<p><strong>ಶಹಾಪುರ</strong>: ಅಭಿವೃದ್ಧಿ ನೆಪದಲ್ಲಿ ಎಂಟು ವರ್ಷಗಳ ಹಿಂದೆ ಒಡೆದು ಹಾಕಲಾದ ನಗರದ ಹಳೆಯ ತಹಶೀಲ್ದಾರ್ ಕಚೇರಿಯ ಕಟ್ಟಡದ ಜಾಗದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಆಗದೇ ಜಾಗಕ್ಕೆ ಗ್ರಹಣ ಹಿಡಿದಂತಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿಬರುತ್ತಿವೆ.</p>.<p>ಕಳೆದ ವರ್ಷ ಇದೇ ಜಾಗದಲ್ಲಿ ತಾಯಿ ಮಕ್ಕಳ ಆರೋಗ್ಯ ಕೇಂದ್ರ ಕಟ್ಟಡ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಆದರೆ, ಈಗ ಅದನ್ನು ನಗರದ ಸರ್ಕಾರಿ ಆಸ್ಪತ್ರೆಯ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಇದರಿಂದ ಹಳೆಯ ತಹಶೀಲ್ದಾರ್ ಕಟ್ಟಡ ಯಥಾಸ್ಥಿತಿ ಪಾಳುಬೀಳುವಂತಾಗಿದೆ.</p>.<p>‘ಅಂದಿನ ಶಾಸಕ ಗುರು ಪಾಟೀಲ ಶಿರವಾಳ ಅವರು 2017ರ ಚುನಾವಣೆಯ ಸಂದರ್ಭದಲ್ಲಿ ಹಳೆಯ ತಹಶೀಲ್ದಾರ್ ಕಟ್ಟಡದಲ್ಲಿದ್ದ ಉಪನೋಂದಣಿ ಕಚೇರಿಯನ್ನು ತೆರವುಗೊಳಿಸಿ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಿದ್ದರು. ಜೊತೆಗೆ ತರಾತುರಿಯಲ್ಲಿ ಕಟ್ಟಡ ಒಡೆಸಿಹಾಕಿದ್ದರು. ಗೋಡೆಗಳು ಚೆನ್ನಾಗಿ ಇವೆ ಎಂದು ಹೊಸದಾಗಿ ₹3 ಕೋಟಿ ವೆಚ್ಚದಲ್ಲಿ ಮೊದಲ ಮಹಡಿ ನಿರ್ಮಿಸಲು ಭೂ ಸೇನಾ ನಿಗಮಕ್ಕೆ ಕಾಮಗಾರಿ ಒಪ್ಪಿಸಿದ್ದರು. ಆದರೆ, ಅನುದಾನ ಬರಲಿಲ್ಲ. ಕಾಮಗಾರಿ ನನೆಗುದಿಗೆ ಬಿತ್ತು’ ಎನ್ನುತ್ತಾರೆ ರೈತ ಮುಖಂಡ ಅಶೋಕ ಮಲ್ಲಾಬಾದಿ.</p>.<p>ನಂತರ ಹಳೆಯ ತಹಶೀಲ್ದಾರ್ ಕಟ್ಟಡ ಜಾಗದಲ್ಲಿ ಕೆಕೆಆರ್ಡಿಬಿ ಅನುದಾನ ಅಡಿಯಲ್ಲಿ ₹17 ಕೋಟಿ ವೆಚ್ಚದಲ್ಲಿ ತಾಯಿ ಮಕ್ಕಳ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಮುಂದಾಗಲಾಗಿತ್ತು. ಇನ್ನೇನು ಕೆಲ ದಿನಗಳಲ್ಲಿ ಕಟ್ಟಡಕ್ಕೆ ಅಡಿಗಲ್ಲು ಹಾಕಬೇಕು ಅನ್ನುವಷ್ಟರಲ್ಲಿ ಮತ್ತೊಂದು ವಿಘ್ನ ಎದುರಾಯಿತು. ಆರೋಗ್ಯ ಇಲಾಖೆಯು ಕಟ್ಟಡ ನಿರ್ಮಾಣಕ್ಕೆ ಕೊಕ್ಕೆ ಹಾಕಿ, ಆರೋಗ್ಯ ಕೇಂದ್ರವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಲು ಸೂಚಿಸಿತು. ಅದರಂತೆ ಕಟ್ಟಡವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಅವರು ಈಚೆಗೆ ಬಹಿರಂಗಪಡಿಸಿದ್ದಾರೆ.</p>.<p>ಪ್ರಜಾಸೌಧಕ್ಕೂ ಗೊಂದಲ: ‘ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ₹17 ಕೋಟಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿತ್ತು. ಆಗ ಕೆಲ ಸಂಘಟನೆಗಳು ಹಾಗೂ ರಾಜಕೀಯ ಮುಖಂಡರು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗುತ್ತದೆ ಎಂದು ತಕರಾರು ತೆಗೆದು ಧರಣಿ ನಡೆಸಿದಾಗ ಸಚಿವರು ಪ್ರಜಾಸೌಧ ಬೇರೆಡೆ ನಿರ್ಮಿಸುವುದಾಗಿ ಪ್ರಕಟಿಸಿದರು. ಆದರೆ ಇಂದಿಗೂ ಪ್ರಜಾಸೌಧ ನಿರ್ಮಾಣದ ಜಾಗ ನಿರ್ಧರಿಸಿಲ್ಲ. ಸಾರ್ವಜನಿಕರಲ್ಲಿ ಗೊಂದಲ ಮುಂದುವರಿದಿದೆ. ಹೀಗೆ ಯಾವುದೇ ನಿರ್ಧಾರಗಳನ್ನು ಸರಿಯಾಗಿ ತೆಗೆದುಕೊಳ್ಳುತ್ತಿಲ್ಲ’ ಎಂದು ದೂರುತ್ತಾರೆ ನಗರದ ನಿವಾಸಿ ಬಸವರಾಜ.</p>.<p>ಅಭಿವೃದ್ಧಿಯ ಬರದಲ್ಲಿ ಕಟ್ಟಡ ಒಡೆದು ಹಾಕಿ ಉಪನೋಂದಣಿ ಕಚೇರಿ ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿರುವುದು ಎಷ್ಟು ಸರಿ? ಪ್ರತಿ ತಿಂಗಳು ಸುಮಾರು ₹80 ಸಾವಿರ ಬಾಡಿಗೆ ನೀಡುತ್ತಿರುವುದರಿಂದ ಸಾರ್ವಜನಿಕರ ಹಣ ಪೋಲಾಗುತ್ತಿದೆ. ಮುಂದಾಲೋಚನೆ ಇಲ್ಲದೆ ತೆಗೆದುಕೊಂಡ ತೀರ್ಮಾನಗಳು ಅಭಿವೃದ್ಧಿಯು ಹಿಮ್ಮುಖವಾಗಿ ಚಲಿಸುವಂತೆ ಆಗಿದೆ ಎನ್ನುತ್ತಾರೆ ನಗರದ ಜನತೆ.</p><p>---</p>.<p><strong>ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದುಕೊಳ್ಳದೆ ಬೇಕಾಬಿಟ್ಟಿಯಾಗಿ ತೆಗೆದುಕೊಂಡ ನಿರ್ಧಾರದಿಂದ ಕಟ್ಟಡ ಕಾಮಗಾರಿ ರದ್ದಾಗಿರುವುದು ಬೇಸರ ತಂದಿದೆ. ಜನಪ್ರತಿನಿಧಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ಅನವಶ್ಯಕವಾಗಿ ಜನರ ತೆರಿಗೆ ಹಣ ಪೋಲು ಮಾಡಬಾರದು</strong></p><p><strong>-ಚೆನ್ನಪ್ಪ ಆನೇಗುಂದಿ ಸಿಪಿಐ(ಎಂ) ಜಿಲ್ಲಾ ಘಟಕದ ಅಧ್ಯಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ಅಭಿವೃದ್ಧಿ ನೆಪದಲ್ಲಿ ಎಂಟು ವರ್ಷಗಳ ಹಿಂದೆ ಒಡೆದು ಹಾಕಲಾದ ನಗರದ ಹಳೆಯ ತಹಶೀಲ್ದಾರ್ ಕಚೇರಿಯ ಕಟ್ಟಡದ ಜಾಗದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಆಗದೇ ಜಾಗಕ್ಕೆ ಗ್ರಹಣ ಹಿಡಿದಂತಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿಬರುತ್ತಿವೆ.</p>.<p>ಕಳೆದ ವರ್ಷ ಇದೇ ಜಾಗದಲ್ಲಿ ತಾಯಿ ಮಕ್ಕಳ ಆರೋಗ್ಯ ಕೇಂದ್ರ ಕಟ್ಟಡ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಆದರೆ, ಈಗ ಅದನ್ನು ನಗರದ ಸರ್ಕಾರಿ ಆಸ್ಪತ್ರೆಯ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಇದರಿಂದ ಹಳೆಯ ತಹಶೀಲ್ದಾರ್ ಕಟ್ಟಡ ಯಥಾಸ್ಥಿತಿ ಪಾಳುಬೀಳುವಂತಾಗಿದೆ.</p>.<p>‘ಅಂದಿನ ಶಾಸಕ ಗುರು ಪಾಟೀಲ ಶಿರವಾಳ ಅವರು 2017ರ ಚುನಾವಣೆಯ ಸಂದರ್ಭದಲ್ಲಿ ಹಳೆಯ ತಹಶೀಲ್ದಾರ್ ಕಟ್ಟಡದಲ್ಲಿದ್ದ ಉಪನೋಂದಣಿ ಕಚೇರಿಯನ್ನು ತೆರವುಗೊಳಿಸಿ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಿದ್ದರು. ಜೊತೆಗೆ ತರಾತುರಿಯಲ್ಲಿ ಕಟ್ಟಡ ಒಡೆಸಿಹಾಕಿದ್ದರು. ಗೋಡೆಗಳು ಚೆನ್ನಾಗಿ ಇವೆ ಎಂದು ಹೊಸದಾಗಿ ₹3 ಕೋಟಿ ವೆಚ್ಚದಲ್ಲಿ ಮೊದಲ ಮಹಡಿ ನಿರ್ಮಿಸಲು ಭೂ ಸೇನಾ ನಿಗಮಕ್ಕೆ ಕಾಮಗಾರಿ ಒಪ್ಪಿಸಿದ್ದರು. ಆದರೆ, ಅನುದಾನ ಬರಲಿಲ್ಲ. ಕಾಮಗಾರಿ ನನೆಗುದಿಗೆ ಬಿತ್ತು’ ಎನ್ನುತ್ತಾರೆ ರೈತ ಮುಖಂಡ ಅಶೋಕ ಮಲ್ಲಾಬಾದಿ.</p>.<p>ನಂತರ ಹಳೆಯ ತಹಶೀಲ್ದಾರ್ ಕಟ್ಟಡ ಜಾಗದಲ್ಲಿ ಕೆಕೆಆರ್ಡಿಬಿ ಅನುದಾನ ಅಡಿಯಲ್ಲಿ ₹17 ಕೋಟಿ ವೆಚ್ಚದಲ್ಲಿ ತಾಯಿ ಮಕ್ಕಳ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಮುಂದಾಗಲಾಗಿತ್ತು. ಇನ್ನೇನು ಕೆಲ ದಿನಗಳಲ್ಲಿ ಕಟ್ಟಡಕ್ಕೆ ಅಡಿಗಲ್ಲು ಹಾಕಬೇಕು ಅನ್ನುವಷ್ಟರಲ್ಲಿ ಮತ್ತೊಂದು ವಿಘ್ನ ಎದುರಾಯಿತು. ಆರೋಗ್ಯ ಇಲಾಖೆಯು ಕಟ್ಟಡ ನಿರ್ಮಾಣಕ್ಕೆ ಕೊಕ್ಕೆ ಹಾಕಿ, ಆರೋಗ್ಯ ಕೇಂದ್ರವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಲು ಸೂಚಿಸಿತು. ಅದರಂತೆ ಕಟ್ಟಡವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಅವರು ಈಚೆಗೆ ಬಹಿರಂಗಪಡಿಸಿದ್ದಾರೆ.</p>.<p>ಪ್ರಜಾಸೌಧಕ್ಕೂ ಗೊಂದಲ: ‘ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ₹17 ಕೋಟಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿತ್ತು. ಆಗ ಕೆಲ ಸಂಘಟನೆಗಳು ಹಾಗೂ ರಾಜಕೀಯ ಮುಖಂಡರು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗುತ್ತದೆ ಎಂದು ತಕರಾರು ತೆಗೆದು ಧರಣಿ ನಡೆಸಿದಾಗ ಸಚಿವರು ಪ್ರಜಾಸೌಧ ಬೇರೆಡೆ ನಿರ್ಮಿಸುವುದಾಗಿ ಪ್ರಕಟಿಸಿದರು. ಆದರೆ ಇಂದಿಗೂ ಪ್ರಜಾಸೌಧ ನಿರ್ಮಾಣದ ಜಾಗ ನಿರ್ಧರಿಸಿಲ್ಲ. ಸಾರ್ವಜನಿಕರಲ್ಲಿ ಗೊಂದಲ ಮುಂದುವರಿದಿದೆ. ಹೀಗೆ ಯಾವುದೇ ನಿರ್ಧಾರಗಳನ್ನು ಸರಿಯಾಗಿ ತೆಗೆದುಕೊಳ್ಳುತ್ತಿಲ್ಲ’ ಎಂದು ದೂರುತ್ತಾರೆ ನಗರದ ನಿವಾಸಿ ಬಸವರಾಜ.</p>.<p>ಅಭಿವೃದ್ಧಿಯ ಬರದಲ್ಲಿ ಕಟ್ಟಡ ಒಡೆದು ಹಾಕಿ ಉಪನೋಂದಣಿ ಕಚೇರಿ ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿರುವುದು ಎಷ್ಟು ಸರಿ? ಪ್ರತಿ ತಿಂಗಳು ಸುಮಾರು ₹80 ಸಾವಿರ ಬಾಡಿಗೆ ನೀಡುತ್ತಿರುವುದರಿಂದ ಸಾರ್ವಜನಿಕರ ಹಣ ಪೋಲಾಗುತ್ತಿದೆ. ಮುಂದಾಲೋಚನೆ ಇಲ್ಲದೆ ತೆಗೆದುಕೊಂಡ ತೀರ್ಮಾನಗಳು ಅಭಿವೃದ್ಧಿಯು ಹಿಮ್ಮುಖವಾಗಿ ಚಲಿಸುವಂತೆ ಆಗಿದೆ ಎನ್ನುತ್ತಾರೆ ನಗರದ ಜನತೆ.</p><p>---</p>.<p><strong>ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದುಕೊಳ್ಳದೆ ಬೇಕಾಬಿಟ್ಟಿಯಾಗಿ ತೆಗೆದುಕೊಂಡ ನಿರ್ಧಾರದಿಂದ ಕಟ್ಟಡ ಕಾಮಗಾರಿ ರದ್ದಾಗಿರುವುದು ಬೇಸರ ತಂದಿದೆ. ಜನಪ್ರತಿನಿಧಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ಅನವಶ್ಯಕವಾಗಿ ಜನರ ತೆರಿಗೆ ಹಣ ಪೋಲು ಮಾಡಬಾರದು</strong></p><p><strong>-ಚೆನ್ನಪ್ಪ ಆನೇಗುಂದಿ ಸಿಪಿಐ(ಎಂ) ಜಿಲ್ಲಾ ಘಟಕದ ಅಧ್ಯಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>