<p><strong>ಹುಣಸಗಿ:</strong> ತಾಲ್ಲೂಕಿನ ರೇವು ನಾಯಕ ತಾಂಡಾದಲ್ಲಿ ಶಾಲಾ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೊಡೇಕಲ್ಲ ಠಾಣೆಯಲ್ಲಿ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ರೇವು ನಾಯಕ ತಾಂಡಾದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದೆ. ಈ ಶಾಲೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ಬೋಧನೆಯಲ್ಲಿ ತೊಡಗಿದಾಗ ಕಿಡಿಗೇಡಿಗಳು ಶಾಲಾ ಕೊಠಡಿ ಪ್ರವೇಶಿಸಿ ಶಿಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಪಾಠದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೂ ಕೆಲ ಪ್ರಶ್ನೆಗಳನ್ನು ಕೇಳಿ ಬೈದಿದ್ದಾರೆ ಎಂದು ಶಾಲೆಯ ಶಿಕ್ಷಕರು ಕೊಡೇಕಲ್ಲ ಠಾಣೆಗೆ ದೂರು ನೀಡಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಯಾದಗಿರಿ ಎಸ್.ಪಿ ಪೃಥ್ವಿಕ್ ಶಂಕರ್ ಹಾಗೂ ಹುಣಸಗಿ ಸಿಪಿಐ ರವಿಕುಮಾರ ಪೊಲೀಸರೊಂದಿಗೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಆರೊಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೂ ಒಪ್ಪಿಸಲಾಗಿದೆ.</p>.<p>ಇನ್ನುಳಿದವರ ಪತ್ತೆಗೆ ಬಲೆ ಬೀಸಲಾಗಿದೆ. ಮಕ್ಕಳು ಹಾಗೂ ಪಾಲಕರು ಯಾವುದೇ ಆತಂಕ ಗೊಳ್ಳದಂತೆ ಪೊಲೀಸರು ಧೈರ್ಯ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆ ಎಂದಿನಂತೆ ನಡೆದಿದೆ.</p>.<p>ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಚನ್ನಬಸಪ್ಪ ಮುಧೋಳ ಶಾಲೆಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳ ಸಮಸ್ಯೆಯನ್ನು ಆಲಿಸಿದರು.</p>.<p>ಬಳಿಕ ನನಗೆ ಭಯ ಹಾಗೂ ಆತಂಕ ಇದೆ ಎಂದು ಶಾಲೆಯ ಶಿಕ್ಷಕರೊಬ್ಬರು ತಿಳಿಸಿದ್ದರಿಂದಾಗಿ ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ತಕ್ಷಣಕ್ಕೆ ಬೇರೊಬ್ಬ ಶಿಕ್ಷಕರನ್ನು ಈ ಶಾಲೆಗೆ ಕಳಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಶಾಲೆಯಲ್ಲಿ ಸುಮಾರು 35 ಮಕ್ಕಳು ತರಗತಿಗೆ ಹಾಜರಾಗಿದ್ದರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲುರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ತಾಲ್ಲೂಕಿನ ರೇವು ನಾಯಕ ತಾಂಡಾದಲ್ಲಿ ಶಾಲಾ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೊಡೇಕಲ್ಲ ಠಾಣೆಯಲ್ಲಿ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ರೇವು ನಾಯಕ ತಾಂಡಾದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದೆ. ಈ ಶಾಲೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ಬೋಧನೆಯಲ್ಲಿ ತೊಡಗಿದಾಗ ಕಿಡಿಗೇಡಿಗಳು ಶಾಲಾ ಕೊಠಡಿ ಪ್ರವೇಶಿಸಿ ಶಿಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಪಾಠದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೂ ಕೆಲ ಪ್ರಶ್ನೆಗಳನ್ನು ಕೇಳಿ ಬೈದಿದ್ದಾರೆ ಎಂದು ಶಾಲೆಯ ಶಿಕ್ಷಕರು ಕೊಡೇಕಲ್ಲ ಠಾಣೆಗೆ ದೂರು ನೀಡಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಯಾದಗಿರಿ ಎಸ್.ಪಿ ಪೃಥ್ವಿಕ್ ಶಂಕರ್ ಹಾಗೂ ಹುಣಸಗಿ ಸಿಪಿಐ ರವಿಕುಮಾರ ಪೊಲೀಸರೊಂದಿಗೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಆರೊಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೂ ಒಪ್ಪಿಸಲಾಗಿದೆ.</p>.<p>ಇನ್ನುಳಿದವರ ಪತ್ತೆಗೆ ಬಲೆ ಬೀಸಲಾಗಿದೆ. ಮಕ್ಕಳು ಹಾಗೂ ಪಾಲಕರು ಯಾವುದೇ ಆತಂಕ ಗೊಳ್ಳದಂತೆ ಪೊಲೀಸರು ಧೈರ್ಯ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆ ಎಂದಿನಂತೆ ನಡೆದಿದೆ.</p>.<p>ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಚನ್ನಬಸಪ್ಪ ಮುಧೋಳ ಶಾಲೆಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳ ಸಮಸ್ಯೆಯನ್ನು ಆಲಿಸಿದರು.</p>.<p>ಬಳಿಕ ನನಗೆ ಭಯ ಹಾಗೂ ಆತಂಕ ಇದೆ ಎಂದು ಶಾಲೆಯ ಶಿಕ್ಷಕರೊಬ್ಬರು ತಿಳಿಸಿದ್ದರಿಂದಾಗಿ ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ತಕ್ಷಣಕ್ಕೆ ಬೇರೊಬ್ಬ ಶಿಕ್ಷಕರನ್ನು ಈ ಶಾಲೆಗೆ ಕಳಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಶಾಲೆಯಲ್ಲಿ ಸುಮಾರು 35 ಮಕ್ಕಳು ತರಗತಿಗೆ ಹಾಜರಾಗಿದ್ದರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲುರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>