟ್ಟಿಗೆ ಕುಸಿದು ಬಿದ್ದಿದ್ದು, ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿ ಇವೆ. ಇದರಿಂದಾಗಿ ಇಲ್ಲಿ ಪಾಠ ಕೇಳಲು ಆಗಮಿಸುವ ವಿದ್ಯಾರ್ಥಿಗಳು ಜೀವ ಭಯದಲ್ಲಿಯೇ ಸಂಚರಿಸುವಂತಾಗಿದೆ. ಈ ಕಟ್ಟಡವನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳಾದ ಮಲ್ಲಪ್ಪ ಮಂಜಲಾಪುರ, ಜಟ್ಟೆಪ್ಪ ತಿಳಿಸಿದರು.</p>.<p class="Subhead">ಸ್ಥಳದ ಸಮಸ್ಯೆ: ಪದವಿ ಕಾಲೇಜು (ಹೆಚ್ಚುವರಿ ಕೋಣೆ) ಕಟ್ಟಡ ನಿರ್ಮಾಣಕ್ಕಾಗಿ ಕಳೆದ ಮೂರು ವರ್ಷಗಳ ಹಿಂದೆಯೇ ₹2 ಕೋಟಿ ಹಣ ಮೀಸಲಿರಿಸಲಾಗಿದೆ. ಆದರೆ, ಕಟ್ಟಡಕ್ಕೆ ಸ್ಥಳದ ಸಮಸ್ಯೆ ಇದೆ. ಈಗಾಗಲೇ ಪಟ್ಟಣದ ಹೊರವಲಯದಲ್ಲಿ ಲಭ್ಯವಿರುವ ಸ್ಥಳದಲ್ಲಿ 2 ಎಕರೆ ಜಾಗ ಮೀಸಲಿರಿಸಲಾಗಿದೆ. ಆದರೆ, ಪಟ್ಟಣದಿಂದ ಈ ಸ್ಥಳ ದೂರವಾಗುತ್ತಿದೆ ಎನ್ನುವ ಕಾರಣಕ್ಕೆ ಅಲ್ಲಿ ಕಟ್ಟಡ ನಿರ್ಮಾಣ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.</p>.<p>ಪ್ರಥಮ ದರ್ಜೆ ಕಾಲೇಜಿನಲ್ಲಿ 7 ಜನ ಸಹಾಯಕ ಪ್ರಾಧ್ಯಾಪಕರು, 12 ಜನ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, 5 ಜನ ಸಿಬ್ಬಂದಿ ಇದ್ದಾರೆ.ಪ್ರಥಮ ದರ್ಜೆ ಸಹಾಯಕರು, ಗ್ರಂಥಪಾಲಕರು ಹಾಗೂ ದೈಹಿಕ ನಿರ್ದಶೇಕರ ಹುದ್ದೆ ಸ್ಥಾನ ಖಾಲಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ</strong>: ಗ್ರಾಮೀಣ ಭಾಗದ ಮಕ್ಕಳಿಗೂ ಉನ್ನತ ಶಿಕ್ಷಣ ಸೌಲಭ್ಯ ದೊರೆಯಬೇಕು ಎಂದು ಹುಣಸಗಿ ಪಟ್ಟಣದಲ್ಲಿ ಪದವಿ ಕಾಲೇಜು ಆರಂಭಿಸಲಾಯಿತು. ಆದರೆ, ಅದಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಮಾತ್ರ ಸರ್ಕಾರ ಹಾಗೂ ಜನಪ್ರತಿನಿಧಿಗಳಿಂದ ಇಂದಿಗೂ ಸಾಧ್ಯವಾಗಿಲ್ಲ. ಇದರಿಂದಾಗಿ ತೊಂದರೆ ಪಡುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಾರೆ.</p>.<p>ಕಳೆದ 2013-14 ರಲ್ಲಿಯೇ ಅಂದಿನ ಸರ್ಕಾರ ಹುಣಸಗಿ ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಿ ಬಿಎ, ಬಿಕಾಂ ಪದವಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಸೂಕ್ತ ಕಟ್ಟಡವಿಲ್ಲದೇ ಇಂದಿಗೂ ಸರ್ಕಾರಿ ಪ್ರೌಢಶಾಲೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿಯೇ ಪದವಿ ಕಾಲೇಜು ನಡೆಸಲಾಗುತ್ತಿದೆ.</p>.<p>‘ಬಿಎ ಪ್ರಥಮ ವರ್ಷಕ್ಕೆ 236 ಹಾಗೂ ಬಿಕಾಂ ಪ್ರಥಮ ವರ್ಷಕ್ಕೆ 51 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಅಲ್ಲದೇ 3 ನೇ ಸೆಮಿಸ್ಟರ್ನಲ್ಲಿ 61, 5ನೇ ಸೆಮಿಸ್ಟರ್ನಲ್ಲಿ 95 ಹಾಗೂ ಬಿಕಾಂ 3 ನೇ ಸೆಮಿಸ್ಟರ್ನಲ್ಲಿ 24 ಹಾಗೂ 5 ನೇ ಸೆಮಿಸ್ಟರ್ನಲ್ಲಿ 38 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಬಹುತೇಕ ಎಲ್ಲ ಮಕ್ಕಳು ಹಿಂದುಳಿದ ಕುಟುಂಬದಿಂದಲೇ ಬಂದಿದ್ದವರಾಗಿದ್ದಾರೆ’ ಎಂದು ಕಾಲೇಜಿನ ಪ್ರಚಾರ್ಯ ಚನ್ನಬಸಯ್ಯ ಹಿರೇಮಠ ಮಾಹಿತಿ ನೀಡಿದರು.</p>.<p>‘ಕಟ್ಟಡವೇ ಇಲ್ಲದಿರುವುದರಿಂದಾಗಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳೂ ಇಲ್ಲವಾಗಿದೆ’ ಎಂದು ವಿದ್ಯಾರ್ಥಿಗಳಾದ ಭಾಗ್ಯಶ್ರೀ ದೇಸಾಯಿ, ಅಯ್ಯನಗೌಡ ಹಬ್ಬಾಳ ದೂರಿದರು.</p>.<p>ಈ ಕಾಲೇಜಿನ ಕಚೇರಿಗೆ ಹೋಗುವ ಆವರಣದಲ್ಲಿಯೇ ಶಿಥಿಲ ಕಟ್ಟಡದ ಕಟ್ಟಿಗೆ ಕುಸಿದು ಬಿದ್ದಿದ್ದು, ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿ ಇವೆ. ಇದರಿಂದಾಗಿ ಇಲ್ಲಿ ಪಾಠ ಕೇಳಲು ಆಗಮಿಸುವ ವಿದ್ಯಾರ್ಥಿಗಳು ಜೀವ ಭಯದಲ್ಲಿಯೇ ಸಂಚರಿಸುವಂತಾಗಿದೆ. ಈ ಕಟ್ಟಡವನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳಾದ ಮಲ್ಲಪ್ಪ ಮಂಜಲಾಪುರ, ಜಟ್ಟೆಪ್ಪ ತಿಳಿಸಿದರು.</p>.<p class="Subhead">ಸ್ಥಳದ ಸಮಸ್ಯೆ: ಪದವಿ ಕಾಲೇಜು (ಹೆಚ್ಚುವರಿ ಕೋಣೆ) ಕಟ್ಟಡ ನಿರ್ಮಾಣಕ್ಕಾಗಿ ಕಳೆದ ಮೂರು ವರ್ಷಗಳ ಹಿಂದೆಯೇ ₹2 ಕೋಟಿ ಹಣ ಮೀಸಲಿರಿಸಲಾಗಿದೆ. ಆದರೆ, ಕಟ್ಟಡಕ್ಕೆ ಸ್ಥಳದ ಸಮಸ್ಯೆ ಇದೆ. ಈಗಾಗಲೇ ಪಟ್ಟಣದ ಹೊರವಲಯದಲ್ಲಿ ಲಭ್ಯವಿರುವ ಸ್ಥಳದಲ್ಲಿ 2 ಎಕರೆ ಜಾಗ ಮೀಸಲಿರಿಸಲಾಗಿದೆ. ಆದರೆ, ಪಟ್ಟಣದಿಂದ ಈ ಸ್ಥಳ ದೂರವಾಗುತ್ತಿದೆ ಎನ್ನುವ ಕಾರಣಕ್ಕೆ ಅಲ್ಲಿ ಕಟ್ಟಡ ನಿರ್ಮಾಣ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.</p>.<p>ಪ್ರಥಮ ದರ್ಜೆ ಕಾಲೇಜಿನಲ್ಲಿ 7 ಜನ ಸಹಾಯಕ ಪ್ರಾಧ್ಯಾಪಕರು, 12 ಜನ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, 5 ಜನ ಸಿಬ್ಬಂದಿ ಇದ್ದಾರೆ.ಪ್ರಥಮ ದರ್ಜೆ ಸಹಾಯಕರು, ಗ್ರಂಥಪಾಲಕರು ಹಾಗೂ ದೈಹಿಕ ನಿರ್ದಶೇಕರ ಹುದ್ದೆ ಸ್ಥಾನ ಖಾಲಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>