<p><strong>ವಡಗೇರಾ: </strong>ವಿದ್ಯಾರ್ಥಿಗಳು ಪಾಠಗಳನ್ನು ಕೇಳುವುದರ ಜೊತೆಗೆ ಪ್ರಾಯೋಗಿಕವಾಗಿ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬೇಕು ಎಂದು ವಿಜ್ಞಾನ ಸಂವಹನಕಾರ ಸಾಬಣ್ಣ ಭೋಸ್ಗಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ತಾಲ್ಲೂಕಿನ ಹೈಯಾಳ (ಬಿ) ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಬುರ್ಗಿ ಜಿಲ್ಲಾ ವಿಜ್ಞಾನ ಕೇಂದ್ರ ಮತ್ತು ರಾಷ್ಟ್ರೀಯ ವಸ್ತು ಸಂಗ್ರಹಾಲಯ ಸಹಯೋಗದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಾತನಾಡಿದರು.</p>.<p>ಸಂಚಾರಿ ವಾಹನದ ಮೂಲಕ ಪ್ರತಿಯೊಂದು ಶಾಲೆಯ ಮಕ್ಕಳಿಗೆ ವಿಜ್ಞಾನ ವಸ್ತು ಪ್ರದರ್ಶನ ನೀಡುವ ಕಾರ್ಯಕ್ರಮ ಇದಾಗಿದೆ.</p>.<p>ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ನೀರಿನಿಂದ ಬರುವ ಕಾಯಿಲೆಗಳು, ಭೂಮಿಯ ಮೇಲೆ ನೀರಿನ ಪ್ರಮಾಣ, ಮಾನವನ ದೇಹದಲ್ಲಿ ನೀರಿನ ಪ್ರಮಾಣ ಕುರಿತು ಮಾಹಿತಿ ನೀಡಿದರು. ರಸಾಯನಶಾಸ್ತ್ರದ ಆವರ್ತಕ ಕೋಷ್ಟಕ, ಮಿಶ್ರಲೋಹಗಳು, ರಾಸಾಯನಿಕ ಅಯಾನುಗಳು, ಬ್ಯಾಟರಿ, ಹೈಡ್ರೋಜನ್ ಮೌಲ್ಯ, ಚಂದ್ರಯಾನ 1& 2, ಆಹಾರ ಸಂರಕ್ಷಣೆ, ಮಾನವನ ಭಾವನೆಗಳು, ರಾಸಾಯನಿಕ ಚಕ್ರ ಕುರಿತು ತಿಳಿಸಿಕೊಟ್ಟರು.</p>.<p>ವಿದ್ಯಾರ್ಥಿಗಳು ದೂರದರ್ಶಕದ ಸಹಾಯದಿಂದ ಶುಕ್ರ ಗ್ರಹದ ಹಾಗೂ ಚಂದ್ರನ ವೀಕ್ಷಣೆ ಮಾಡಿದರು. ನಾಗೇಶ ಪಾಟೀಲ, ಗದಿಗಯ್ಯ ಸ್ವಾಮಿ, ಬ್ರಹ್ಮಾನಂದ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ: </strong>ವಿದ್ಯಾರ್ಥಿಗಳು ಪಾಠಗಳನ್ನು ಕೇಳುವುದರ ಜೊತೆಗೆ ಪ್ರಾಯೋಗಿಕವಾಗಿ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬೇಕು ಎಂದು ವಿಜ್ಞಾನ ಸಂವಹನಕಾರ ಸಾಬಣ್ಣ ಭೋಸ್ಗಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ತಾಲ್ಲೂಕಿನ ಹೈಯಾಳ (ಬಿ) ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಬುರ್ಗಿ ಜಿಲ್ಲಾ ವಿಜ್ಞಾನ ಕೇಂದ್ರ ಮತ್ತು ರಾಷ್ಟ್ರೀಯ ವಸ್ತು ಸಂಗ್ರಹಾಲಯ ಸಹಯೋಗದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಾತನಾಡಿದರು.</p>.<p>ಸಂಚಾರಿ ವಾಹನದ ಮೂಲಕ ಪ್ರತಿಯೊಂದು ಶಾಲೆಯ ಮಕ್ಕಳಿಗೆ ವಿಜ್ಞಾನ ವಸ್ತು ಪ್ರದರ್ಶನ ನೀಡುವ ಕಾರ್ಯಕ್ರಮ ಇದಾಗಿದೆ.</p>.<p>ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ನೀರಿನಿಂದ ಬರುವ ಕಾಯಿಲೆಗಳು, ಭೂಮಿಯ ಮೇಲೆ ನೀರಿನ ಪ್ರಮಾಣ, ಮಾನವನ ದೇಹದಲ್ಲಿ ನೀರಿನ ಪ್ರಮಾಣ ಕುರಿತು ಮಾಹಿತಿ ನೀಡಿದರು. ರಸಾಯನಶಾಸ್ತ್ರದ ಆವರ್ತಕ ಕೋಷ್ಟಕ, ಮಿಶ್ರಲೋಹಗಳು, ರಾಸಾಯನಿಕ ಅಯಾನುಗಳು, ಬ್ಯಾಟರಿ, ಹೈಡ್ರೋಜನ್ ಮೌಲ್ಯ, ಚಂದ್ರಯಾನ 1& 2, ಆಹಾರ ಸಂರಕ್ಷಣೆ, ಮಾನವನ ಭಾವನೆಗಳು, ರಾಸಾಯನಿಕ ಚಕ್ರ ಕುರಿತು ತಿಳಿಸಿಕೊಟ್ಟರು.</p>.<p>ವಿದ್ಯಾರ್ಥಿಗಳು ದೂರದರ್ಶಕದ ಸಹಾಯದಿಂದ ಶುಕ್ರ ಗ್ರಹದ ಹಾಗೂ ಚಂದ್ರನ ವೀಕ್ಷಣೆ ಮಾಡಿದರು. ನಾಗೇಶ ಪಾಟೀಲ, ಗದಿಗಯ್ಯ ಸ್ವಾಮಿ, ಬ್ರಹ್ಮಾನಂದ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>